ಮಲ್ಲಿಕಾರ್ಜುನ ಖರ್ಗೆ 
ರಾಜಕೀಯ

'ಇದು ನನ್ನ ಪ್ರತಿಷ್ಠೆಯ ಪ್ರಶ್ನೆ, ಅಲ್ಲಮಪ್ರಭು ಸೋಲು ನನ್ನ ಸೋಲಂತೆ, ನಾನು ಎರಡು ಬಾರಿ ಸೋತಂತಾಗಬಾರದು'

ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಕಲಬುರಗಿ ದಕ್ಷಿಣ ಕ್ಷೇತ್ರದ ಅಭ್ಯರ್ಥಿ ಅಲ್ಲಮಪ್ರಭು ಪಾಟೀಲ ಅವರನ್ನು ಗೆಲ್ಲಿಸಬೇಕು. ಅವರನ್ನು ಸೋಲಿಸಿದರೆ ನಾನೂ ಸೋತಂತೆ’

ಕಲಬುರಗಿ: ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಕಲಬುರಗಿ ದಕ್ಷಿಣ ಕ್ಷೇತ್ರದ ಅಭ್ಯರ್ಥಿ ಅಲ್ಲಮಪ್ರಭು ಪಾಟೀಲ ಅವರನ್ನು ಗೆಲ್ಲಿಸಬೇಕು. ಅವರನ್ನು ಸೋಲಿಸಿದರೆ ನಾನೂ ಸೋತಂತೆ’ ಎಂದು ಎಐಸಿಸಿ ಅಧ್ಯಕ್ಷ, ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಸೋಮವಾರ ಅಲ್ಲಮಪ್ರಭು ಪಾಟೀಲ ಆಯೋಜಿಸಿದ್ದ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ‘2019ರಲ್ಲಿ ಲೋಕಸಭೆ ಚುನಾವಣೆಯಲ್ಲಿ ಒಂದು ಬಾರಿ ಸೋಲಿಸಿದ್ದೀರಿ. ಈ ಬಾರಿ ಅಲ್ಲಮಪ್ರಭು ಸೋತರೆ ನಾನು ಸೋತಂತೆ. ಇದು ನನ್ನ ಪ್ರತಿಷ್ಠೆಯ ಪ್ರಶ್ನೆ, ನೀವು ನನ್ನನ್ನು ಎರಡು ಬಾರಿ (2019 ರ ಲೋಕಸಭೆ ಚುನಾವಣೆಯಲ್ಲಿ ಮೊದಲ ಬಾರಿಗೆ) ಸೋಲಿಸಿದ್ದೀರಿ ಎಂದರ್ಥ ಎಂದು ಭಾವುಕರಾಗಿ ನುಡಿದರು.

ನಾನು ಬಿಜೆಪಿ, ಜೆಡಿಎಸ್‌ನೊಂದಿಗೆ ಹೋರಾಡಿ ಜಿಲ್ಲೆಗೆ ಅಭಿವೃದ್ಧಿ ಕೆಲಸಗಳನ್ನು ಮಾಡಿಸಿದ್ದೇನೆ. ಸಂಸತ್ತಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೂ ಹೋರಾಡಿದ್ದೇನೆ. ನಾನು ಚುನಾವಣೆಯಲ್ಲಿ ಸೋತ ಬಳಿಕ ಸೋನಿಯಾ ಗಾಂಧಿ ಅವರು ರಾಜ್ಯಸಭೆಗೆ ಆಯ್ಕೆ ಮಾಡಿ ವಿರೋಧ ಪಕ್ಷದ ನಾಯಕನನ್ನಾಗಿ ಮಾಡಿದರು. ಇದೀಗ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷನಾಗಿದ್ದೇನೆ. ನೀವು ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಯ ಎಲ್ಲ 13 ಸ್ಥಾನಗಳಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿದರೆ ಮಾತ್ರ ನನ್ನ ಮರ್ಯಾದೆ ಉಳಿಯುತ್ತದೆ’ ಎಂದರು.

ಈಗ, ಗರಿಷ್ಠ ಸಂಖ್ಯೆಯ ಕಾಂಗ್ರೆಸ್ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಮೂಲಕ ನಿಮ್ಮ ಸರದಿಯಾಗಿದೆ. ಕಲಬುರಗಿ ಮತ್ತು ಯಾದಗಿರಿಯ ಜನರು ಎಲ್ಲಾ ಕಾಂಗ್ರೆಸ್ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕು ಏಕೆಂದರೆ ಎರಡೂ ಜಿಲ್ಲೆಗಳು ನನ್ನ ಕರ್ಮ ಭೂಮಿಗಳು," ಎಂದು ಅವರು ಹೇಳಿದರು.

371ರ ಜೆ ಕಲಂ ತಿದ್ದುಪಡಿ ಮಾಡಬೇಕೆಂಬ ಬೇಡಿಕೆಯನ್ನು ಕೇಂದ್ರದ ಬಿಜೆಪಿ ಸರಕಾರ ತಿರಸ್ಕರಿಸಿತ್ತು. ಆದರೆ ಮನಮೋಹನ್ ಸಿಂಗ್ ಸರಕಾರದಲ್ಲಿ ತಿದ್ದುಪಡಿ ತರಲು ಶ್ರಮಿಸಿದ್ದರು ಎಂದರು. ಇದರಿಂದ ಅನೇಕರು ಡಾಕ್ಟರ್, ಇಂಜಿನಿಯರ್ ಆಗಿದ್ದಾರೆ. ಆದರೆ ಇಂದಿನ ಬಿಜೆಪಿ ಸರಕಾರ ಯುವಕರಿಗೆ ಉದ್ಯೋಗ ಕಲ್ಪಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತಕ್ಕೆ UNSC ಸದಸ್ಯತ್ವಕ್ಕೆ ಬ್ರಿಟನ್ ಪ್ರಧಾನಿ Starmer ಬೆಂಬಲ; 2030 ರ ವೇಳೆಗೆ ಬ್ರಿಟನ್ ಜೊತೆಗಿನ ವ್ಯಾಪಾರ ದ್ವಿಗುಣ- Modi

ಅನ್ನಭಾಗ್ಯ: 5 ಕೆಜಿ ಅಕ್ಕಿ ಬದಲು ಇಂದಿರಾ ಕಿಟ್ ವಿತರಣೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

'ನನ್ನ ಸ್ನೇಹಿತನೊಂದಿಗೆ ಮಾತನಾಡಿದೆ': ಟ್ರಂಪ್‌ಗೆ ಕರೆ ಮಾಡಿ ಮೋದಿ ಅಭಿನಂದನೆ ಸಲ್ಲಿಸಿದ್ದೇಕೆ?

ಭಾರತವೇ ನಮಗೆ ಮಾದರಿ, ಅಕ್ರಮ ವಲಸೆ ತಡೆಗೂ ಸಹಕಾರಿ; ಬ್ರಿಟನ್ ನಲ್ಲೂ ಆಧಾರ್ ಜಾರಿಗೆ PM Keir Starmer ಉತ್ಸುಕ; Nandan Nilekani ಜೊತೆ ಸಭೆ!

Ranthambore: 'ಇದು ನನ್ನದು, ಇಲ್ಲ ನನ್ನದು'; ದಟ್ಟ ಅರಣ್ಯದಲ್ಲಿ ಅಮ್ಮ-ಮಗಳ ಬಿಗ್ ಫೈಟ್! ದಂಗಾದ ಪ್ರವಾಸಿಗರು, ಅಪರೂಪದ Video

SCROLL FOR NEXT