ಬಿಜೆಪಿ-ಕಾಂಗ್ರೆಸ್ ಲೋಗೋ 
ರಾಜಕೀಯ

ವಿಧಾನಸಭೆ ಚುನಾವಣೆ: ಮಸೀದಿಗಳು ಆಯ್ತು, ಇದೀಗ ಮತದಾರರನ್ನು ಓಲೈಸಲು ಚರ್ಚ್‌ಗಳತ್ತ ಮುಖ ಮಾಡಿದ ಅಭ್ಯರ್ಥಿಗಳು

ವಿಧಾನಸಭೆ ಚುನಾವಣೆಗೆ ಇನ್ನೇನು ದಿನಗಣನೆ ಆರಂಭವಾಗಿದ್ದು, ಅಭ್ಯರ್ಥಿಗಳು ಮತದಾರರ ಓಲೈಕೆಗೆ ವಿವಿಧ ಕಸರತ್ತುಗಳನ್ನು ಮಾಡುತ್ತಿದ್ದಾರೆ. ಶುಕ್ರವಾರ ಮಸೀದಿಗಳಿಗೆ ಭೇಟಿ ನೀಡಿದ್ದ ನಂತರ, ಮತದಾರರನ್ನು ಸೆಳೆಯಲು ವಿವಿಧ ಪಕ್ಷಗಳ ಅಭ್ಯರ್ಥಿಗಳು ತಮ್ಮ ತಮ್ಮ ವಿಧಾನಸಭಾ ಕ್ಷೇತ್ರಗಳ ಚರ್ಚ್‌ಗಳ ಮುಂದೆ ಸಾಲುಗಟ್ಟಿ ನಿಲ್ಲುತ್ತಿದ್ದಾರೆ.

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಇನ್ನೇನು ದಿನಗಣನೆ ಆರಂಭವಾಗಿದ್ದು, ಅಭ್ಯರ್ಥಿಗಳು ಮತದಾರರ ಓಲೈಕೆಗೆ ವಿವಿಧ ಕಸರತ್ತುಗಳನ್ನು ಮಾಡುತ್ತಿದ್ದಾರೆ. ಶುಕ್ರವಾರ ಮಸೀದಿಗಳಿಗೆ ಭೇಟಿ ನೀಡಿದ್ದ ನಂತರ, ಮತದಾರರನ್ನು ಸೆಳೆಯಲು ವಿವಿಧ ಪಕ್ಷಗಳ ಅಭ್ಯರ್ಥಿಗಳು ತಮ್ಮ ತಮ್ಮ ವಿಧಾನಸಭಾ ಕ್ಷೇತ್ರಗಳ ಚರ್ಚ್‌ಗಳ ಮುಂದೆ ಸಾಲುಗಟ್ಟಿ ನಿಲ್ಲುತ್ತಿದ್ದಾರೆ.

ಜಯನಗರ ಬಿಜೆಪಿ ಅಭ್ಯರ್ಥಿ ಸಿಕೆ ರಾಮಮೂರ್ತಿ ಅವರು ತಮ್ಮ ಕ್ಷೇತ್ರದ ಚರ್ಚ್‌ನಲ್ಲಿ ಕ್ರೈಸ್ತ ಮತದಾರರನ್ನು ಭೇಟಿ ಮಾಡಿ ಮತದಾನದ ದಿನವಾದ ಮೇ 10 ರಂದು ತಮ್ಮ ಮತಗಳನ್ನು ನೀಡಿ ಬೆಂಬಲಿಸುವಂತೆ ಮನವಿ ಮಾಡಿದರು.

ಅದೇ ರೀತಿ, ಸಿವಿ ರಾಮನ್ ನಗರದ ಕಾಂಗ್ರೆಸ್ ಅಭ್ಯರ್ಥಿ ಆನಂದ್ ಕುಮಾರ್ ಎಸ್, ಓಲ್ಡ್ ಮದ್ರಾಸ್‌ನ ನ್ಯೂ ಬೈಯಪ್ಪನಹಳ್ಳಿಯಲ್ಲಿ ಪ್ರಚಾರ ನಡೆಸುತ್ತಿದ್ದಾಗ, ಕ್ರಿಶ್ಚಿಯನ್ ತಮಿಳು ಸಮುದಾಯದ ಜನರನ್ನು ಭೇಟಿ ಮಾಡಿ, ಅವರ ಬೆಂಬಲವನ್ನು ಕೋರಿದರು.

ಸರ್ವಜ್ಞನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಮಾಜಿ ಸಚಿವ ಕೆ.ಜೆ. ಜಾರ್ಜ್ ಅವರು ತಮ್ಮ ಪತ್ನಿಯೊಂದಿಗೆ ಭಾನುವಾರದ ಪ್ರಾರ್ಥನೆಯಲ್ಲಿ ಪಾಲ್ಗೊಂಡು ಪಾದ್ರಿಗಳ ಆಶೀರ್ವಾದ ಪಡೆದರು. ತಮ್ಮ ಸಮುದಾಯದವರು ಚುನಾವಣೆಯಲ್ಲಿ ಬೆಂಬಲಿಸುವಂತೆ ಮನವಿ ಮಾಡಿದರು.

ಗೋವಿಂದರಾಜನಗರ ಅಭ್ಯರ್ಥಿ ಪ್ರಿಯಾ ಕೃಷ್ಣ ಅವರು ಕ್ಷೇತ್ರದ ಚರ್ಚ್‌ನಲ್ಲಿ ಕ್ರೈಸ್ತ ಸಮುದಾಯದವರನ್ನು ಭೇಟಿ ಮಾಡಿದರು. ಜನರೊಂದಿಗೆ ಸಂವಾದ ನಡೆಸಿದ ಅವರು, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದ ನಂತರ ಅವರ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಲಾಗುವುದು ಎಂದು ಹೇಳಿದರು.

ಕ್ರೈಸ್ತ ಸಮುದಾಯದೊಂದಿಗೆ ಉತ್ತಮ ಸಂಬಂಧ ಹೊಂದಿರುವ ಶಾಂತಿನಗರದ ಶಾಸಕ ಎಂಎ ಹ್ಯಾರಿಸ್ ಅವರು ತಮ್ಮ ವಿಧಾನಸಭಾ ಕ್ಷೇತ್ರದ ಸೇಂಟ್ ಪ್ಯಾಟ್ರಿಕ್ ಚರ್ಚ್, ಸೇಕ್ರೆಡ್ ಹಾರ್ಟ್ ಚರ್ಚ್, ಆಲ್ ಸೇಂಟ್ಸ್ ಚರ್ಚ್ ಮತ್ತು ಇನ್ಫೆಂಟ್ ಜೀಸಸ್ ಚರ್ಚ್ ಸದಸ್ಯರನ್ನು ಭೇಟಿ ಮಾಡಿದರು. ಗುರುವಾರ ಸಾಯಿಬಾಬಾ ಮಂದಿರದಲ್ಲಿ ಹಿಂದೂ ಸಮುದಾಯದ ಜನರನ್ನು ಭೇಟಿಯಾಗಿದ್ದೇನೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಪರಸ್ತ್ರೀ ಮೋಹ, ನಂಬಿಕೆ ದ್ರೋಹ: ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಪಶ್ಚಿಮ ಬಂಗಾಳದಲ್ಲಿ ವಿವಾದಿತ SIR ಕುರಿತು ಮಾತುಕತೆಗೆ ಟಿಎಂಸಿಗೆ ಚುನಾವಣಾ ಆಯೋಗ ಆಹ್ವಾನ

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

SCROLL FOR NEXT