ಶಿವಮೊಗ್ಗ ಕಾಂಗ್ರೆಸ್ ವಾರ್ಡ್ ಅಧ್ಯಕ್ಷರ ಪ್ರತಿಜ್ಞೆ 
ರಾಜಕೀಯ

ಹೊರಗಿನವರಿಗೆ ಟಿಕೆಟ್ ನೀಡಿದರೆ ಸಾಮೂಹಿಕವಾಗಿ ರಾಜೀನಾಮೆ: ಶಿವಮೊಗ್ಗ ಕಾಂಗ್ರೆಸ್ ವಾರ್ಡ್ ಅಧ್ಯಕ್ಷರ ಎಚ್ಚರಿಕೆ

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಹೊರಗಿನವರಿಗೆ ಟಿಕೆಟ್ ನೀಡಿದರೆ ಸಾಮೂಹಿಕವಾಗಿ ರಾಜೀನಾಮೆ ನೀಡುವುದಾಗಿ ಶಿವಮೊಗ್ಗದ ವಿವಿಧ ವಾರ್ಡ್ಗಳ ಅಧ್ಯಕ್ಷರು ಎಚ್ಚರಿಕೆ ನೀಡಿದ್ದಾರೆ.

ಶಿವಮೊಗ್ಗ: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಹೊರಗಿನವರಿಗೆ ಟಿಕೆಟ್ ನೀಡಿದರೆ ಸಾಮೂಹಿಕವಾಗಿ ರಾಜೀನಾಮೆ ನೀಡುವುದಾಗಿ ಶಿವಮೊಗ್ಗದ ವಿವಿಧ ವಾರ್ಡ್ಗಳ ಅಧ್ಯಕ್ಷರು ಎಚ್ಚರಿಕೆ ನೀಡಿದ್ದಾರೆ.

ಈಗಾಗಲೇ ಕಾಂಗ್ರೆಸ್ ಪಕ್ಷ ವಿಧಾನಸಭಾ ಚುನಾವಣೆಗೆ ತನ್ನ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು ಎರಡನೇ ಪಟ್ಟಿಯ ಸಿದ್ಧತೆ ನಡೆದಿದೆ. ಹೀಗಿರುವಾಗಲೇ ಶಿವಮೊಗ್ಗದ ಕಾಂಗ್ರೆಸ್ ಪಕ್ಷದ ವಾರ್ಡ್ ಅಧ್ಯಕ್ಷರು ಸಭೆ ನಡೆಸಿದ್ದು, ಸಭೆಯಲ್ಲಿ ಹೊರಗಿನವರಿಗೆ ಟಿಕೆಟ್ ನೀಡದಂತೆ ಆಗ್ರಹಿಸಿದ್ದಾರೆ. 

ಅಲ್ಲದೆ ಒಂದು ವೇಳೆ ಕ್ಷೇತ್ರದ ಹೊರಗಿನವರಿಗೆ ಟಿಕೆಟ್ ನೀಡಿದರು ತಾವು ಅವರಿಗಾಗಿ ಕೆಲಸ ಮಾಡುವುದಿಲ್ಲ.. ಅಲ್ಲದೆ ನಾವು ನಮ್ಮ ಸ್ಥಾನಗಳಿಗೆ ರಾಜಿನಾಮೆ ನೀಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಟಿಕೆಟ್ ಹಂಚಿಕೆ ಮಾಡುತ್ತಿರುವ ಕಾಂಗ್ರೆಸ್ ಹೈಕಮಾಂಡ್ ವಾರ್ಡ್ ಅಧ್ಯಕ್ಷ ಒತ್ತಾಯವನ್ನು ಹೇಗೆ ಸ್ವೀಕರಿಸಲಿದೆ ಎಂಬುದನ್ನು ಕಾದು ನೋಡಬೇಕಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT