ಸಿಪಿ ಯೋಗೇಶ್ವರ್ ಮತ್ತು ಎಚ್.ಡಿ ಕುಮಾರಸ್ವಾಮಿ 
ರಾಜಕೀಯ

ಕುಮಾರಸ್ವಾಮಿ ಅವರ 'ಜಾತ್ಯಾತೀತ'ವೇ ಜಾತಿಗೆಟ್ಟಿದೆ: ಟ್ವಿಟರ್ ನಲ್ಲಿ ತೌಡು ಕುಟ್ಟಿದರೆ ಪುಡಿ ಸಹಾ ಉದುರೋಲ್ಲ; ಕಾಂಗ್ರೆಸ್-ಜೆಡಿಎಸ್ ಟ್ವೀಟ್ ವಾರ್

ರಾಜ್ಯವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳ ಆರೋಪ-ಪ್ರತ್ಯಾರೋಪ ತೀವ್ರಗೊಂಡಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಹೊಂದಾಣೆಕೆ ಮಾಡಿಕೊಂಡಿತ್ತು ಎಂಬ ಕಾಂಗ್ರೆಸ್ ಆರೋಪಕ್ಕೆ ಜೆಡಿಎಸ್ ತಿರುಗೇಟು ನೀಡಿದೆ.

ಬೆಂಗಳೂರು: ರಾಜ್ಯವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳ ಆರೋಪ-ಪ್ರತ್ಯಾರೋಪ ತೀವ್ರಗೊಂಡಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಹೊಂದಾಣೆಕೆ ಮಾಡಿಕೊಂಡಿತ್ತು ಎಂಬ ಕಾಂಗ್ರೆಸ್ ಆರೋಪಕ್ಕೆ ಜೆಡಿಎಸ್ ತಿರುಗೇಟು ನೀಡಿದೆ.

ಈ ಸಂಬಂಧ ಟ್ವಿಟ್ಟರ್ ವಾರ್ ಜೋರಾಗಿಯೇ ಇದೆ. ಜೆಡಿಎಸ್, ಬಿಜೆಪಿಯ ಕಳ್ಳಾಟದ ಅಸಲಿ ಕತೆಯನ್ನು ಸಿಪಿ ಯೋಗೀಶ್ವರ್ ಬಿಚ್ಚಿಟ್ಟಿದ್ದಾರೆ. ಡಿಯರ್ ಬಿಜೆಪಿ ಕರ್ನಾಟಕ, ಕದ್ದುಮುಚ್ಚಿ ಸಂಸಾರ ಮಾಡುವ ಬದಲು ನೇರವಾಗಿ ಸಂಸಾರ ಮಾಡುವ ಅಭ್ಯಾಸ ನಿಮಗೆ ಇಲ್ಲವೇಕೆ?! ಬಿಜೆಪಿಯೊಂದಿಗೆ ಅನೈತಿಕ ಸಖ್ಯ ಹೊಂದಿರುವ ಎಚ್.ಡಿ ಕುಮಾರಸ್ವಾಮಿ ಅವರೇ  ಅವರ 'ಜಾತ್ಯಾತೀತ'ವೇ ಜಾತಿಗೆಟ್ಟಿದೆ ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.

ಜೆಡಿಎಸ್‌ನದ್ದು ಜಾತಿಗೆಟ್ಟ ಜಾತ್ಯಾತೀತತೆ" ಎನ್ನುವ ನಿಜಸಂಗತಿ ಬಯಲಾಗಿದೆ. ಜೆಡಿಎಸ್‌ನೊಂದಿಗೆ ಒಳಮೈತ್ರಿ ಮಾಡಿಕೊಳ್ಳುವ ಬಿಜೆಪಿ ಕಳ್ಳ ಸಂಸಾರ ನಡೆಸುವ ಬದಲು ಬಹಿರಂಗವಾಗಿ ಮೈತ್ರಿ ಘೋಷಣೆ ಮಾಡಿಕೊಳ್ಳಲಿ. ಜೆಡಿಎಸ್ ಪಕ್ಷವು ಬಿಜೆಪಿ ಸರ್ಕಾರದ ಯಾವುದೇ ಭ್ರಷ್ಟಾಚಾರದ ವಿರುದ್ಧ ಮತನಾಡದಿರುವುದು ಕೂಡ ಈ ಒಳಮೈತ್ರಿಯ ಕಾರಣಕ್ಕಾಗಿಯೇ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಕಾಂಗ್ರೆಸ್ ಪಕ್ಷದ ಟ್ವೀಟ್ ಗೆ ತಿರುಗೇಟು ನೀಡಿರುವ ಜೆಡಿಎಸ್ , ಜಾತ್ಯತೀತ ಅನ್ನೋದನ್ನ ಸರಿಯಾಗಿ ಬರೆಯೋಕೂ ಬಾರದ ಈ ಅಧಮರಿಗೆ ಜಾತ್ಯತೀತೆಯ ಬಗ್ಗೆ ಮಾತನಾಡೋ ನೈತಿಕತೆ ಎಲ್ಲಿದೆ.? ಮುಸ್ಲಿಂಮರ ಮೀಸಲಾತಿಯನ್ನು ಬಿಜೆಪಿ ಪಕ್ಷ ಕಿತ್ತುಕೊಂಡರೂ ಸೊಲ್ಲೆತ್ತದ ನಿಮಗೆ ಈ ಬಾರಿ ಮುಸ್ಲಿಂಮರು ಸರಿಯಾಗಿ  ಬುದ್ದಿ ಕಲಿಸುತ್ತಾರೆ.

ಇನ್ನೂ ಚುನಾವಣೆ ಘೋಷಣೆಯೇ ಆಗಿಲ್ಲ ಆದರೂ ನಿಮ್ಮ ಪಕ್ಷದ ನಾಯಕರು ಹೆಚ್ ಡಿ ಕುಮಾರಸ್ವಾಮಿ ಅವರ ಮನೆ ಬಾಗಿಲು ತಟ್ಟುತ್ತಿದ್ದಾರೆ ಎನ್ನುವ ಸುದ್ದಿ ಮಾಧ್ಯಮಗಳಲ್ಲಿ ವರದಿಯಾಗಿದೆ, ಹೀಗಿರೋವಾಗ ನೀವು ಟ್ವಿಟರ್ ನಲ್ಲಿ ತೌಡು ಕುಟ್ಟಿದರೆ ಪುಡಿ ಸಹಾ ಉದುರುವುದಿಲ್ಲ ಎಂದು ಜೆಡಿಎಸ್ ತಪರಾಕಿ ಹಾಕಿದೆ.

ಕಾಂಗ್ರೆಸ್ ಶಾಸಕರನ್ನು ಬಿಜೆಪಿಗೆ ಗುಪ್ತವಾಗಿ ಕಳುಹಿಸಿ ಈಗ ಪುನಃ ವಾಪಸ್ ಕರೆಸಿಕೊಳ್ಳುತ್ತಿರುವ ನವರಂಗಿ ಸಿದ್ದಹಸ್ತರ ಆಟ ಇನ್ನು ಮುಂದೆ ರಾಜ್ಯದಲ್ಲಿ ನಡೆಯುವುದಿಲ್ಲ, ಕೋಲಾರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆ ಸಹಕಾರಿಯಾಗಿದ್ದು ಯಾವ ಬೀ ಟೀಂ ಎನ್ನುವುದನ್ನು ಹೇಳುವಿರಾ ಕಾಂಗಿಗಳೇ..?? ಎಂದು ಜೆಡಿಎಸ್ ಪ್ರಶ್ನಿಸಿದೆ.

ಕುಮಾರಸ್ವಾಮಿ ಅವರನ್ನು ಎದುರಿಸಲು ಮೆಗಾಸಿಟಿ ಯೋಗೀಶ್ವರನಿಗೆ ಗಾಳ ಹಾಕುತ್ತಿರುವ ನೀವು, ನಿಮ್ಮ ನಾಯಕರೇ ಕುತಂತ್ರದಿಂದ ಈ ಹೇಳಿಕೆಯನ್ನು ಯೋಗೀಶ್ವರ್ ಬಾಯಲ್ಲಿ ಹೇಳಿಸಿರೋದ್ರಲ್ಲಿ ಯಾವುದೇ ಅಚ್ಚರಿಯಿಲ್ಲ, ಇಂದೇ ಬರೆದಿಟ್ಟುಕೊಳ್ಳಿ ಈ ಬಾರಿ ಕನ್ನಡಿಗರ ಪರವಾದ ಜಾತ್ಯತೀತ ಸರ್ಕಾರ ರಚಿಸುವುದು ಜಾತ್ಯತೀತ ಜನತಾದಳವೇ ಹೊರತು ದೆಹಲಿ ಗುಲಾಮರಲ್ಲ ಎಂದು ಟ್ವೀಟ್ ಮಾಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT