ಡಿಕೆಶಿ, ಸಿದ್ದರಾಮಯ್ಯ ಜತೆ ಒನ್ ಟು ಒನ್ ಚರ್ಚಿಸಿದ ಖರ್ಗೆ 
ರಾಜಕೀಯ

ಸಿಎಂ ಪಟ್ಟಕ್ಕಾಗಿ ಫೈಟ್: ಡಿಕೆಶಿ, ಸಿದ್ದರಾಮಯ್ಯ ಜತೆ ಒನ್ ಟು ಒನ್ ಚರ್ಚಿಸಿದ ಖರ್ಗೆ

ಕರ್ನಾಟಕದಲ್ಲಿ ಕಾಂಗ್ರೆಸ್‌ ಭರ್ಜರಿ ಗೆಲುವು ಸಾಧಿಸಿದ ನಂತರ ಮುಖ್ಯಮಂತ್ರಿ ಪಟ್ಟಕ್ಕಾಗಿ ತೀವ್ರ ಪೈಪೋಟಿ ನಡೆಯುತ್ತಿದ್ದು, ಸಿಎಂ ಕುರ್ಚಿಗಾಗಿ ಪಟ್ಟು ಹಿಡಿದಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್...

ನವದೆಹಲಿ: ಕರ್ನಾಟಕದಲ್ಲಿ ಕಾಂಗ್ರೆಸ್‌ ಭರ್ಜರಿ ಗೆಲುವು ಸಾಧಿಸಿದ ನಂತರ ಮುಖ್ಯಮಂತ್ರಿ ಪಟ್ಟಕ್ಕಾಗಿ ತೀವ್ರ ಪೈಪೋಟಿ ನಡೆಯುತ್ತಿದ್ದು, ಸಿಎಂ ಕುರ್ಚಿಗಾಗಿ ಪಟ್ಟು ಹಿಡಿದಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಜೊತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ ಅವರು ಒನ್ ಟು ಒನ್ ಸಭೆ ನಡೆಸಿ, ಇಬ್ಬರ ವಾದವನ್ನು ಆಲಿಸುತ್ತಿದ್ದಾರೆ.

ಡಿಕೆ ಶಿವಕುಮಾರ್ ಅವರೊಂದಿಗಿನ ಸಭೆ ಮುಗಿದಿದ್ದು, ಇದೀಗ ಖರ್ಗೆ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸುತ್ತಿದ್ದಾರೆ.

ಖರ್ಗೆ ಭೇಟಿ ವೇಳೆ ಡಿಕೆ ಶಿವಕುಮಾರ್ ಅವರು ಸಿಎಂ ಸ್ಥಾನಕ್ಕಾಗಿ ಪಟ್ಟು ಹಿಡಿದಿದ್ದು, ಕೊಟ್ಟರೆ ಸಿಎಂ ಹುದ್ದೆ ಕೊಡಿ. ಇಲ್ಲದಿದ್ದರೆ ನನಗೆ ಯಾವುದೇ ಹುದ್ದೆ ಬೇಡ ಒಬ್ಬ ಶಾಸಕನಾಗಿ ಮುಂದುವರೆಯುತ್ತೇನೆ ಎಂದು ಹೇಳಿದ್ದಾರೆ.

ಖರ್ಗೆ ಅವರೊಂದಿಗೆ ಸಭೆ ಮುಗಿಸಿ ಹೊರಬಂದ ಡಿಕೆ ಶಿವಕುಮಾರ್ ಅವರು ಮಾಧ್ಯಮಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿದೆ ತೆರಳಿದ್ದಾರೆ. 

ನಾನು ಮೂಲ ಕಾಂಗ್ರೆಸ್ಸಿಗ. ಪಕ್ಷವನ್ನು ತಳಮಟ್ಟದಿಂದ ಕಟ್ಟಿದ್ದೇನೆ. ಸೋತು ಸುಣ್ಣವಾಗಿದ್ದ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದೇನೆ. ಮಾತು ಕೊಟ್ಟಂತೆ ನಡೆದಿದ್ದೇನೆ. ಹೊರಗಿನಿಂದ ಬಂದವರು ಅಧಿಕಾರ ಅನುಭವಿಸಿದ್ದಾರೆ. ಮೂಲ ಕಾಂಗ್ರೆಸ್ಸಿಗನಾಗಿರುವ ನನಗೆ ಸಿಎಂ ಸ್ಥಾನ ನೀಡಲೇಬೇಕು ಎಂದು ಡಿಕೆ ಶಿವಕುಮಾರ್ ಹೈಕಮಾಂಡ್ ಮುಂದೆ ಪಟ್ಟು ಹಿಡಿದ್ದಾರೆ ಅನ್ನೋ ಮಾತುಗಳು ಕೇಳಿಬರುತ್ತಿವೆ.

ಇನ್ನು ಡಿಕೆ ಶಿವಕುಮಾರ್ ಜೊತೆ ಚರ್ಚೆ ನಡೆಸಿದ ಬಳಿಕ ಖರ್ಗೆ ಅವರು ಸಿದ್ದರಾಮಯ್ಯ ಅವರೊಂದಿಗೆ ಪ್ರತ್ಯೇಕ ಚರ್ಚೆ ನಡೆಸುತ್ತಿದ್ದು, ಇಬ್ಬರು ನಾಯಕರ ವಾದವನ್ನು ಆಲಿಸಿದ ನಂತರ ಖರ್ಗೆ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಚರ್ಚಿಸಲಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!