ಬಿ ಎಸ್ ಯಡಿಯೂರಪ್ಪ 
ರಾಜಕೀಯ

ಚುನಾವಣೆ ದಿನಾಂಕ ಘೋಷಣೆ ಬೆನ್ನಲ್ಲೇ ಬಿಎಸ್ ಯಡಿಯೂರಪ್ಪ ತುರ್ತು ಸುದ್ದಿಗೋಷ್ಠಿ; ಎಲ್ಲರ ಚಿತ್ತ ಮಾಜಿ ಸಿಎಂ ಮಾತಿನತ್ತ!

ಕರ್ನಾಟಕದ ಪ್ರಬಲ ಲಿಂಗಾಯತ ಸಮುದಾಯದ ಮುಖಂಡ, ಬಿಜೆಪಿಯನ್ನು ದಕ್ಷಿಣ ಭಾರತದ ರಾಜ್ಯವೊಂದರಲ್ಲಿ ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಕಾರಣೀಭೂತರಾದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಇಂದು ಗುರುವಾರ ಬೆಳಗ್ಗೆ 11 ಗಂಟೆಗೆ ತುರ್ತು ಸುದ್ದಿಗೋಷ್ಠಿ ಕರೆದಿದ್ದಾರೆ. ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಯಲಿದೆ.

ಬೆಂಗಳೂರು: ಕರ್ನಾಟಕದ ಪ್ರಬಲ ಲಿಂಗಾಯತ ಸಮುದಾಯದ ಮುಖಂಡ, ಬಿಜೆಪಿಯನ್ನು ದಕ್ಷಿಣ ಭಾರತದ ರಾಜ್ಯವೊಂದರಲ್ಲಿ ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಕಾರಣೀಭೂತರಾದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಇಂದು ಗುರುವಾರ ಬೆಳಗ್ಗೆ 11 ಗಂಟೆಗೆ ತುರ್ತು ಸುದ್ದಿಗೋಷ್ಠಿ ಕರೆದಿದ್ದಾರೆ. ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಯಲಿದೆ.

ಕರ್ನಾಟಕ ವಿಧಾನಸಭೆ ಚುನಾವಣೆ 2023ಕ್ಕೆ ನಿನ್ನೆಯಷ್ಟೇ ದಿನಾಂಕ ಘೋಷಣೆ ಮಾಡಿ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ. ಚುನಾವಣೆಗೆ ಸರಿಸುಮಾರು ಒಂದೂವರೆ ತಿಂಗಳು ಬಾಕಿಯಿದೆಯಷ್ಟೆ, ಈ ಸಮಯದೊಳಗೆ ನೀತಿ ಸಂಹಿತೆ ಜಾರಿಯನ್ನು ಗಮನದಲ್ಲಿಟ್ಟುಕೊಂಡು ರಾಜಕೀಯ ಪಕ್ಷಗಳು ಮತದಾರರನ್ನು ಸೆಳೆಯಲು ಯಾವ ರೀತಿ ತಂತ್ರ ಮಾಡುತ್ತವೆ, ಚುನಾವಣಾ ಪ್ರಣಾಳಿಕೆಯಲ್ಲಿ ಏನು ಘೋಷಣೆ ಮಾಡುತ್ತವೆ ಮತ್ತು ಕ್ಷೇತ್ರಗಳಿಗೆ ಟಿಕೆಟ್ ಹಂಚಿಕೆ ಬಹಳ ಮುಖ್ಯವಾಗುತ್ತವೆ.

ಆಡಳಿತಾರೂಢ ಬಿಜೆಪಿ ಇನ್ನೂ 224 ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನೇ ಬಿಡುಗಡೆ ಮಾಡಿಲ್ಲ, ಕಾಂಗ್ರೆಸ್ ಕಳೆದ ವಾರ 124 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಇನ್ನೂ 100 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಘೋಷಣೆಗೆ ಕಸರತ್ತು ನಡೆಸುತ್ತಿದೆ. ಜೆಡಿಎಸ್ ಗೆ ಕೂಡ ಹಾಸನ ಸೇರಿದಂತೆ ಕೆಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಹೆಸರು ಘೋಷಣೆ ಕಠಿಣ ಸವಾಲಾಗಿದೆ.

ತೀವ್ರ ಕುತೂಹಲ ಕೆರಳಿಸಿದ ಬಿಎಸ್ ವೈ ಸುದ್ದಿಗೋಷ್ಠಿ: ಚುನಾವಣೆ ಹೊಸ್ತಿಲಿನಲ್ಲಿ ಇಂದು ತುರ್ತು ಸುದ್ದಿಗೋಷ್ಠಿ ಕರೆದಿರುವ ಬಿಎಸ್ ವೈ ಏನು ಹೇಳಲಿದ್ದಾರೆ ಎಂಬುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. 2021ರಲ್ಲಿ ಪಕ್ಷದೊಳಗಿನ ಅನಿವಾರ್ಯ ಕಾರಣಗಳಿಂದ ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿದ ಬಿಎಸ್ ವೈ ಖುಷಿಯಿಂದೇನು ಸಿಎಂ ಹುದ್ದೆ ತೊರೆದಿರಲಿಲ್ಲ. ಕಣ್ಣೀರು ಹಾಕುತ್ತಲೇ ಅಧಿಕಾರದಿಂದ ನಿರ್ಗಮಿಸಿದ್ದರು. ನಂತರ ಬಿಜೆಪಿ ಹೈಕಮಾಂಡ್ ಮೇಲೆ ಲಿಂಗಾಯತ ಸಮುದಾಯದವರು ಮುನಿಸಿಕೊಂಡಿದ್ದಾರೆ, ಬಿಜೆಪಿಯಲ್ಲಿ ಬಿಎಸ್ ವೈ ಅವರನ್ನು ಕಡೆಗಣಿಸಲಾಗುತ್ತಿದೆ ಎಂಬ ಮಾತುಗಳು ಪದೇ ಪದೇ ಕೇಳಿಬರುತ್ತಲೇ ಇವೆ.

ಹಾಗೇನು ಇಲ್ಲ, ಹಿರಿಯ ನಾಯಕ ಬಿಎಸ್ ವೈಯವರಿಗೆ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ನೀಡಲಾಗುತ್ತಿದೆ, ಅವರ ಪುತ್ರ ವಿಜಯೇಂದ್ರನಿಗೂ ಸೂಕ್ತ ಗೌರವ ನೀಡಲಾಗುತ್ತದೆ ಎಂಬಂತೆ ಮೊನ್ನೆಯಷ್ಟೇ ರಾಜ್ಯಕ್ಕೆ ಬಂದಿದ್ದ ಅಮಿತ್ ಶಾ ತಮ್ಮ ನಡೆಯಿಂದ ಸೂಚ್ಯವಾಗಿ ತೋರಿಸಿಕೊಟ್ಟಿದ್ದರು. ಕಳೆದ ತಿಂಗಳು ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆ ವೇಳೆ ಪ್ರಧಾನಿ ಮೋದಿ ಸಹ ಯಡಿಯೂರಪ್ಪನವರ ಕೈ ಹಿಡಿದು ಸಾಗಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕರ್ನಾಟಕದ ಮುಕುಟಕ್ಕೆ ಮತ್ತೊಂದು ಗರಿ: ಬೆಂಗಳೂರು ಮೂಲದ ಮೇಜರ್ Swathi ShanthaKumarಗೆ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ!

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

SCROLL FOR NEXT