ಆರ್ ಅಶೋಕ್ 
ರಾಜಕೀಯ

ಬಿಜೆಪಿಗೆ ಬಹುಮತ ಬರದಿದ್ದರೆ ಪ್ಲಾನ್ 'ಬಿ' ರೆಡಿ ಇದೆ; ನಾವು ರಾಜಕಾರಣಿಗಳು, ಸನ್ಯಾಸಿಗಳಲ್ಲ: ಆರ್ ಅಶೋಕ್

ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ಬರದಿದ್ದರೆ ಪ್ಲಾನ್ ಬಿ ಸಿದ್ದವಾಗಿದೆ ಎಂದು ಸಚಿವ ಆರ್ ಅಶೋಕ್ ಹೇಳಿದ್ದಾರೆ.

ಬೆಂಗಳೂರು: ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ಬರದಿದ್ದರೆ ಪ್ಲಾನ್ ಬಿ ಸಿದ್ದವಾಗಿದೆ ಎಂದು ಸಚಿವ ಆರ್ ಅಶೋಕ್ ಹೇಳಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಇನ್ನೊಂದು ವರ್ಷದಲ್ಲಿ ಪಾರ್ಲಿಮೆಂಟ್ ಚುನಾವಣೆ ಇದೆ. ಅದನ್ನು ಕೂಡ ಗಮನದಲ್ಲಿಟ್ಟುಕೊಂಡು ಪೂರ್ಣ ಬಹುಮತದಲ್ಲಿ ಈ ಬಾರಿ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ತಯಾರಿ ಮಾಡುತ್ತಿದ್ದೇವೆ. ಅಕಸ್ಮಾತ್ ಬಂದಿಲ್ಲವೆಂದಾದರೆ ಬಿ ಫಾರ್ಮ್ಯುಲಾ ಕೂಡ ರೆಡಿಯಿದೆ ಎಂದರು.

ಸಹಜವಾಗಿ ರಾಜಕೀಯದಲ್ಲಿ ಇಂತಹ ಪ್ರಕ್ರಿಯೆಗಳು ನಡೆಯುತ್ತಿರುತ್ತವೆ. ನಾವು ರಾಜಕೀಯ ಪಕ್ಷದವರು, ಸನ್ಯಾಸಿಗಳಲ್ಲ. ಬಿ ಪ್ಲಾನ್ ಪ್ರಕಾರ ಚುನಾವಣಾ ತಂತ್ರಗಾರಿಕೆಯನ್ನು ಸಿದ್ಧಮಾಡಿದ್ದೇವೆ ಎಂದರು.

ಚುನಾವಣಾ ಫಲಿತಾಂಶ ನಾಳೆ ಪ್ರಕಟಗೊಳ್ಳಲಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಒಂದೆಡೆ ಖರ್ಗೆ ನಿವಾಸದಲ್ಲಿ ಕೈ ನಾಯಕರು ಸಭೆ ನಡೆಸುತ್ತಿದ್ದರೆ, ಮತ್ತೊಂದೆಡೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನಿವಾಸದಲ್ಲಿ ಬಿಜೆಪಿ ನಾಯಕರು ಸಭೆ ನಡೆಸುತ್ತಿದ್ದಾರೆ.

ಯಡಿಯೂರಪ್ಪ ಅವರ ಬೆಂಗಳೂರಿನ ಕಾವೇರಿ ನಿವಾಸಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌, ಗೋವಿಂದ ಕಾರಜೋಳ, ಮುರುಗೇಶ ನಿರಾಣಿ, ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಅವರು ಭೇಟಿ ನೀಡಿದ್ದು, ರಾಜ್ಯ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Geneva ಸಭೆಯಲ್ಲಿ ಭಾರತದ ವಿರುದ್ಧ ಟೀಕೆ; ‘ರಾಜಕೀಯ ಪ್ರೇರಿತ ಹೇಳಿಕೆಗಳ ಒಪ್ಪಲ್ಲ’ ಎಂದ MEA, ವಿಶ್ವಸಂಸ್ಥೆ ಸಮಿತಿ ವಿರುದ್ಧ ಕಿಡಿ..!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

'ಟಾಕ್ಸಿಕ್' ಸಿನಿಮಾ ವಿರುದ್ಧ ಸುಳ್ಳು ಮಾಹಿತಿ ಪ್ರಕಟಿಸದಂತೆ ಕೋರ್ಟ್ ತಡೆಯಾಜ್ಞೆ!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!