ಸಿಎಂ ಬೊಮ್ಮಾಯಿ 
ರಾಜಕೀಯ

ಹನುಮಂತನ ಭಕ್ತರು ಸಿಡಿದೆದ್ದರೆ ಕಾಂಗ್ರೆಸ್ ಬೇರು ಸಮೇತ ಕಿತ್ತು ಹೋಗುತ್ತದೆ: ಸಿಎಂ ಬೊಮ್ಮಾಯಿ

ಹನುಮಂತನ ಭಕ್ತರು ಬಂಡಾಯವೆದ್ದರೆ ದೇಶದಿಂದ ಕಾಂಗ್ರೆಸ್ ಬೇರು ಸಮೇತ ಕಿತ್ತು ಹೋಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಹೇಳಿದ್ದಾರೆ.

ಬೆಂಗಳೂರು: ಹನುಮಂತನ ಭಕ್ತರು ಬಂಡಾಯವೆದ್ದರೆ ದೇಶದಿಂದ ಕಾಂಗ್ರೆಸ್ ಬೇರು ಸಮೇತ ಕಿತ್ತು ಹೋಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಹೇಳಿದ್ದಾರೆ.

ಬಜರಂಗದಳ ಮತ್ತು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದಂತಹ ಸಂಘಟನೆಗಳನ್ನು ನಿಷೇಧಿಸುವುದಾಗಿ ಪಕ್ಷ ಘೋಷಿಸಿದ ಕಾಂಗ್ರೆಸ್ ಪ್ರಣಾಳಿಕೆಯ ಕುರಿತು ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಬಜರಂಗದಳ ಮತ್ತು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ನಡುವೆ ಕಾಂಗ್ರೆಸ್ ಹೋಲಿಕೆ ಮಾಡುತ್ತಿರುವುದು ಅನುಚಿತವಾಗಿದೆ ಎಂದು ಹೇಳಿದರು.

“ಹನುಮಂತನ ಭಕ್ತರು ಭಜರಂಗದಳದ ಬಜರಂಗಿಗಳು ಮತ್ತು ಕಾಂಗ್ರೆಸ್ ಪಕ್ಷವು ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಬಜರಂಗದಳವನ್ನು ನಿಷೇಧಿಸುವುದಾಗಿ ಘೋಷಿಸಿದೆ. ಹನುಮಂತನ ಭಕ್ತರು ಬಂಡಾಯವೆದ್ದರೆ ಕಾಂಗ್ರೆಸ್ ಅನ್ನು ದೇಶದಿಂದ ಕಿತ್ತೊಗೆಯಲಾಗುತ್ತದೆ ಎಂದು ತಿಳಿಸಿದರು.

ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ, ಬಜರಂಗದಳವನ್ನು ನಿಷೇಧಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದರು.

ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ನೀಡಿರುವ ಭರವಸೆಗಳು ಅವರ ನೀತಿಯನ್ನುತೋರಿಸುತ್ತದೆ. ಸಾಮಾಜಿಕ ಮತ್ತು ಧಾರ್ಮಿಕ ಸೇವಾ ಸಂಘವಾಗಿದೆ. ಪಿಎಫ್ಐ ದೇಶದ ವಿರುದ್ಧ ಕೆಲಸ ಮಾಡಿದೆ, ಭಯೋತ್ಪಾದನಾ ಚಟುವಟಿಕೆಗಳಲ್ಲಿ ತೊಡಗಿದೆ ಮತ್ತು ಅವರ ವಿರುದ್ಧ ಅನೇಕ ಪ್ರಕರಣಗಳು ಮತ್ತು ಸಾಕ್ಷ್ಯಗಳಿವೆ. ಆದ್ದರಿಂದ, ಪಿಎಫ್ಐ ಅನ್ನು ಬಜರಂಗದಳದೊಂದಿಗೆ ಹೋಲಿಸುವುದು ಸರಿಯಲ್ಲ. ಈಗಾಗಲೇ ಪಿಎಫ್‌ಐ ನಿಷೇಧಿಸಲಾಗಿದೆ ಎಂದು ಹೇಳಿದರು.

ಯಾವುದೇ ಸಂಘಟನೆಯನ್ನು ನಿಷೇಧಿಸುವ ಅಧಿಕಾರ ರಾಜ್ಯ ಸರ್ಕಾರಗಳಿಗೆ ಇಲ್ಲದಿರುವುದರಿಂದ ಕಾಂಗ್ರೆಸ್ ಬಜರಂಗದಳವನ್ನು ನಿಷೇಧಿಸುವ ಪ್ರಶ್ನೆಯೇ ಇಲ್ಲ. ಕೇಂದ್ರದಿಂದ ಮಾತ್ರ ಅದು ಸಾಧ್ಯ ಎಂದರು. ಇದೇ ವೇಳೆ ಕಾಂಗ್ರೆಸ್ ಪ್ರಣಾಳಿಕೆಯು ಜನರನ್ನು ದಾರಿ ತಪ್ಪಿಸುವ ಪ್ರಣಾಳಿಕೆಯಾಗಿದೆ ಎಂದು ಕಿಡಿಕಾರಿದ್ದಾರೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT