ಕೇಂದ್ರ ಸಚಿನ್ ಕಿಶನ್ ರೆಡ್ಡಿ 
ರಾಜಕೀಯ

ಧರ್ಮದ ಆಧಾರದಲ್ಲಿ ದೇಶ ವಿಭಜನೆಗೆ ಕಾಂಗ್ರೆಸ್ ಯತ್ನ: ಕೇಂದ್ರ ಸಚಿವ ಕಿಶನ್ ರೆಡ್ಡಿ 

ಧರ್ಮದ ಆಧಾರದಲ್ಲಿ ದೇಶ ವಿಭಜನೆಗೆ ಕಾಂಗ್ರೆಸ್ ಯತ್ನಿಸುತ್ತಿದೆ ಎಂದು ಕೇಂದ್ರ ಸಚಿವ ಕಿಶನ್ ರೆಡ್ಡಿ ಗುರುವಾರ ಪ್ರತಿಕ್ರಿಯಿಸಿದ್ದಾರೆ.  ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಜರಂಗದಳ ನಿಷೇಧಿಸುವ ಆ ಪಕ್ಷದ ಚುನಾವಣೆ ಪ್ರಣಾಳಿಕೆ ಕುರಿತು ಪ್ರತಿಕ್ರಿಸಿದ ಕಿಶನ್ ರೆಡ್ಡಿ, ದೇಶದ ಜನರ ನಡುವೆ ಒಡಕು ಮೂಡಿಸಲು ಕಾಂಗ್ರೆಸ್ ಯತ್ನಿಸುತ್ತಿರುವುದು ತಪ್ಪು ಎಂದರು. 

ಬೆಂಗಳೂರು: ಧರ್ಮದ ಆಧಾರದಲ್ಲಿ ದೇಶ ವಿಭಜನೆಗೆ ಕಾಂಗ್ರೆಸ್ ಯತ್ನಿಸುತ್ತಿದೆ ಎಂದು ಕೇಂದ್ರ ಸಚಿವ ಕಿಶನ್ ರೆಡ್ಡಿ ಗುರುವಾರ ಪ್ರತಿಕ್ರಿಯಿಸಿದ್ದಾರೆ.  ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಜರಂಗದಳ ನಿಷೇಧಿಸುವ ಆ ಪಕ್ಷದ ಚುನಾವಣೆ ಪ್ರಣಾಳಿಕೆ ಕುರಿತು ಪ್ರತಿಕ್ರಿಸಿದ ಕಿಶನ್ ರೆಡ್ಡಿ, ದೇಶದ ಜನರ ನಡುವೆ ಒಡಕು ಮೂಡಿಸಲು ಕಾಂಗ್ರೆಸ್ ಯತ್ನಿಸುತ್ತಿರುವುದು ತಪ್ಪು ಎಂದರು. 

"ಕಾಂಗ್ರೆಸ್ ಪಕ್ಷ ಮತಕ್ಕಾಗಿ ದೇಶದ ಜನರನ್ನು ಧರ್ಮದ ಆಧಾರದ ಮೇಲೆ ವಿಭಜಿಸಲು ಪ್ರಯತ್ನಿಸುತ್ತಿದೆ. ಇದು ತಪ್ಪು. ಕಾಂಗ್ರೆಸ್ ಇಂತಹ ನಿರ್ಧಾರಗಳನ್ನು ತೆಗೆದುಕೊಳ್ಳುವುದರಿಂದ ರಾಷ್ಟ್ರದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಹಾಗಾಗಿ ಕರ್ನಾಟಕದ ಜನರು ಕಾಂಗ್ರೆಸ್ ತಿರಸ್ಕರಿಸಿ ಅವರಿಗೆ ತಕ್ಕ ಪಾಠ ಕಲಿಸಬೇಕೆಂದು ವಿನಂತಿಸುವುದಾಗಿ ತಿಳಿಸಿದರು. 

ಕಿಶನ್ ರೆಡ್ಡಿ ಅವರು ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರನ್ನು ಹೆಸರಿಸಿದರು ಮತ್ತು ಬಜರಂಗದಳವು ರಾಷ್ಟ್ರವಿರೋಧಿಯೇ ಅಥವಾ ಯಾವುದೇ ಭಯೋತ್ಪಾದಕ ಸಂಘಟನೆಯನ್ನು ನಿಷೇಧಿಸುತ್ತದೆಯೇ ಎಂದು ಕೇಳಿದರು.

ಬಜರಂಗದಳ ದೇಶ ವಿರೋಧಿಯೇ ಎಂದು ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರನ್ನು  ಕೇಳ ಬಯಸುವುದಾಗಿ ತಿಳಿಸಿದ ಕಿಶನ್ ರೆಡ್ಡಿ,  ಬಜರಂಗದಳ ಹೆಸರಿನಲ್ಲಿ ಮುಸ್ಲಿಂ ಮತಗಳನ್ನು ಸೆಳೆಯಲು ಕಾಂಗ್ರೆಸ್ ಯತ್ನಿಸುತ್ತಿದೆ ಎಂದು ಆರೋಪಿಸಿದರು. 
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಕೆಲವು ಸಚಿವರು ಕೈಗೂ ಸಿಗಲ್ಲ, ಫೋನಿಗೂ ಸಿಗಲ್ಲ: ದೇವಲೋಕದಿಂದ ಬಂದಂತೆ ಆಡ್ತಾರೆ; ಅಂತವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಿ'

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

ಗ್ರಾಮೀಣ ಪ್ರದೇಶಗಳಿಗೆ ಅಗ್ಗದ ದರದಲ್ಲಿ ಔಷಧಿ: ಇಂಡಿಯಾ ಪೋಸ್ಟ್‌ ಮೂಲಕ ಜನೌಷಧಿ ಸೇವೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ..!

SCROLL FOR NEXT