ಶಾಮನೂರ್ ಶಿವಶಂಕರಪ್ಪ 
ರಾಜಕೀಯ

ಲಿಂಗಾಯತವಾದ ಹಿಂದುತ್ವವಲ್ಲ, ನಾವು ಬಸವ ತತ್ವ ಪಾಲಿಸುವವರು, ಬಿಜೆಪಿಯ ಹಿಂದುತ್ವವಾದ ಒಪ್ಪುವುದಿಲ್ಲ: ಶಾಮನೂರ್ ಶಿವಶಂಕರಪ್ಪ

ಲಿಂಗಾಯತವಾದ ಹಿಂದುತ್ವವಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ, ಅಖಿಲ ಭಾರತ ವೀರಶೈವ ಮಹಾಸಭಾ ಮುಖ್ಯಸ್ಥ, ದಾವಣಗೆರೆ ದಕ್ಷಿಣ ಕ್ಷೇತ್ರದಿಂದ ಸತತ 6ನೇ ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಭಾರತದ ಅತ್ಯಂತ ಹಿರಿಯ 92 ವರ್ಷದ ಶಾಮನೂರ್ ಶಿವಶಂಕರಪ್ಪ ಹೇಳಿದ್ದಾರೆ.

ಬೆಂಗಳೂರು: ಲಿಂಗಾಯತವಾದ ಹಿಂದುತ್ವವಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ, ಅಖಿಲ ಭಾರತ ವೀರಶೈವ ಮಹಾಸಭಾ ಮುಖ್ಯಸ್ಥ, ದಾವಣಗೆರೆ ದಕ್ಷಿಣ ಕ್ಷೇತ್ರದಿಂದ ಸತತ 6ನೇ ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಭಾರತದ ಅತ್ಯಂತ ಹಿರಿಯ 92 ವರ್ಷದ ಶಾಮನೂರ್ ಶಿವಶಂಕರಪ್ಪ ಹೇಳಿದ್ದಾರೆ.

ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪ್ರತಿನಿಧಿ ನಡೆಸಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ಟಿಕೆಟ್ ನೀಡಿದ್ದಕ್ಕೆ ಸ್ಪರ್ಧಿಸಿದೆ. ಕ್ಷೇತ್ರದ ಜನರು ಕೂಡ ನನ್ನನ್ನು ಆಶೀರ್ವದಿಸಿದ್ದಾರೆ, ಹರಸಿದ್ದಾರೆ ಎಂದರು.

ನಮ್ಮ ಪಕ್ಷದಲ್ಲಿ ಹಲವು ಸಮರ್ಥ ಲಿಂಗಾಯತ ನಾಯಕರಿದ್ದಾರೆ. ಹಾಗೆಂದು ಅವರ ಹೆಸರುಗಳನ್ನು ನಾನು ಸಿಎಂ ಸ್ಥಾನಕ್ಕೆ ಪ್ರಸ್ತಾವಿಸುತ್ತಿಲ್ಲ. ನನಗೆ ಸಿಎಂ ಸ್ಥಾನ ಕೊಟ್ಟರೆ ಬೇಡ ಎನ್ನುವುದಿಲ್ಲ, ಮುಖ್ಯಮಂತ್ರಿ ಹುದ್ದೆ ಬೇಡ ಎಂದು ಯಾರು ಹೇಳುತ್ತಾರೆ ಎಂದು ಕೇಳಿದರು.

ಭ್ರಷ್ಟಾಚಾರರಹಿತ ಆಡಳಿತ ಕೊಡುವುದು ನಮ್ಮ ಪ್ರಮುಖ ಆದ್ಯತೆ, ಆರಂಭದಲ್ಲಿ ಲಿಂಗಾಯತ ಸಮುದಾಯ ಕಾಂಗ್ರೆಸ್ ಗೆ ಬೆಂಬಲ ನೀಡುತ್ತಾ ಬಂದಿತ್ತು. ಈ ಬಾರಿ ಜಗದೀಶ್ ಶೆಟ್ಟರ್ ಸೇರ್ಪಡೆ ನಮಗೆ ಖಂಡಿತಾ ಸಹಾಯವಾಗಿದೆ ಎಂದರು.

ಲಿಂಗಾಯತವಾದ ಹಿಂದುತ್ವವಲ್ಲ: ಬಿಜೆಪಿಯ ಹಿಂದುತ್ವವಾದವನ್ನು ನಾವು ಒಪ್ಪುವುದಿಲ್ಲ. ನಾವು ಹಿಂದೂ ತತ್ವಗಳನ್ನು ಪಾಲಿಸುವವರಲ್ಲ, ಬಸವತತ್ವವನ್ನು ಪಾಲಿಸುವವರು. ನಾವು ಹಿಂದೂಗಳಲ್ಲ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT