ಸಾಂದರ್ಭಿಕ ಚಿತ್ರ 
ರಾಜಕೀಯ

ಕರ್ನಾಟಕ ಚುನಾವಣೆ: ಪ್ರಚಾರದ ಸಮಯದಲ್ಲಿ ಸಂಯಮ ಇರಲಿ, ರಾಜಕೀಯ ಪಕ್ಷಗಳಿಗೆ ಚುನಾವಣಾ ಆಯೋಗ ಸೂಚನೆ

ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಪ್ರಚಾರದ ಅಖಾಡ ದಿನದಿಂದ ದಿನಕ್ಕೆ ತಾರಕಕ್ಕೇರುತ್ತಿದೆ. ಅದರಲ್ಲೂ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ನಡುವೆ ಆರೋಪ, ಪ್ರತ್ಯಾರೋಪ, ವಾಗ್ಯುದ್ದಗಳು ಹೆಚ್ಚಾಗಿದ್ದು, ಪ್ರಚೋದನಾಕಾರಿ, ದ್ವೇಷಕಾರಿ ಹೇಳಿಕೆಗಳ ಆರ್ಭಟವೂ ಜೋರಾಗಿ ನಡೆಯುತ್ತಿದೆ. 

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಪ್ರಚಾರದ ಅಖಾಡ ದಿನದಿಂದ ದಿನಕ್ಕೆ ತಾರಕಕ್ಕೇರುತ್ತಿದೆ. ಅದರಲ್ಲೂ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ನಡುವೆ ಆರೋಪ, ಪ್ರತ್ಯಾರೋಪ, ವಾಗ್ಯುದ್ದಗಳು ಹೆಚ್ಚಾಗಿದ್ದು, ಪ್ರಚೋದನಾಕಾರಿ, ದ್ವೇಷಕಾರಿ ಹೇಳಿಕೆಗಳ ಆರ್ಭಟವೂ ಜೋರಾಗಿ ನಡೆಯುತ್ತಿದೆ. 

ಚುನಾವಣಾ ಆಯೋಗ ಮಂಗಳವಾರ ರಾಜಕೀಯ ಪಕ್ಷಗಳು ಮತ್ತು ಅವರ ಸ್ಟಾರ್ ಪ್ರಚಾರಕರಿಗೆ ಸಲಹೆಯನ್ನು ನೀಡಿದ್ದು, ಕರ್ನಾಟಕದಲ್ಲಿ ಪ್ರಚಾರದ ಸಮಯದಲ್ಲಿ ತಮ್ಮ ಮಾತುಗಳಲ್ಲಿ ಎಚ್ಚರಿಕೆ ಮತ್ತು ಸಂಯಮ ವಹಿಸುವಂತೆ, ಚುನಾವಣಾ ವಾತಾವರಣವನ್ನು ಹಾಳು ಮಾಡದಂತೆ ಸೂಚಿಸಿದೆ.

ಇದನ್ನೂ ಓದಿ: ದ್ವೇಷಕಾರಿ ಭಾಷಣ: ಶಾ, ನಡ್ಡಾ, ಯೋಗಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಯೋಗಕ್ಕೆ ಕಾಂಗ್ರೆಸ್ ಒತ್ತಾಯ
  
ಚುನಾವಣಾ ಪ್ರಚಾರದ ಸಮಯದಲ್ಲಿ ನೀಡುತ್ತಿರುವ ಹೇಳಿಕೆಗಳು ಎಲ್ಲೆ ಮೀರುತ್ತಿರುವುದನ್ನು ಗಮಿಸಿರುವ ಚುನಾವಣಾ ಆಯೋಗ, ಸ್ಟಾರ್ ಪ್ರಚಾರಕರು ತಮ್ಮ ಮಾತುಗಳ ಬಗ್ಗೆ ಗಮನ ಹರಿಸುವಂತೆ ಸೂಚಿಸಿದೆ. ಪ್ರಚೋದನಾಕಾರಿ ಹೇಳಿಕೆ ನೀಡಬಾರದು ಎಂದಿರುವ ಆಯೋಗ, ವಿಷಯಾಧಾರಿತ ಚರ್ಚೆ ನಡೆಸುವಂತೆ ಸಲಹೆ ನೀಡಿದೆ. ಮಾದರಿ ನೀತಿ ಸಂಹಿತೆ ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮುಖ್ಯ ಚುನಾವಣಾಧಿಕಾರಿಗೆ ಚುನಾವಣಾ ಆಯೋಗ ತಿಳಿಸಿದೆ.

ಮೇ 10 ರಂದು ನಡೆಯಲಿರುವ ಚುನಾವಣಾ ಪ್ರಚಾರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ನಡುವೆ ತೀವ್ರ ಮಾತಿನ ಚಕಮಕಿ ನಡೆಯುತ್ತಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT