ಬೆಳಗಾವಿಯಲ್ಲಿ ರೋಡ್‌ಶೋ ನಡೆಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ 
ರಾಜಕೀಯ

ಬೆಂಗಳೂರಿನಲ್ಲಿ ಮೋದಿ ಅಬ್ಬರದ ರೋಡ್‌ಶೋ; ಇತ್ತ ಬೆಳಗಾವಿಯಲ್ಲಿ ಅಮಿತ್ ಶಾ ಮೆಗಾ ರೋಡ್ ಶೋ

ಕರ್ನಾಟಕ ವಿಧಾನಸಭಾ ಚುನಾವಣೆಯ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಭಾನುವಾರ ಮೆಗಾ ರೋಡ್ ಶೋ ನಡೆಸಿದರು.

ಬೆಳಗಾವಿ: ಕರ್ನಾಟಕ ವಿಧಾನಸಭಾ ಚುನಾವಣೆಯ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಭಾನುವಾರ ಮೆಗಾ ರೋಡ್ ಶೋ ನಡೆಸಿದರು.

ಅಪಾರ ಸಂಖ್ಯೆಯ ಬಿಜೆಪಿ ಬೆಂಬಲಿಗರು ಅಮಿತ್ ಶಾ ಅವರ ವಾಹನವನ್ನು ಸುತ್ತುವರಿದು ಮೆರವಣಿಗೆಯಲ್ಲಿ ತೆರಳಿದರು. ಅವರನ್ನು ಸ್ವಾಗತಿಸಲು ರಸ್ತೆಯ ಇಕ್ಕೆಲಗಳಲ್ಲಿ ಸಾಲುಗಟ್ಟಿ ನಿಂತಿದ್ದ ಜನರತ್ತ ಶಾ ಕೈ ಬೀಸಿದರು.

ಇಂದು ಮುಂಜಾನೆ, ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನಲ್ಲಿ ಮೆಗಾ ರೋಡ್‌ಶೋ ನಡೆಸಿದರು. ರಸ್ತೆಯ ಎರಡೂ ಬದಿಗಳಲ್ಲಿ ಸಾಲುಗಟ್ಟಿ ನಿಂತಿದ್ದ ಜನರು ಮೋದಿಗೆ ಜೈಕಾರ ಹಾಕಿದರು. ಮೋದಿ ಜನರತ್ತ ಕೈ ಬೀಸಿದರು.

ಹೂವಿನಿಂದ ಅಲಂಕರಿಸಲ್ಪಟ್ಟ ವಾಹನದ ಮೇಲೆ ನಿಂತು, ರಸ್ತೆಗಳ ಎರಡೂ ಬದಿಗಳಲ್ಲಿ ಮತ್ತು ಹತ್ತಿರದ ಕಟ್ಟಡಗಳ ಮೇಲೆ ನೆರೆದಿದ್ದ ಜನರತ್ತ ಪ್ರಧಾನಿ ಮೋದಿ ಕೈ ಬೀಸಿದರು ಮತ್ತು ಜನರಿಂದ 'ಮೋದಿ, ಮೋದಿ' ಎಂಬ ಘೋಷಣೆಗಳು ಕೇಳಿಬಂದವು.

ಹೊಸ ತಿಪ್ಪಸಂದ್ರ ರಸ್ತೆಯಲ್ಲಿರುವ ಕೆಂಪೇಗೌಡ ಪ್ರತಿಮೆಯಿಂದ ರೋಡ್‌ಶೋ ಆರಂಭಿಸಿದ ಪ್ರಧಾನಿ ಟ್ರಿನಿಟಿ ಸರ್ಕಲ್‌ನಲ್ಲಿ ಸಮಾರೋಪಗೊಳಿಸಿದರು.

ಮೇ 10 ರಂದು ನಡೆಯಲಿರುವ ವಿಧಾನಸಭೆ ಚುನಾವಣೆಯ ಕೊನೆಯ ಹಂತದ ಪ್ರಚಾರದಲ್ಲಿ ಸತತ ಎರಡನೇ ದಿನಕ್ಕೆ ಬೆಂಗಳೂರಿನಲ್ಲಿ ಸುಮಾರು 10 ಕಿಲೋಮೀಟರ್ ಉದ್ದದ ರೋಡ್‌ಶೋ ನಡೆಸಿದರು. ಇದು ಬಿಜೆಪಿಯ ಚುನಾವಣಾ ಭವಿಷ್ಯವನ್ನು  ಹೆಚ್ಚಿಸುವ ನಿರೀಕ್ಷೆಯಿದೆ.

ಪ್ರಧಾನಿ ಮೋದಿಯ ದರ್ಶನಕ್ಕಾಗಿ ಬೀದಿಗಳಲ್ಲಿ ಸಾಲುಗಟ್ಟಿ ನಿಂತಿದ್ದ ಬೃಹತ್ ಜನಸಮೂಹವು ಡ್ರಮ್ಸ್ ಸೇರಿದಂತೆ ಸಂಗೀತ ವಾದ್ಯಗಳನ್ನು ನುಡಿಸುವ ಚಿತ್ರಣವೂ ಇತ್ತು. ಕರ್ನಾಟಕದಲ್ಲಿ ಮೇ 10 ರಂದು ಮತದಾನ ನಡೆಯಲಿದ್ದು, ಮೇ 13 ರಂದು ಮತ ಎಣಿಕೆ ನಡೆಯಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT