ಉಡುಗೊರೆಗಳನ್ನು ಎಸೆದು ಹೋದ ಗ್ರಾಮಸ್ಥರು 
ರಾಜಕೀಯ

'ನಿಮ್ಮ ಭಿಕ್ಷೆ ಯಾರಿಗೆ ಬೇಕು, ನಾವು ಬಿಜೆಪಿಗೆ ಓಟು ಹಾಕೋದಿಲ್ಲ': ಉಡುಗೊರೆಯನ್ನು ಸಿಟ್ಟಿನಿಂದ ಎಸೆದು ಹೋದ ಕೆ ಆರ್ ಪೇಟೆ ಗ್ರಾಮಸ್ಥರು!

ಸೀರೆ ಮತ್ತು ಇತರ ವಸ್ತುಗಳನ್ನು ಉಡುಗೊರೆಯಾಗಿ ನೀಡಿ ಮತದಾರರಿಗೆ ಆಮಿಷವೊಡ್ಡಲು ಯತ್ನಿಸಿದ್ದಕ್ಕೆ ಗ್ರಾಮಸ್ಥರು ಅದನ್ನು ಹಿಂತಿರುಗಿಸಿ ಘಟನೆ ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆಯಲ್ಲಿ ನಡೆದಿದೆ. 

ಕೆ ಆರ್ ಪೇಟೆ(ಮಂಡ್ಯ): ಸೀರೆ ಮತ್ತು ಇತರ ವಸ್ತುಗಳನ್ನು ಉಡುಗೊರೆಯಾಗಿ ನೀಡಿ ಮತದಾರರಿಗೆ ಆಮಿಷವೊಡ್ಡಲು ಯತ್ನಿಸಿದ್ದಕ್ಕೆ ಗ್ರಾಮಸ್ಥರು ಅದನ್ನು ಹಿಂತಿರುಗಿಸಿ ಘಟನೆ ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆಯಲ್ಲಿ ನಡೆದಿದೆ. 

ಕೆ ಆರ್ ಪೇಟೆಯ ಶಾಸಕ ಹಾಗೂ ಸಚಿವ ನಾರಾಯಣ ಗೌಡ ಮತ್ತು ಬಿಜೆಪಿ ನಾಯಕರು ಕ್ಷೇತ್ರದ ಮತದಾರರನ್ನು ಓಲೈಸಲು ಇತ್ತೀಚೆಗೆ ಸೀರೆ ಮತ್ತು ಇತರ ಕೆಲವು ವಸ್ತುಗಳನ್ನು ನೀಡಿದ್ದರಂತೆ. ಆದರೆ ಇದನ್ನು ಸ್ವೀಕರಿಸದ ಗ್ರಾಮಸ್ಥರು ನಮಗೆ ನಿಮ್ಮ ಭಿಕ್ಷೆ ಬೇಡ ನಾವು ಬಿಜೆಪಿಗೆ ಓಟು ಹಾಕುವುದಿಲ್ಲ ಎಂದು ವಸ್ತುಗಳನ್ನು ಎಸೆದ ಪ್ರಸಂಗ ನಡೆಯಿತು.

ಕ್ಷೇತ್ರದಲ್ಲಿ ಆಡಳಿತ ವಿರೋಧಿ ಅಲೆ ಕೇಳಿಬರುತ್ತಿದೆ. ಬಿಜೆಪಿ ಸರ್ಕಾರ ವಿರುದ್ಧ 40% ಕಮಿಷನ್ ಆರೋಪ ಭಾರೀ ಸದ್ದು ಮಾಡುತ್ತಿದ್ದು ಬಡವರು ಮತ್ತು ಮಧ್ಯಮ ವರ್ಗದವರನ್ನು ಆಕ್ರೋಶಕ್ಕೀಡುಮಾಡಿದೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT