ಕೆ. ಮಂಜು 
ರಾಜಕೀಯ

ಚುನಾವಣಾ ಅಖಾಡಕ್ಕೆ ನಿರ್ಮಾಪಕ ಕೆ ಮಂಜು: ಪದ್ಮನಾಭನಗರ ಕ್ಷೇತ್ರದಿಂದ ಸ್ಪರ್ಧೆ!

ರಾಜ್ಯ ರಾಜಕಾರಣಕ್ಕೆ ನಿರ್ಮಾಪಕ ಕೆ.ಮಂಜು ಎಂಟ್ರಿ ಕೊಡಲಿದ್ದಾರೆ. ಪದ್ಮನಾಭನಗರ ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯಾಗುವ ಬಗ್ಗೆ  ಕೆ.ಮಂಜು ಮಾತನಾಡಿದ್ದಾರೆ.

ರಾಜ್ಯ ರಾಜಕಾರಣಕ್ಕೆ ನಿರ್ಮಾಪಕ ಕೆ.ಮಂಜು ಎಂಟ್ರಿ ಕೊಡಲಿದ್ದಾರೆ. ಪದ್ಮನಾಭನಗರ ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯಾಗುವ ಬಗ್ಗೆ  ಕೆ.ಮಂಜು ಮಾತನಾಡಿದ್ದಾರೆ.

ಸ್ಯಾಂಡಲ್‌ವುಡ್  ಸಾಕಷ್ಟು ಸಿನಿಮಾಗಳಿಗೆ ಕೆ.ಮಂಜು ನಿರ್ಮಾಣ ಮಾಡಿ ಸೈ ಎನಿಸಿಕೊಂಡಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಕೆ.ಮಂಜು ಅವರ ಕೊಡುಗೆ ಅಪಾರ. ಇದೀಗ ರಾಜಕೀಯ  ಅಖಾಡಕ್ಕೆ ಇಳಿಯುವ ಬಗ್ಗೆ ತಿಳಿಸಿದ್ದಾರೆ.

ನಿರ್ಮಾಪಕ ಕೆ ಮಂಜು ಪುತ್ರ ಶ್ರೇಯಸ್ ಅವರ ಹೊಸ ಸಿನಿಮಾ 'ದಿಲ್‌ದಾರ್‌'ಗೆ ಮುಹೂರ್ತ ನೇರವೇರಿತು. ಈ ವೇಳೆ ಹಾಜರಿದ್ದ ಮಂಜುಗೆ ಒಂದು ಪ್ರಶ್ನೆ ಎದುರಾಯಿತು. 'ನಿಮ್ಮ ಪುತ್ರನಿಗೆ ಬೇರೆ ನಿರ್ಮಾಪಕರೇ ಹಣ ಹಾಕಿ ಸಿನಿಮಾ ಮಾಡುತ್ತಿದ್ದಾರೆ. ನೀವೇಕೆ ಸಿನಿಮಾ ಮಾಡುತ್ತಿಲ್ಲ' ಎಂದು ಪ್ರಶ್ನೆ ಮಾಡಲಾಯಿತು.

ಇದಕ್ಕೆ ಉತ್ತರಿಸಿದ ಕೆ ಮಂಜು, 'ನಾನು ಈ ಬಾರಿ ಚುನಾವಣೆಗೆ ನಿಲ್ಲಬೇಕೆಂದು ತೀರ್ಮಾನ ಮಾಡಿದ್ದೇನೆ. ಜನಸೇವೆ ಮಾಡಬೇಕೆಂಬ ಗುರಿ ಹೊಂದಿದ್ದೇನೆ. ಪದ್ಮನಾಭನಗರದಿಂದಲೇ ನಾನು ವಿಧಾನ ಸಭಾ ಚುನಾವಣೆಗೆ ಪ್ರವೇಶ ನೀಡಲಿದ್ದೇನೆ' ಎಂದು ಹೇಳಿದ್ದಾರೆ.

ನಮ್ಮ ನಾಯಕರ ಜೊತೆ ಮಾತುಕತೆ ಮಾಡುತ್ತಿದ್ದೇನೆ. ಒಂದೆರಡು ದಿನಗಳಲ್ಲಿ ಆ ಬಗ್ಗೆ ಅಧಿಕೃತ ಘೋಷಣೆ ಆಗಲಿದೆ. ಪದ್ಮನಾಭನಗರದಿಂದಲೇ ನಾನು ವಿಧಾನ ಸಭಾ ಚುನಾವಣೆಗೆ ನಿಲ್ಲುವುದು ಖಚಿತ. ಪದ್ಮನಾಭನಗರದಲ್ಲಿ ಸಾಕಷ್ಟು ಒಕ್ಕಲಿಗ ಮತಗಳಿವೆ. ಹಾಗೆಯೇ ಎಲ್ಲರೂ ನನಗೆ ಆಶೀರ್ವಾದ ಮಾಡಲಿದ್ದಾರೆ ಎಂದು ನಾನು ನಂಬಿದ್ದೇನೆ' ಎಂದು ಕೆ. ಮಂಜು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT