ವಿಶ್ವೇಶ್ವರ ಹೆಗಡೆ ಕಾಗೇರಿ 
ರಾಜಕೀಯ

ಶೆಟ್ಟರ್ ಕಾಂಗ್ರೆಸ್ ಸೇರಿ ರಾಜಕೀಯ ಪ್ರಮಾದ ಎಸಗಿದ್ದಾರೆ, ಪಕ್ಷೇತರರಾಗಿ ಸ್ಪರ್ಧಿಸಬೇಕಿತ್ತು: ವಿಶ್ವೇಶ್ವರ ಹೆಗಡೆ ಕಾಗೇರಿ

ಜಗದೀಶ್ ಶೆಟ್ಟರ್ ಅವರು ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್‌ಗೆ ಸೇರುವ ಮೂಲಕ 'ರಾಜಕೀಯ ಪ್ರಮಾದ' ಎಸಗಿದ್ದಾರೆ ಮತ್ತು ಮೇ 10ರ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲುವ ಉತ್ತಮ ಅವಕಾಶವಿದ್ದರೆ ಅವರು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಬೇಕಿತ್ತು ಎಂದು ಬಿಜೆಪಿಯ ಹಿರಿಯ ನಾಯಕ ಮತ್ತು ಕರ್ನಾಟಕ ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ.

ಶಿರಸಿ: ಜಗದೀಶ್ ಶೆಟ್ಟರ್ ಅವರು ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್‌ಗೆ ಸೇರುವ ಮೂಲಕ 'ರಾಜಕೀಯ ಪ್ರಮಾದ' ಎಸಗಿದ್ದಾರೆ ಮತ್ತು ಮೇ 10ರ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲುವ ಉತ್ತಮ ಅವಕಾಶವಿದ್ದರೆ ಅವರು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಬೇಕಿತ್ತು ಎಂದು ಬಿಜೆಪಿಯ ಹಿರಿಯ ನಾಯಕ ಮತ್ತು ಕರ್ನಾಟಕ ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ.

ಪಿಟಿಐಗೆ ನೀಡಿದ ಸಂದರ್ಶನದಲ್ಲಿ, ಶೆಟ್ಟರ್ ಅವರು ಕಾಂಗ್ರೆಸ್‌ಗೆ ಸೇರದಿದ್ದರೆ, ಸ್ವಲ್ಪ ಪರಿಣಾಮ ಬೀರಬಹುದಿತ್ತು. ಆದರೆ, ಕಾಂಗ್ರೆಸ್‌ಗೆ ಸೇರುವ ಮೂಲಕ ಅದು ನಕಾರಾತ್ಮಕವಾಯಿತು ಎಂದರು.

ಮಾಜಿ ಮುಖ್ಯಮಂತ್ರಿ ಶೆಟ್ಟರ್ ಅವರು ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ಗೆ ಪಕ್ಷಾಂತರಗೊಂಡರು. ಅವರು 1994ರಿಂದ ಇಲ್ಲಿಯವರೆಗೆ ಅವರು ಗೆಲುವು ಸಾಧಿಸಿದ್ದಾರೆ.

ಶೆಟ್ಟರ್ ಅವರ ಆತ್ಮೀಯ ಗೆಳೆಯರಲ್ಲಿ ಒಬ್ಬರಾದ ಕಾಗೇರಿ, ರಾಜೀನಾಮೆ ಪತ್ರ ಸಲ್ಲಿಸಲು ಬಂದಿದ್ದಾಗ ಶೆಟ್ಟರ್ ಅವರಿಗೆ ಎರಡು ಗಂಟೆಗಳ ಕಾಲ ನಾನು ಮನವರಿಕೆ ಮಾಡಿಕೊಟ್ಟರೂ ಫಲಕಾರಿಯಾಗಲಿಲ್ಲ. ಆ ದಿನ ನಾನು ನಿಜವಾಗಿಯೂ ಅಸಮಾಧಾನಗೊಂಡಿದ್ದೆ. ‘ಕಾಂಗ್ರೆಸ್ ಸೇರಿ ತಪ್ಪು ಮಾಡಿದ್ದಾರೆ, ಸುಮ್ಮನಿರಬೇಕಿತ್ತು. ಇಲ್ಲವೇ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯಬೇಕಿತ್ತು’ ಎಂದು ಹೇಳಿದರು.

ಶೆಟ್ಟರ್ ಸ್ವತಂತ್ರ ಅಭ್ಯರ್ಥಿಯಾಗಿ ಗೆದ್ದರೆ ಅಚ್ಚರಿ ಪಡುತ್ತಿರಲಿಲ್ಲ. ಅವರು, ಆಗ ಅನುಕಂಪದ ಮೇಲೆ ಗೆಲ್ಲುತ್ತಿದ್ದರು. ಅವರು ಕಾಂಗ್ರೆಸ್ ಸೇರುವ ಮೂಲಕ ಎಲ್ಲವನ್ನೂ ಹಾಳು ಮಾಡಿಕೊಂಡಿದ್ದಾರೆ. ಇದು ರಾಜಕೀಯ ಪ್ರಮಾದ ಎಂದು ಅವರು ಹೇಳಿದರು.

ಶಿರಸಿ ವಿಧಾನಸಭಾ ಕ್ಷೇತ್ರದಿಂದ ಏಳನೇ ಬಾರಿಗೆ ಮರುಚುನಾವಣೆಗೆ ಸ್ಪರ್ಧಿಸಿರುವ ಕಾಗೇರಿ ಅವರು ಹಿಂದುತ್ವದ ಆಧಾರದ ಮೇಲೆ ಚುನಾವಣೆ ಗೆಲ್ಲುವುದನ್ನು ನಿರಾಕರಿಸಿದರು ಮತ್ತು ತಮ್ಮ ಕ್ಷೇತ್ರದಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳನ್ನು ಪಟ್ಟಿ ಮಾಡಿದರು.

'ಹಿಂದುತ್ವ ನಮ್ಮ ನಂಬಿಕೆ. ಅದನ್ನು ಅನುಸರಿಸಲು ನಮಗೆ ಯಾವುದೇ ಹಿಂಜರಿಕೆ ಇಲ್ಲ. ಆದರೆ, ಚುನಾಯಿತ ಪ್ರತಿನಿಧಿಯಾಗಿ ನಾನು ಅಭಿವೃದ್ಧಿ ಕೆಲಸಗಳನ್ನು ಮಾಡಬೇಕು ಮತ್ತು ಅದು ನನ್ನ ಆದ್ಯ ಕರ್ತವ್ಯ. ನಾನು ಮಾಡುತ್ತಾ ಬಂದಿದ್ದೇನೆ. ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ. ನಾನು ಮಾಡಿಲ್ಲ ಎಂದು ಯಾರೂ ಹೇಳುವುದಿಲ್ಲ. ನಾನು ಕೆಲಸಗಳನ್ನು ಮಾಡಿಲ್ಲ ಎಂದು ಹೇಳುವಷ್ಟು ಪ್ರತಿಪಕ್ಷವೂ ಬಲವಾಗಿಲ್ಲ. ನಾನು ಇನ್ನೂ ಹೆಚ್ಚಿನದನ್ನು ಮಾಡಬಹುದಿತ್ತು ಎಂದು ಅವರು ಹೇಳುತ್ತಾರೆ' ಎಂದು ಅವರು ಹೇಳಿದರು.

ಬಜರಂಗದಳವನ್ನು ನಿಷೇಧಿಸುವ ಕಾಂಗ್ರೆಸ್‌ನ ಚುನಾವಣಾ ಭರವಸೆಯ ಕುರಿತು ಮಾತನಾಡಿದ ಕಾಗೇರಿ, ವಿರೋಧ ಪಕ್ಷವು 'ಅಲ್ಪಸಂಖ್ಯಾತರನ್ನು ಮೆಚ್ಚಿಸಲು ಬಹುಸಂಖ್ಯಾತ ಸಮುದಾಯಗಳನ್ನು ನೋಯಿಸುತ್ತಿದೆ. ಈ ನಂಬಿಕೆಯ ಆಧಾರದ ಮೇಲೆ ಕಾಂಗ್ರೆಸ್ ಕೆಲಸ ಮಾಡುತ್ತಿದೆ' ಎಂದು ಆರೋಪಿಸಿದರು.

ಶಿರಸಿ ವಿಧಾನಸಭಾ ಕ್ಷೇತ್ರದಲ್ಲಿ 2.08 ಲಕ್ಷ ಮತದಾರರಿದ್ದು, ಈಡಿಗ ಸಮುದಾಯ (52,000) ಬ್ರಾಹ್ಮಣರು (44,000) ಮತ್ತು ಮುಸ್ಲಿಮರು (15,000) ಪ್ರಾಬಲ್ಯ ಹೊಂದಿದ್ದಾರೆ. ಕಾಂಗ್ರೆಸ್ ಪಕ್ಷ ಭೀಮಣ್ಣ ನಾಯ್ಕ್ ಅವರನ್ನು ಕಣಕ್ಕಿಳಿಸಿದ್ದು, ಆಮ್ ಆದ್ಮಿ ಪಕ್ಷದ (ಎಎಪಿ) ಪರವಾಗಿ ಹಿತೇಂದ್ರ ನಾಯ್ಕ್ ಸ್ಪರ್ಧಿಸಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯ್ಕ ಮಾತನಾಡಿ, ಕಾಗೇರಿ ಅವರು ಹಿಂದುತ್ವದ ಆಧಾರದ ಮೇಲೆ ಈ ಕ್ಷೇತ್ರದಿಂದ ಗೆಲುವು ಸಾಧಿಸುತ್ತಿದ್ದು, ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ. ದೂರದ ಹಳ್ಳಿಗಳಲ್ಲಿ ಯಾವುದೇ ರಸ್ತೆ ಮತ್ತು ನೀರಿನ ಸೌಲಭ್ಯಗಳಿಲ್ಲ. ಅರಣ್ಯ ಭೂಮಿ ಅತಿಕ್ರಮಣವು ಪ್ರಮುಖ ಸಮಸ್ಯೆಯಾಗಿದೆ ಎಂದರು.

1999 ರಿಂದ ಶಿರಸಿ ಬಿಜೆಪಿಯ ಭದ್ರಕೋಟೆಯಾಗಿದ್ದು, ಈ ಬಾರಿ ಕೇಸರಿ ಪಕ್ಷ ಮತ್ತು ಹಳೆಯ ಪಕ್ಷದ ನಡುವೆ ಕಠಿಣ ಸ್ಪರ್ಧೆ ಏರ್ಪಟ್ಟಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT