ಪರಮೇಶ್ವರ್ 
ರಾಜಕೀಯ

ಮುಖ್ಯಮಂತ್ರಿ ಆಯ್ಕೆಯಲ್ಲಿ ಯಾವುದೇ ವಿವಾದವಿಲ್ಲ: ಸಿಎಂ ಸ್ಥಾನದ ಆಕಾಂಕ್ಷಿ ಡಾ. ಜಿ. ಪರಮೇಶ್ವರ್

ರಾಜ್ಯದಲ್ಲಿ ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ನಂತರ ರಾಷ್ಟ್ರ ರಾಜಧಾನಿಯಲ್ಲಿ ಮುಖ್ಯಮಂತ್ರಿ ಆಯ್ಕೆಯ ಕುರಿತು ಕಸರತ್ತುಗಳು ನಡೆಯುತ್ತಿರುವ ವೇಳೆ, ಕರ್ನಾಟಕದ ಮುಖ್ಯಮಂತ್ರಿ ಆಯ್ಕೆಯಲ್ಲಿ ಯಾವುದೇ ವಿವಾದವಿಲ್ಲ ಎಂದು ಕಾಂಗ್ರೆಸ್ ನಾಯಕ ಜಿ. ಪರಮೇಶ್ವರ ಬುಧವಾರ ಹೇಳಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ನಂತರ ರಾಷ್ಟ್ರ ರಾಜಧಾನಿಯಲ್ಲಿ ಮುಖ್ಯಮಂತ್ರಿ ಆಯ್ಕೆಯ ಕುರಿತು ಕಸರತ್ತುಗಳು ನಡೆಯುತ್ತಿರುವ ವೇಳೆ, ಕರ್ನಾಟಕದ ಮುಖ್ಯಮಂತ್ರಿ ಆಯ್ಕೆಯಲ್ಲಿ ಯಾವುದೇ ವಿವಾದವಿಲ್ಲ ಎಂದು ಕಾಂಗ್ರೆಸ್ ನಾಯಕ ಜಿ. ಪರಮೇಶ್ವರ ಬುಧವಾರ ಹೇಳಿದ್ದಾರೆ.

'ಕರ್ನಾಟಕ ಸಿಎಂ ಆಯ್ಕೆಯಲ್ಲಿ ಯಾವುದೇ ವಿವಾದವಿಲ್ಲ ಎಂದು ಸ್ಪಷ್ಟಪಡಿಸುತ್ತೇನೆ. ಸಿಎಂ ಆಯ್ಕೆಯಲ್ಲಿ ಒಂದು ವಿಧಾನವನ್ನು ಅನುಸರಿಸಲಾಗುತ್ತಿದೆ. ಪಕ್ಷದ ಹೈಕಮಾಂಡ್ ಸಿಎಂ ಅಭ್ಯರ್ಥಿಗಳನ್ನು ಭೇಟಿ ಮಾಡುತ್ತಿದ್ದು, ಇಂದು ಅಥವಾ ನಾಳೆ ಅಂತಿಮಗೊಳಿಸಲಾಗುವುದು' ಎಂದು ಜಿ ಪರಮೇಶ್ವರ ಎಎನ್‌ಐಗೆ ತಿಳಿಸಿದ್ದಾರೆ.

ಮಂಗಳವಾರ ಪಕ್ಷದ ಹೈಕಮಾಂಡ್ ಹೇಳಿದರೆ ಮುಖ್ಯಮಂತ್ರಿಯ ಜವಾಬ್ದಾರಿಯನ್ನು ಹೊರಲು ಸಿದ್ಧ ಎಂದು ಹೇಳುವ ಮೂಲಕ ಪರಮೇಶ್ವರ್ ಅಚ್ಚರಿ ಮೂಡಿಸಿದ್ದರು. ಅಲ್ಲದೆ, ದಲಿತ ನಾಯಕ ಮುಖ್ಯಮಂತ್ರಿಯಾಗಬೇಕು ಎಂದು ಹೇಳಿದ್ದರು.

ಕರ್ನಾಟಕದಲ್ಲಿ ದಲಿತರಿಗೆ ಪ್ರಾತಿನಿಧ್ಯ ಕೇಳುವುದು ಸಹಜ. ಕಾಂಗ್ರೆಸ್‌ಗೆ ಮತ ಹಾಕುವ ದಲಿತರು ಪ್ರಾತಿನಿಧ್ಯ ಕೇಳುವುದು ಸಹಜ. ಪಕ್ಷದ ಹೈಕಮಾಂಡ್‌ನಲ್ಲಿರುವ ಎಲ್ಲರಿಗೂ ನಾನು ಗೊತ್ತು. ಪರಮೇಶ್ವರ್ ಅವರನ್ನು ಸಿಎಂ ಮಾಡಬೇಕಾದ ಪರಿಸ್ಥಿತಿ ಬಂದರೆ ಅವರೇ ಮಾಡ್ತಾರೆ. ನಾನು ಲಾಬಿ ಮಾಡುವುದಿಲ್ಲ ಎಂದು ಅವರು ಹೇಳಿದರು.

ವಿಧಾನಸಭೆ ಚುನಾವಣೆಯಲ್ಲಿ ಸ್ಪಷ್ಟ ಜನಾದೇಶ ಪಡೆದರೂ ಮುಖ್ಯಮಂತ್ರಿ ಯಾರೆಂಬ ಸಸ್ಪೆನ್ಸ್ ಇದೀಗ ಮುಂದುವರಿದಿದೆ. 

ಕರ್ನಾಟಕದಲ್ಲಿ ಸರ್ಕಾರ ರಚನೆ ಮತ್ತು ಮುಂದಿನ ಮುಖ್ಯಮಂತ್ರಿ ಕುರಿತು ಪಕ್ಷದ ಕೇಂದ್ರ ನಾಯಕತ್ವದೊಂದಿಗೆ ಚರ್ಚಿಸಲು ಸಿಎಂ ಸ್ಥಾನದ ಆಕಾಂಕ್ಷಿಗಳಾದ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಈಗಾಗಲೇ ರಾಷ್ಟ್ರ ರಾಜಧಾನಿಯಲ್ಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪಶ್ಚಿಮ ಏಷ್ಯಾದಲ್ಲಿ ಶಾಂತಿ ಸ್ಥಾಪಿಸಲು ಭಾರತ ಎಲ್ಲ ರೀತಿಯ ಬೆಂಬಲ ನೀಡಲು ಸಿದ್ಧ: ಯುಎಇಯಲ್ಲಿ ಮೋದಿ

ಇಂಧನ ಬೆಲೆ ಏರಿಕೆ ನಡುವೆ ಯುಎಇಗೆ ಪ್ರಧಾನಿ; ಎಲ್ ಪಿಜಿ, ರಕ್ಷಣಾ ಪಾಲುದಾರಿಕೆಯಲ್ಲಿ ಮಹತ್ವದ ಒಪ್ಪಂದ

'ಅಕ್ರಮ ಮತ್ತೆ ನಡೆಯಲು ಅವಕಾಶ ಕೊಡುವುದಿಲ್ಲ'; ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ NEET ಪರೀಕ್ಷೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್; Video

Fuel Price Hike: ತರಕಾರಿ, ಧಾನ್ಯಗಳಿಂದ ಹಿಡಿದು ಕ್ಯಾಬ್ ರೈಡ್ ವರೆಗೆ, ಮುಂಬರುವ ದಿನಗಳಲ್ಲಿ ಏನೆಲ್ಲ ದುಬಾರಿ?

ಇರಾನ್-ಅಮೆರಿಕ ನಡುವೆ ಭಾರತ ಸಮರ್ಥ್ಯ ಮಧ್ಯವರ್ತಿ ಎಂದ ರಷ್ಯಾ ವಿದೇಶಾಂಗ ಸಚಿವ; ಪಾಕಿಸ್ತಾನ ಬಗ್ಗೆ ಹೇಳಿದ್ದೇನು?

SCROLL FOR NEXT