ಶಿವರಾಜ್ ಕುಮಾರ್, ದುನಿಯಾ ವಿಜಯ್ 
ರಾಜಕೀಯ

ಶಿವಣ್ಣನ ಬಗ್ಗೆ ಯಾರೂ ಹಗುರವಾಗಿ ಮಾತನಾಡಬಾರದು- ದುನಿಯಾ ವಿಜಯ್

ಹಿರಿಯ ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಹಾಗೂ ವಿ. ಸೋಮಣ್ಣ ನಡುವಿನ ಸಮರದಿಂದಾಗಿ ಮೈಸೂರಿನ ವರುಣಾ ಕ್ಷೇತ್ರ ರಾಜ್ಯ ಮಾತ್ರವಲ್ಲದೇ ಇಡೀ ದೇಶಾದ್ಯಂತ ತೀವ್ರ ಕುತೂಲಹಕ್ಕೆ ಕಾರಣವಾಗಿದೆ.

ವರುಣಾ: ಹಿರಿಯ ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಹಾಗೂ ವಿ. ಸೋಮಣ್ಣ ನಡುವಿನ ಸಮರದಿಂದಾಗಿ ಮೈಸೂರಿನ ವರುಣಾ ಕ್ಷೇತ್ರ ರಾಜ್ಯ ಮಾತ್ರವಲ್ಲದೇ ಇಡೀ ದೇಶಾದ್ಯಂತ ತೀವ್ರ ಕುತೂಲಹಕ್ಕೆ ಕಾರಣವಾಗಿದೆ.

ಚುನಾವಣೆಗೆ ಇನ್ನೂ ಐದು ದಿನ ಬಾಕಿಯಿರುವಂತೆಯೇ ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ಸಾಗಿದ್ದು, ಸಿದ್ದರಾಮಯ್ಯ ಪರ ಸ್ಯಾಂಡಲ್ ವುಡ್ ನ ಖ್ಯಾತ ನಟರಾದ ಶಿವರಾಜ್ ಕುಮಾರ್,  ದುನಿಯಾ ವಿಜಯ್, ಯೋಗೇಶ್ (ಲೂಸ್ ಮಾದ) ರಮ್ಯಾ, ನಿಶ್ವಿಕಾ ನಾಯ್ಡು ಸೇರಿದಂತೆ ಹಲವು ತಾರೆಯರು ಪ್ರಚಾರ ನಡೆಸಿದ್ದಾರೆ.

ಅದರಲ್ಲೂ ತನ್ನ ಜೀವನದುದ್ದಕ್ಕೂ ಎಂದಿಗೂ ರಾಜಕೀಯದಲ್ಲಿ ಆಸೆ ಪಡದ ಅಥವಾ ಯಾರ ಪರವಾಗಿಯೂ ಪ್ರಚಾರ, ಸಭೆ, ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳದ ವರನಟ ಡಾ. ರಾಜ್ ಕುಮಾರ್ ಅವರ ಪುತ್ರ ಡಾ. ಶಿವರಾಜ್ ಕುಮಾರ್ ಸಿದ್ದರಾಮಯ್ಯ ಪರ ಪ್ರಚಾರ ನಡೆಸಿರುವುದಕ್ಕೆ ಬಿಜೆಪಿ ನಾಯಕರು ಹಾಗೂ ಕೆಲ ಅಭಿಮಾನಿಗಳು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಪುನೀತ್  ಹಾಗೂ ಗೀತಾ ಶಿವರಾಜ್ ಕುಮಾರ್ ಅವರ ಹೆಸರು ಹೇಳಿದ್ದಕ್ಕೆ ವಿ. ಸೋಮಣ್ಣ ಹಾಗೂ ಪ್ರತಾಪ್ ಸಿಂಹ ವಿರುದ್ಧ ಶಿವಣ್ಣ ಕೂಡಾ ಗರಂ ಆಗಿದ್ದಾರೆ. 

ಶಿವಣ್ಣ ವಿರುದ್ಧ ಬಿಜೆಪಿ ನಾಯಕರ ಹೇಳಿಕೆಯಲ್ಲಿ ವರುಣಾದಲ್ಲಿ ಮಾತನಾಡಿದ ದುನಿಯಾ ವಿಜಯ್, ದೊಡ್ಡ ಮನೆಯ ದೊಡ್ಡ ಮಗನಾದ ಶಿವರಾಜ್ ಕುಮಾರ್ ಅವರ ಬಗ್ಗೆ ಯಾರೂ ಹಗುರವಾಗಿ ಮಾತನಾಡಬಾರದು ಎಂದಿದ್ದಾರೆ.ಶಿವರಾಜ್ ಕುಮಾರ್ ಎಲ್ಲರನ್ನೂ ಪ್ರೀತಿಸುವವರು. ಯಾರು ಕರೆದರೂ ಚುನಾವಣಾ ಪ್ರಚಾರಕ್ಕೆ ಹೋಗುತ್ತಾರೆ. ಅಣ್ಣಾವ್ರ ಮನೆಯವರು, ದೊಡ್ಡತನ ಹೊಂದಿರುವವರು. ದೇವರಂತಹ ಮನಸ್ಸಿನವರು. ಯಾವುದೇ ಕಾರಣಕ್ಕೂ ದೊಡ್ಡತನವನ್ನು ಕಳೆದುಕೊಂಡವರಲ್ಲ. ಅವರ ಬಗ್ಗೆ ಮಾತನಾಡುವುದು ತಪ್ಪು ಎಂದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT