ಎಂಎಲ್'ಸಿ ವಿಶ್ವನಾಥ್ 
ರಾಜಕೀಯ

ವರುಣಾದಲ್ಲಿ ಸಿದ್ದರಾಮಯ್ಯ ಸೋಲಿಸಲು ಬಿಜೆಪಿಯಿಂದ ದೊಡ್ಡ ಪಿತೂರಿ: ಎಂಎಲ್'ಸಿ ವಿಶ್ವನಾಥ್

ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅವರನ್ನು ಸೋಲಿಸಲು ಬಿಜೆಪಿ ದೊಡ್ಡ ಪಿತೂರಿ ನಡೆಸುತ್ತಿದೆ ಎಂದು ಎಂಎಲ್'ಸಿ ವಿಶ್ವನಾಥ್ ಅವರು ಆರೋಪಿಸಿದ್ದಾರೆ.

ಮೈಸೂರು: ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅವರನ್ನು ಸೋಲಿಸಲು ಬಿಜೆಪಿ ದೊಡ್ಡ ಪಿತೂರಿ ನಡೆಸುತ್ತಿದೆ ಎಂದು ಎಂಎಲ್'ಸಿ ವಿಶ್ವನಾಥ್ ಅವರು ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವರುಣಾ ಕ್ಷೇತ್ರದಲ್ಲಿ ಗೆಲ್ಲಲೇಬೇಕೆಂಬ ಹಠಕ್ಕೆ ಬಿದ್ದಿರುವ ಬಿಜೆಪಿ, ಚುನಾವಣೆಗೆ ಒಂದೆರಡು ದಿನ ಬಾಕಿ ಇರುವಾಗಲೆ ದಲಿತ ಹುಡುಗನ ಹತ್ಯೆ ಮಾಡಿ ಅದನ್ನು ಕುರುಬರ ತಲೆಗೆ ಕಟ್ಟುವ ಹುನ್ನಾರ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ನಾನು ಲೋಕಸಭಾ ಸದಸ್ಯ ಆಗಿದ್ದವನು. ನನಗೆ ಹಲವಾರು ಅಧಿಕಾರಿಗಳ ಸಂಪರ್ಕವಿದೆ. ಸಿದ್ದರಾಮಯ್ಯ ವಿರುದ್ಧ ಕುತಂತ್ರ ನಡೆಯುತ್ತಿದೆ ಎಂದು ಹೇಳಿದ್ದಾರೆ.

1978ರಲ್ಲಿ ಇದೇ ರೀತಿ ಆಗಿತ್ತು. ಹೀಗಾಗಿ ಕಾಂಗ್ರೆಸ್ಸಿನವರು ಬಹಳ ಜಾಗೂರೂಕರಾಗಿ ಕೆಲಸ ಮಾಡಬೇಕು. ದಲಿತ ಮತಗಳು ಯಾವುದೇ ಕಾರಣಕ್ಕೂ ವಿಭಜನೆಯಾಗಲ್ಲ. ದಲಿತರು ಕಾಂಗ್ರೆಸ್ ಪರ ನಿಲ್ಲಲಿದ್ದಾರೆ. ಚುನಾವಣೆಯಲ್ಲಿ ಯೋಚನೆ ಮಾಡಿ ಬಹಳ ಹುಷಾರಾಗಿ ಕೆಲಸ ಮಾಡಿದಲ್ಲಿ ಸಿದ್ದರಾಮಯ್ಯ ಗೆಲಲ್ಲಿದ್ದಾರೆ’’ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT