ರಣದೀಪ್ ಸಿಂಗ್ ಸುರ್ಜೇವಾಲ 
ರಾಜಕೀಯ

ಕರ್ನಾಟಕ ಚುನಾವಣೆ: ಬಿಜೆಪಿ ಈಗಾಗಲೇ ಸೋಲೊಪ್ಪಿಕೊಂಡಿದೆ- ರಣದೀಪ್ ಸುರ್ಜೇವಾಲಾ 

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಈಗಾಗಲೇ ಸೋಲೊಪ್ಪಿಕೊಂಡಿದೆ ಎಂದಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ, ನಾಳೆ ನಡೆಯಲಿರುವ ಮತ ಎಣಿಕೆಯಲ್ಲಿ ಪಕ್ಷ ಬಹುಮತ ಗಳಿಸಲಿದ್ದು, ಹೊಸ ಸರ್ಕಾರ ರಚಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಈಗಾಗಲೇ ಸೋಲೊಪ್ಪಿಕೊಂಡಿದೆ ಎಂದಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ, ನಾಳೆ ನಡೆಯಲಿರುವ ಮತ ಎಣಿಕೆಯಲ್ಲಿ ಪಕ್ಷ ಬಹುಮತ ಗಳಿಸಲಿದ್ದು, ಹೊಸ ಸರ್ಕಾರ ರಚಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸುರ್ಜೇವಾಲಾ, ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿದ ರಾಜ್ಯದ 6.5 ಕೋಟಿ ಜನರಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ನಾಳೆಯವರೆಗೂ, ಫಲಿತಾಂಶ ಹೊರಬೀಳುವವರೆಗೆ ಕಾಯೋಣ. ಬಿಜೆಪಿ ಈಗಾಗಲೇ ಸೋಲೊಪ್ಪಿಕೊಂಡಿದೆ ಎಂದರು. 

2018 ರಲ್ಲಿ ರಚನೆಯಾದ ಮೈತ್ರಿಯಂತೆಯೇ ಜೆಡಿಎಸ್ ಜೊತೆ ಸೇರಿ ಸರ್ಕಾರ ರಚಿಸುವಿರಾ ಎಂಬ ಪ್ರಶ್ನೆಗೆ ಉತ್ತರಿಸಿದ ಕಾಂಗ್ರೆಸ್ ನಾಯಕ, ಅವರು ಎಲ್ಲಿ ಬೇಕಾದರೂ ಹೋಗಲಿ. ಕಾಂಗ್ರೆಸ್  ಬಹುಮತದೊಂದಿಗೆ ಸರ್ಕಾರ ರಚಿಸುವ ವಿಶ್ವಾಸವಿದೆ ಎಂದರು.

ಬಹುದಿನಗಳ ಪ್ರಚಾರದ ನಂತರ ಬಿಜೆಪಿ ಅಥವಾ ಕಾಂಗ್ರೆಸ್ ಸ್ಪಷ್ಟ ಬಹುಮತವನ್ನು ಪಡೆಯದ ಸನ್ನಿವೇಶದಲ್ಲಿ ರಾಜ್ಯದಲ್ಲಿ ಅತಂತ್ರ ವಿಧಾನಸಭೆಯ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. ಈ ನಡುವೆ ಸುರ್ಜೇವಾಲ ಇಂತಹ ಹೇಳಿಕೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

ಕಳ್ಳಬಟ್ಟಿ ಸಾರಾಯಿ–ಸೇಂದಿ ದಂಧೆಕೋರರು ಗಡಿಪಾರು: ಸಚಿವ ತಿಮ್ಮಾಪುರ ಸೂಚನೆ

SCROLL FOR NEXT