ಡಿಕೆ ಶಿವಕುಮಾರ್ 
ರಾಜಕೀಯ

ನನಗೆ ಮುಖ್ಯಮಂತ್ರಿಯಾಗುವ ಅವಕಾಶ ಕೊಡಿ, ಜೆಡಿಎಸ್ ಅಧಿಕಾರಕ್ಕೆ ಬರಲ್ಲ: ಡಿಕೆ ಶಿವಕುಮಾರ್ ಭಾವನಾತ್ಮಕ ಮನವಿ

ರಾಜ್ಯದಲ್ಲಿ ಕಾಡುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಂಗಳವಾರ ಮತದಾರರಲ್ಲಿ ಭಾವನಾತ್ಮಕ ಮನವಿ ಮಾಡಿದರು.

ಮೈಸೂರು: ರಾಜ್ಯದಲ್ಲಿ ಕಾಡುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಂಗಳವಾರ ಮತದಾರರಲ್ಲಿ ಭಾವನಾತ್ಮಕ ಮನವಿ ಮಾಡಿದರು.

'ನಾನು ನಿನ್ನ ಮಗ. ಜೆಡಿಎಸ್‌ಗೆ ಈಗಾಗಲೇ ಅವಕಾಶ ನೀಡಿದ್ದೀರಿ. ಈ ಚುನಾವಣೆಯಲ್ಲಿ ನನಗೂ ಅವಕಾಶ ನೀಡಬೇಕು. ಜನತಾದಳ (ಜಾತ್ಯತೀತ) ಅಧಿಕಾರಕ್ಕೆ ಬರುವುದಿಲ್ಲ, ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದನ್ನು ತಡೆಯಲು ಅದರ ಬೆಂಬಲಿಗರು ಕಾಂಗ್ರೆಸ್‌ಗೆ ಬೆಂಬಲ ನೀಡಬೇಕು ' ಎಂದು ಮತದಾರರಲ್ಲಿ ಮನವಿ ಮಾಡಿದರು.

ಶ್ರೀರಂಗಪಟ್ಟಣದಲ್ಲಿ ಪಕ್ಷದ ಪ್ರಜಾಧ್ವನಿ ಯಾತ್ರೆಯಲ್ಲಿ ಮಾತನಾಡಿದ ಅವರು, ಅತಂತ್ರ ವಿಧಾನಸಭೆಯನ್ನು ತಡೆಯಲು ಮತ್ತು ಜೆಡಿಎಸ್‌ಗೆ ಬಿಜೆಪಿ ಬೆಂಬಲ ನೀಡಿ ಅಧಿಕಾರ ಅನುಭವಿಸುವುದನ್ನು ತಡೆಯಲು ಕಾಂಗ್ರೆಸ್ ಪಣ ತೊಟ್ಟಿದೆ. ಮಂಡ್ಯ ಜಿಲ್ಲೆ ಏಳು ಕ್ಷೇತ್ರಗಳ ಕಾಂಗ್ರೆಸ್ ಶಾಸಕರನ್ನು ಮರಳಿ ಕಣಕ್ಕಿಳಿಸುವ ಮೂಲಕ ಇತಿಹಾಸ ಸೃಷ್ಟಿಸಲಿದೆ ಎಂದು ಪ್ರತಿಪಾದಿಸಿದರು. 

ಕಳೆದ ಚುನಾವಣೆಯಲ್ಲಿ ಎಲ್ಲ ಏಳು ಶಾಸಕರು ಜೆಡಿಎಸ್‌ನವರೇ ಆಗಿದ್ದರೂ ಜಿಲ್ಲೆಯಲ್ಲಿ ಯಾವುದೇ ಬದಲಾವಣೆ ತರುವಲ್ಲಿ ವಿಫಲರಾಗಿದ್ದರು. ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ನಿರ್ಮಾಣದ ನಂತರ ತಮ್ಮ ಜೀವನೋಪಾಯವನ್ನು ಕಳೆದುಕೊಂಡಿರುವ ನೂರಾರು ವ್ಯಾಪಾರಿಗಳು ಮತ್ತು ಉದ್ಯಮಿಗಳ ದುಃಸ್ಥಿತಿ ವಿರುದ್ಧ ದನಿ ಏರಿಸಲು ಶಾಸಕರು ಏಕೆ ವಿಫಲರಾದರು? ತೀವ್ರ ಸಂಕಷ್ಟದಲ್ಲಿರುವ ರೈತರ ರಕ್ಷಣೆಗೆ ಏಕೆ ಮುಂದಾಗಿಲ್ಲ ಎಂದು ಪ್ರಶ್ನಿಸಿದರು.

ಬೆಲೆ ಏರಿಕೆ ಮತ್ತು ಇತರ ಸಮಸ್ಯೆಗಳಿಂದ ಹೆಚ್ಚು ಹಾನಿಗೊಳಗಾದ ಜನರನ್ನು ರಕ್ಷಿಸಲು ಕಾಂಗ್ರೆಸ್ ನಾಲ್ಕು ಭರವಸೆಗಳನ್ನು ನೀಡಿದೆ. ಭ್ರಷ್ಟಾಚಾರವನ್ನು ಕೊನೆಗಾಣಿಸುವ ಮೂಲಕ 50,000 ಕೋಟಿ ರೂಪಾಯಿ ವೆಚ್ಚ ಮಾಡುವ ನಮ್ಮ ಭರವಸೆಗಳನ್ನು ಈಡೇರಿಸಲು ನಾವು ಬದ್ಧರಾಗಿದ್ದೇವೆ ಎಂದು ತಿಳಿಸಿದರು.

ಪಕ್ಷವು 200 ಯೂನಿಟ್ ಉಚಿತ ವಿದ್ಯುತ್, ಪ್ರತಿ ಕುಟುಂಬದ ಮುಖ್ಯಸ್ಥ ಮಹಿಳೆಯರಿಗೆ ಪ್ರತಿ ತಿಂಗಳು 2,000 ರೂ., ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿ ಮತ್ತು ನಿರುದ್ಯೋಗಿ ಯುವಕರಿಗೆ 3,000 ರೂ. ನೀಡುವ ಭರವಸೆಯನ್ನು ಕಾಂಗ್ರೆಸ್ ನೀಡಿದೆ. 

ಬಿಜೆಪಿ ಮುಖಂಡರಾದ ಸಿ.ಟಿ. ರವಿ ಮತ್ತು ಡಾ. ಸಿ.ಎನ್. ಅಶ್ವತ್ಥ್ ನಾರಾಯಣ ಅವರು ಟಿಪ್ಪು ಸುಲ್ತಾನ್ ಸಾವಿನ ಬಗ್ಗೆ ಒಕ್ಕಲಿಗ ಸಮುದಾಯದ ಮಾನಹಾನಿ ಮಾಡಲು ಪ್ರಯತ್ನಿಸಿದರು. ಆದರೆ, ಅವರನ್ನು ಸಮಾಜದ ಮುಖಂಡರು ತಡೆದರು ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT