ಡಿಕೆ ಶಿವಕುಮಾರ್ 
ರಾಜಕೀಯ

ನನಗೆ ಮುಖ್ಯಮಂತ್ರಿಯಾಗುವ ಅವಕಾಶ ಕೊಡಿ, ಜೆಡಿಎಸ್ ಅಧಿಕಾರಕ್ಕೆ ಬರಲ್ಲ: ಡಿಕೆ ಶಿವಕುಮಾರ್ ಭಾವನಾತ್ಮಕ ಮನವಿ

ರಾಜ್ಯದಲ್ಲಿ ಕಾಡುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಂಗಳವಾರ ಮತದಾರರಲ್ಲಿ ಭಾವನಾತ್ಮಕ ಮನವಿ ಮಾಡಿದರು.

ಮೈಸೂರು: ರಾಜ್ಯದಲ್ಲಿ ಕಾಡುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಂಗಳವಾರ ಮತದಾರರಲ್ಲಿ ಭಾವನಾತ್ಮಕ ಮನವಿ ಮಾಡಿದರು.

'ನಾನು ನಿನ್ನ ಮಗ. ಜೆಡಿಎಸ್‌ಗೆ ಈಗಾಗಲೇ ಅವಕಾಶ ನೀಡಿದ್ದೀರಿ. ಈ ಚುನಾವಣೆಯಲ್ಲಿ ನನಗೂ ಅವಕಾಶ ನೀಡಬೇಕು. ಜನತಾದಳ (ಜಾತ್ಯತೀತ) ಅಧಿಕಾರಕ್ಕೆ ಬರುವುದಿಲ್ಲ, ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದನ್ನು ತಡೆಯಲು ಅದರ ಬೆಂಬಲಿಗರು ಕಾಂಗ್ರೆಸ್‌ಗೆ ಬೆಂಬಲ ನೀಡಬೇಕು ' ಎಂದು ಮತದಾರರಲ್ಲಿ ಮನವಿ ಮಾಡಿದರು.

ಶ್ರೀರಂಗಪಟ್ಟಣದಲ್ಲಿ ಪಕ್ಷದ ಪ್ರಜಾಧ್ವನಿ ಯಾತ್ರೆಯಲ್ಲಿ ಮಾತನಾಡಿದ ಅವರು, ಅತಂತ್ರ ವಿಧಾನಸಭೆಯನ್ನು ತಡೆಯಲು ಮತ್ತು ಜೆಡಿಎಸ್‌ಗೆ ಬಿಜೆಪಿ ಬೆಂಬಲ ನೀಡಿ ಅಧಿಕಾರ ಅನುಭವಿಸುವುದನ್ನು ತಡೆಯಲು ಕಾಂಗ್ರೆಸ್ ಪಣ ತೊಟ್ಟಿದೆ. ಮಂಡ್ಯ ಜಿಲ್ಲೆ ಏಳು ಕ್ಷೇತ್ರಗಳ ಕಾಂಗ್ರೆಸ್ ಶಾಸಕರನ್ನು ಮರಳಿ ಕಣಕ್ಕಿಳಿಸುವ ಮೂಲಕ ಇತಿಹಾಸ ಸೃಷ್ಟಿಸಲಿದೆ ಎಂದು ಪ್ರತಿಪಾದಿಸಿದರು. 

ಕಳೆದ ಚುನಾವಣೆಯಲ್ಲಿ ಎಲ್ಲ ಏಳು ಶಾಸಕರು ಜೆಡಿಎಸ್‌ನವರೇ ಆಗಿದ್ದರೂ ಜಿಲ್ಲೆಯಲ್ಲಿ ಯಾವುದೇ ಬದಲಾವಣೆ ತರುವಲ್ಲಿ ವಿಫಲರಾಗಿದ್ದರು. ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ನಿರ್ಮಾಣದ ನಂತರ ತಮ್ಮ ಜೀವನೋಪಾಯವನ್ನು ಕಳೆದುಕೊಂಡಿರುವ ನೂರಾರು ವ್ಯಾಪಾರಿಗಳು ಮತ್ತು ಉದ್ಯಮಿಗಳ ದುಃಸ್ಥಿತಿ ವಿರುದ್ಧ ದನಿ ಏರಿಸಲು ಶಾಸಕರು ಏಕೆ ವಿಫಲರಾದರು? ತೀವ್ರ ಸಂಕಷ್ಟದಲ್ಲಿರುವ ರೈತರ ರಕ್ಷಣೆಗೆ ಏಕೆ ಮುಂದಾಗಿಲ್ಲ ಎಂದು ಪ್ರಶ್ನಿಸಿದರು.

ಬೆಲೆ ಏರಿಕೆ ಮತ್ತು ಇತರ ಸಮಸ್ಯೆಗಳಿಂದ ಹೆಚ್ಚು ಹಾನಿಗೊಳಗಾದ ಜನರನ್ನು ರಕ್ಷಿಸಲು ಕಾಂಗ್ರೆಸ್ ನಾಲ್ಕು ಭರವಸೆಗಳನ್ನು ನೀಡಿದೆ. ಭ್ರಷ್ಟಾಚಾರವನ್ನು ಕೊನೆಗಾಣಿಸುವ ಮೂಲಕ 50,000 ಕೋಟಿ ರೂಪಾಯಿ ವೆಚ್ಚ ಮಾಡುವ ನಮ್ಮ ಭರವಸೆಗಳನ್ನು ಈಡೇರಿಸಲು ನಾವು ಬದ್ಧರಾಗಿದ್ದೇವೆ ಎಂದು ತಿಳಿಸಿದರು.

ಪಕ್ಷವು 200 ಯೂನಿಟ್ ಉಚಿತ ವಿದ್ಯುತ್, ಪ್ರತಿ ಕುಟುಂಬದ ಮುಖ್ಯಸ್ಥ ಮಹಿಳೆಯರಿಗೆ ಪ್ರತಿ ತಿಂಗಳು 2,000 ರೂ., ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿ ಮತ್ತು ನಿರುದ್ಯೋಗಿ ಯುವಕರಿಗೆ 3,000 ರೂ. ನೀಡುವ ಭರವಸೆಯನ್ನು ಕಾಂಗ್ರೆಸ್ ನೀಡಿದೆ. 

ಬಿಜೆಪಿ ಮುಖಂಡರಾದ ಸಿ.ಟಿ. ರವಿ ಮತ್ತು ಡಾ. ಸಿ.ಎನ್. ಅಶ್ವತ್ಥ್ ನಾರಾಯಣ ಅವರು ಟಿಪ್ಪು ಸುಲ್ತಾನ್ ಸಾವಿನ ಬಗ್ಗೆ ಒಕ್ಕಲಿಗ ಸಮುದಾಯದ ಮಾನಹಾನಿ ಮಾಡಲು ಪ್ರಯತ್ನಿಸಿದರು. ಆದರೆ, ಅವರನ್ನು ಸಮಾಜದ ಮುಖಂಡರು ತಡೆದರು ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

SCROLL FOR NEXT