10 ಹೈವೋಲ್ಟೇಜ್ ಕಣಗಳು 
ರಾಜಕೀಯ

ಗದ್ದುಗೆ ಗುದ್ದಾಟ: 10 ಹೈವೋಲ್ಟೇಜ್ ಕಣಗಳಲ್ಲಿ ಘಟಾನುಘಟಿ ನಾಯಕರು; ಮನಿ-ಮಸಲ್ ಪವರ್ ಜೋರು!

ಮೇ 10 ರಂದು ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ 224 ಕ್ಷೇತ್ರಗಳ ಪೈಕಿ ಈ ಬಾರಿ ರಾಜ್ಯದ 10 ವಿಧಾನಸಭಾ ಕ್ಷೇತ್ರಗಳು ಹೈವೋಲ್ಟೇಜ್ ಕ್ಷೇತ್ರಗಳಾಗಿ ಪರಿವರ್ತನೆಯಾಗಿವೆ.

ಬೆಂಗಳೂರು: ಮೇ 10 ರಂದು ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ 224 ಕ್ಷೇತ್ರಗಳ ಪೈಕಿ ಈ ಬಾರಿ ರಾಜ್ಯದ 10 ವಿಧಾನಸಭಾ ಕ್ಷೇತ್ರಗಳು ಹೈವೋಲ್ಟೇಜ್ ಕ್ಷೇತ್ರಗಳಾಗಿ ಪರಿವರ್ತನೆಯಾಗಿವೆ. ಈ 10 ಕ್ಷೇತ್ರಗಳಲ್ಲಿ ತೀವ್ರ ಹಣಾಹಣಿ ನಡೆಯುವ ಸಾಧ್ಯತೆಯಿದೆ

ವರುಣಾ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿನ ವರುಣಾ ಕ್ಷೇತ್ರದಿಂದ ಬಿಜೆಪಿ ಲಿಂಗಾಯತ ಮುಖಂಡ ವಿ. ಸೋಮಣ್ಣ ಅವರನ್ನು ಕಣಕ್ಕಿಳಿಸಿರುವುದರಿಂದ ಹೈವೋಲ್ಟೋಜ್ ಕಣವಾಗಿ ಮಾರ್ಪಟ್ಟಿದೆ.  ಲಿಂಗಾಯತ  ಸಮುದಾಯದ ಗಣನೀಯ ಪಾಲನ್ನು ಹೊಂದಿರುವ  ವರುಣಾದಲ್ಲಿ, ಕಾಂಗ್ರೆಸ್ ಪಕ್ಷದ ಸಿಎಂ ಸ್ಥಾನಕ್ಕೆ ಮುಂಚೂಣಿಯಲ್ಲಿರುವ ಸಿದ್ದರಾಮಯ್ಯ ಅವರ ಸ್ಪರ್ಧೆ ಕಠಿಣವಾಗಿದೆ.

ಕನಕಪುರ: ಮುಖ್ಯಮಂತ್ರಿ ಸ್ಥಾನದ ರೇಸ್‌ನಲ್ಲಿರುವ ರಾಜ್ಯ ಕಾಂಗ್ರೆಸ್‌ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರ ಭದ್ರಕೋಟೆಯಾಗಿರುವ ಕನಕಪುರದಲ್ಲಿ ಸಚಿವ ಆರ್‌.ಅಶೋಕ ಸ್ಪರ್ಧೆ ಅಚ್ಚರಿ ಮೂಡಿಸಿದ್ದಾರೆ. ಒಕ್ಕಲಿಗ ಭದ್ರಕೋಟೆಯಲ್ಲಿ ಬಿಜೆಪಿ ಹೈಕಮಾಂಡ್ ಅಶೋಕ್  ಅವರಿಗೆ ಸಮುದಾಯದ ಪ್ರಬಲ ನಾಯಕ ಎಂದು ಸಾಬೀತುಪಡಿಸುವ ಅವಕಾಶವನ್ನು ನೀಡಿದ್ದು, ಡಿಕೆ ಶಿವಕುಮಾರ್‌ಗೆ ಸ್ಪರ್ಧೆ ಸ್ವಲ್ಪ ಟಫ್ ಆಗಲಿದೆ.

ಚನ್ನಪಟ್ಟಣ: ಜೆಡಿಎಸ್ ಮತ್ತೆ ‘ಕಿಂಗ್‌ಮೇಕರ್’ ಆಗಲಿದೆ ಎಂಬ ನಿರೀಕ್ಷೆಯಲ್ಲಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಚನ್ನಪಟ್ಟಣದಲ್ಲಿ ಸ್ಪರ್ಧಿಸಿದ್ದಾರೆ.  2018ರಲ್ಲಿ ಚನ್ನಪಟ್ಟಣದಲ್ಲಿ ಸ್ಪರ್ಧಿಸಿ ಗೆದ್ದು ಎರಡನೇ ಬಾರಿಗೆ ಸಿಎಂ ಆದರು. ಆದರೆ ಈ ಕ್ಷೇತ್ರದಿಂದ ಐದು ಬಾರಿ ಶಾಸಕರಾಗಿರುವ ಬಿಜೆಪಿಯ ಸಿ.ಪಿ.ಯೋಗೇಶ್ವರ್ ಕುಮಾರಸ್ವಾಮಿಗೆ ಕಠಿಣ ಸವಾಲೊಡ್ಜಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿಯ ಪ್ರಮುಖ ನಾಯಕರು ಯೋಗೇಶ್ವರ್ ಪರ ಪ್ರಚಾರ ನಡೆಸಿದರು.

ಶಿಗ್ಗಾಂವ: ಹಾವೇರಿಯ ಈ ಕ್ಷೇತ್ರದಿಂದ ಸಿಎಂ ಬಸವರಾಜ ಬೊಮ್ಮಾಯಿ ಸತತ ನಾಲ್ಕನೇ ಬಾರಿಗೆ ಪುನರಾಯ್ಕೆ ಬಯಸಿದ್ದಾರೆ. ಕಾಂಗ್ರೆಸ್ ನಿಂದ ಪಠಾಣ್ ಯಾಸಿರ್ ಅಹಮದ್ ಖಾನ್ ಹಾಗೂ ಜೆಡಿಎಸ್ ನಿಂದ ಶಶಿಧರ್ ಯೆಲಿಗಾರ್ ಎದುರಾಳಿಗಳಾಗಿದ್ದು, ಬೊಮ್ಮಾಯಿ ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ.

ಹುಬ್ಬಳ್ಳಿ-ಧಾರವಾಡ ಸೆಂಟ್ರಲ್: ಈ ಭಾಗದ ಮಾಜಿ ಸಿಎಂ ಹಾಗೂ ಪ್ರಬಲ ಲಿಂಗಾಯತ ಮುಖಂಡ ಜಗದೀಶ ಶೆಟ್ಟರ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವುದರಿಂದ ಎಲ್ಲರ ಚಿತ್ತ ಈ ಕ್ಷೇತ್ರದತ್ತ ಹರಿದಿದೆ.  ಬಿಜೆಪಿಯ ಮಹೇಶ್ ತೆಂಗಿನಕಾಯಿ ವಿರುದ್ಧ ಶೆಟ್ಟರ್ ಸ್ಪರ್ಧಿಸಿದ್ದರೆ, ಬಿಜೆಪಿಯಲ್ಲಿ ಶೆಟ್ಟರ್ ಮತ್ತು ಅವರ ಮಿತ್ರರು-ವೈರಿಗಳ ನಡುವಿನ ಕದನ ಎಂದು ಪರಿಗಣಿಸಿದ್ದಾರೆ.

ಅಥಣಿ: ಬಿಜೆಪಿ ಟಿಕೆಟ್‌ ನಿರಾಕರಣೆ ಹಿನ್ನೆಲೆಯಲ್ಲಿ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಕಾಂಗ್ರೆಸ್‌ ಅಭ್ಯರ್ಥಿಯಾಗಿ ಬಿಜೆಪಿಯ ಮಹೇಶ ಕುಮಟಳ್ಳಿ ವಿರುದ್ಧ ಸೆಣಸಾಟ ನಡೆಸುತ್ತಿದ್ದಾರೆ. ಕ್ಷೇತ್ರವು ಎರಡೂ ಪಾಳಯಗಳು ಪ್ರಬಲ ಪ್ರಚಾರ ನಡೆಸಿವೆ.

ಹಾಸನ: ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ಪತ್ನಿ ಭವಾನಿ ಅವರನ್ನು ಕಣಕ್ಕಿಳಿಸುವ ಕುರಿತು ಪಕ್ಷದಲ್ಲಿ ಸಾಕಷ್ಟು ಚರ್ಚೆ ನಡೆದಿತ್ತು, ಆದರೆ ಅಂತಿಮವಾಗಿ ಬಿಜೆಪಿ ಶಾಸಕ ಪ್ರೀತಂ ಗೌಡ ವಿರುದ್ಧ ಜೆಡಿಎಸ್ ಪಕ್ಷದ ಕಾರ್ಯಕರ್ತ ಸ್ವರೂಪ್ ಪ್ರಕಾಶ್ ಅವರನ್ನು ಕಣಕ್ಕಿಳಿಸಿದೆ. ಪ್ರೀತಂ ಗೌಡ ಅವರನ್ನು ಸೋಲಿಸಿ ಎಂದು ಜೆಡಿಎಸ್ ನಾಯಕರಿಗೆ ಸವಾಲು ಹಾಕಿದ ಬೆನ್ನಲ್ಲೇ ಮತ್ತೆ ಸ್ಥಾನ ಪಡೆಯಲು ಜೆಡಿಎಸ್ ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದು, ಈ ಭಾಗದಲ್ಲಿ ತೀವ್ರ ಪೈಪೋಟಿ ನಡೆಯುವುದು ಖಚಿತ.

ಚಿತ್ತಾಪುರ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಅವರ ಕುಟುಂಬ ಸದಸ್ಯರ ವಿರುದ್ಧ ಕ್ರಿಮಿನಲ್ ಹಿನ್ನಲೆ ಹೊಂದಿರುವ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ ಷಡ್ಯಂತ್ರ ನಡೆಸುತ್ತಿದ್ದಾರೆ ಎಂಬ ಆಡಿಯೋ ಕ್ಲಿಪ್ ವೈರಲ್ ಆಗಿದ್ದು, ಎಲ್ಲರ ಕಣ್ಣು ಚಿತ್ತಾಪುರದತ್ತ ನೆಟ್ಟಿದೆ. ಮತ್ತು ಖರ್ಗೆ ಅವರ ಪುತ್ರ ಪ್ರಿಯಾಂಕ್ ಖರ್ಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ.

ಶಿಕಾರಿಪುರ: ಲಿಂಗಾಯತ ನಾಯಕ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಮ್ಮ ಪುತ್ರ ಬಿ.ವೈ.ವಿಜಯೇಂದ್ರ ಅವರಿಗಾಗಿ ಕ್ಷೇತ್ರ ತ್ಯಾಗ ಮಾಡಿರುವುದರಿಂದ ಶಿಕಾರಿಪುರ ಕ್ಷೇತ್ರದ ಫಲಿತಾಂಶ ಕಾದು ನೋಡಬೇಕಿದೆ. ಅವರು ಕಾಂಗ್ರೆಸ್‌ನ ಗೋಣಿ ಮಾಲತೇಶ್ ಮತ್ತು ಇತರ ಎಂಟು ಜನರ ವಿರುದ್ಧ ಸ್ಪರ್ಧಿಸಿದ್ದಾರೆ.

ಚಾಮರಾಜಪೇಟೆ:  ಕಾಂಗ್ರೆಸ್ ಅಭ್ಯರ್ಥಿ ಬಿ.ಜೆ.ಜಮೀರ್ ಅಹಮದ್ ಖಾನ್  ವಿರುದ್ಧ ಬಿಜೆಪಿಯಿಂದ  ನಿವೃತ್ತ ಐಪಿಎಸ್ ಅಧಿಕಾರಿ ಹಾಗೂ ಬೆಂಗಳೂರು ನಗರದ ಮಾಜಿ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಅವರನ್ನು ಕಣಕ್ಕಿಳಿದಿದ್ದಾರೆ. ಇಲ್ಲಿ ದೊಡ್ಡ ಹೋರಾಟ ನಿರೀಕ್ಷಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT