ರಾಜಕೀಯ

ವರುಣಾದಲ್ಲಿ ಸಿದ್ದರಾಮಯ್ಯ ಸೋಲಿಸಲು ಬಿಜೆಪಿಯಿಂದ ದೊಡ್ಡ ಪಿತೂರಿ: ಎಂಎಲ್'ಸಿ ವಿಶ್ವನಾಥ್

Manjula VN

ಮೈಸೂರು: ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅವರನ್ನು ಸೋಲಿಸಲು ಬಿಜೆಪಿ ದೊಡ್ಡ ಪಿತೂರಿ ನಡೆಸುತ್ತಿದೆ ಎಂದು ಎಂಎಲ್'ಸಿ ವಿಶ್ವನಾಥ್ ಅವರು ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವರುಣಾ ಕ್ಷೇತ್ರದಲ್ಲಿ ಗೆಲ್ಲಲೇಬೇಕೆಂಬ ಹಠಕ್ಕೆ ಬಿದ್ದಿರುವ ಬಿಜೆಪಿ, ಚುನಾವಣೆಗೆ ಒಂದೆರಡು ದಿನ ಬಾಕಿ ಇರುವಾಗಲೆ ದಲಿತ ಹುಡುಗನ ಹತ್ಯೆ ಮಾಡಿ ಅದನ್ನು ಕುರುಬರ ತಲೆಗೆ ಕಟ್ಟುವ ಹುನ್ನಾರ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ನಾನು ಲೋಕಸಭಾ ಸದಸ್ಯ ಆಗಿದ್ದವನು. ನನಗೆ ಹಲವಾರು ಅಧಿಕಾರಿಗಳ ಸಂಪರ್ಕವಿದೆ. ಸಿದ್ದರಾಮಯ್ಯ ವಿರುದ್ಧ ಕುತಂತ್ರ ನಡೆಯುತ್ತಿದೆ ಎಂದು ಹೇಳಿದ್ದಾರೆ.

1978ರಲ್ಲಿ ಇದೇ ರೀತಿ ಆಗಿತ್ತು. ಹೀಗಾಗಿ ಕಾಂಗ್ರೆಸ್ಸಿನವರು ಬಹಳ ಜಾಗೂರೂಕರಾಗಿ ಕೆಲಸ ಮಾಡಬೇಕು. ದಲಿತ ಮತಗಳು ಯಾವುದೇ ಕಾರಣಕ್ಕೂ ವಿಭಜನೆಯಾಗಲ್ಲ. ದಲಿತರು ಕಾಂಗ್ರೆಸ್ ಪರ ನಿಲ್ಲಲಿದ್ದಾರೆ. ಚುನಾವಣೆಯಲ್ಲಿ ಯೋಚನೆ ಮಾಡಿ ಬಹಳ ಹುಷಾರಾಗಿ ಕೆಲಸ ಮಾಡಿದಲ್ಲಿ ಸಿದ್ದರಾಮಯ್ಯ ಗೆಲಲ್ಲಿದ್ದಾರೆ’’ ಎಂದು ತಿಳಿಸಿದ್ದಾರೆ.

SCROLL FOR NEXT