ಹೆಚ್ ಸಿ ಮಹದೇವಪ್ಪ 
ರಾಜಕೀಯ

ಸಿದ್ದರಾಮಯ್ಯ ಸಿಎಂ ಆಗುತ್ತಿರುವುದು ಸಂತಸ, ಅಧಿಕಾರ ಹಂಚಿಕೆಯ ಪ್ರಸ್ತಾಪವೇ ಇಲ್ಲ: ಹೆಚ್.ಸಿ. ಮಹದೇವಪ್ಪ

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಲು ಸಜ್ಜಾಗಿರುವುದು ಸಂತಸ ತಂದಿದೆ ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ದಲಿತ ಮುಖಂಡ ಹೆಚ್.ಸಿ. ಮಹದೇವಪ್ಪ ಅವರು ಬುಧವಾರ ತಿಳಿಸಿದ್ದಾರೆ.

ಬೆಂಗಳೂರು: ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಲು ಸಜ್ಜಾಗಿರುವುದು ಸಂತಸ ತಂದಿದೆ ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ದಲಿತ ಮುಖಂಡ ಹೆಚ್.ಸಿ. ಮಹದೇವಪ್ಪ ಅವರು ಬುಧವಾರ ತಿಳಿಸಿದ್ದಾರೆ.

ಅಧಿಕಾರ ಹಂಚಿಕೆಯ ಪ್ರಸ್ತಾಪವೇ ಇಲ್ಲ ಎಂದು ಸಿದ್ದರಾಮಯ್ಯ ಅವರ ಆಪ್ತರಾದ ಮಹದೇವಪ್ಪ ಹೇಳಿಕೆ ನೀಡಿದ್ದಾರೆ. ಸಿದ್ದರಾಮಯ್ಯ ಮತ್ತು ಶಿವಕುಮಾರ್ ಅವರ ನಡುವೆ ಎರಡು ಮತ್ತು ಮೂರು ವರ್ಷಗಳ ಅಧಿಕಾರ ಹಂಚಿಕೆಯ ಪ್ರಸ್ತಾಪವು ಕೇವಲ ಗಾಳಿ ಸುದ್ದಿಯಷ್ಟೇ ಎಂದಿದ್ದಾರೆ.

'ಸಿಎಂ ಸ್ಥಾನಕ್ಕೆ ಸಾಕಷ್ಟು ಮಂದಿ ಆಕಾಂಕ್ಷಿಗಳಿದ್ದು, ಒಬ್ಬರನ್ನು ಮಾತ್ರ ಸಿಎಂ ಮಾಡಬಹುದಾಗಿದೆ. ಹೀಗಾಗಿ, ಎಲ್ಲ ಅಂಶಗಳನ್ನು ವಿಶ್ಲೇಷಿಸಿ ಹೈಕಮಾಂಡ್ ಈ ನಿರ್ಧಾರ ಕೈಗೊಂಡಿದೆ' ಎಂದರು.

'ಸದ್ಯದ ರಾಜಕೀಯ ಸನ್ನಿವೇಶವನ್ನು ಕೂಲಂಕಷವಾಗಿ ವಿಶ್ಲೇಷಿಸಿದ ನಂತರ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಸಿಎಂ ಆಗುವ ಆಕಾಂಕ್ಷೆಯನ್ನು ಹೊಂದಿರುವುದು ತಪ್ಪಲ್ಲ. ಆದರೆ, ಸಿದ್ದರಾಮಯ್ಯ ಅವರ ಕ್ಲೀನ್ ಇಮೇಜ್ ಕಾಂಗ್ರೆಸ್ ಪಕ್ಷವನ್ನು ನಂಬಲು ಜನರಿಗೆ ಸಹಾಯ ಮಾಡಿದೆ' ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT