ಪರಮೇಶ್ವರ್ 
ರಾಜಕೀಯ

ಮುಖ್ಯಮಂತ್ರಿ ಆಯ್ಕೆಯಲ್ಲಿ ಯಾವುದೇ ವಿವಾದವಿಲ್ಲ: ಸಿಎಂ ಸ್ಥಾನದ ಆಕಾಂಕ್ಷಿ ಡಾ. ಜಿ. ಪರಮೇಶ್ವರ್

ರಾಜ್ಯದಲ್ಲಿ ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ನಂತರ ರಾಷ್ಟ್ರ ರಾಜಧಾನಿಯಲ್ಲಿ ಮುಖ್ಯಮಂತ್ರಿ ಆಯ್ಕೆಯ ಕುರಿತು ಕಸರತ್ತುಗಳು ನಡೆಯುತ್ತಿರುವ ವೇಳೆ, ಕರ್ನಾಟಕದ ಮುಖ್ಯಮಂತ್ರಿ ಆಯ್ಕೆಯಲ್ಲಿ ಯಾವುದೇ ವಿವಾದವಿಲ್ಲ ಎಂದು ಕಾಂಗ್ರೆಸ್ ನಾಯಕ ಜಿ. ಪರಮೇಶ್ವರ ಬುಧವಾರ ಹೇಳಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ನಂತರ ರಾಷ್ಟ್ರ ರಾಜಧಾನಿಯಲ್ಲಿ ಮುಖ್ಯಮಂತ್ರಿ ಆಯ್ಕೆಯ ಕುರಿತು ಕಸರತ್ತುಗಳು ನಡೆಯುತ್ತಿರುವ ವೇಳೆ, ಕರ್ನಾಟಕದ ಮುಖ್ಯಮಂತ್ರಿ ಆಯ್ಕೆಯಲ್ಲಿ ಯಾವುದೇ ವಿವಾದವಿಲ್ಲ ಎಂದು ಕಾಂಗ್ರೆಸ್ ನಾಯಕ ಜಿ. ಪರಮೇಶ್ವರ ಬುಧವಾರ ಹೇಳಿದ್ದಾರೆ.

'ಕರ್ನಾಟಕ ಸಿಎಂ ಆಯ್ಕೆಯಲ್ಲಿ ಯಾವುದೇ ವಿವಾದವಿಲ್ಲ ಎಂದು ಸ್ಪಷ್ಟಪಡಿಸುತ್ತೇನೆ. ಸಿಎಂ ಆಯ್ಕೆಯಲ್ಲಿ ಒಂದು ವಿಧಾನವನ್ನು ಅನುಸರಿಸಲಾಗುತ್ತಿದೆ. ಪಕ್ಷದ ಹೈಕಮಾಂಡ್ ಸಿಎಂ ಅಭ್ಯರ್ಥಿಗಳನ್ನು ಭೇಟಿ ಮಾಡುತ್ತಿದ್ದು, ಇಂದು ಅಥವಾ ನಾಳೆ ಅಂತಿಮಗೊಳಿಸಲಾಗುವುದು' ಎಂದು ಜಿ ಪರಮೇಶ್ವರ ಎಎನ್‌ಐಗೆ ತಿಳಿಸಿದ್ದಾರೆ.

ಮಂಗಳವಾರ ಪಕ್ಷದ ಹೈಕಮಾಂಡ್ ಹೇಳಿದರೆ ಮುಖ್ಯಮಂತ್ರಿಯ ಜವಾಬ್ದಾರಿಯನ್ನು ಹೊರಲು ಸಿದ್ಧ ಎಂದು ಹೇಳುವ ಮೂಲಕ ಪರಮೇಶ್ವರ್ ಅಚ್ಚರಿ ಮೂಡಿಸಿದ್ದರು. ಅಲ್ಲದೆ, ದಲಿತ ನಾಯಕ ಮುಖ್ಯಮಂತ್ರಿಯಾಗಬೇಕು ಎಂದು ಹೇಳಿದ್ದರು.

ಕರ್ನಾಟಕದಲ್ಲಿ ದಲಿತರಿಗೆ ಪ್ರಾತಿನಿಧ್ಯ ಕೇಳುವುದು ಸಹಜ. ಕಾಂಗ್ರೆಸ್‌ಗೆ ಮತ ಹಾಕುವ ದಲಿತರು ಪ್ರಾತಿನಿಧ್ಯ ಕೇಳುವುದು ಸಹಜ. ಪಕ್ಷದ ಹೈಕಮಾಂಡ್‌ನಲ್ಲಿರುವ ಎಲ್ಲರಿಗೂ ನಾನು ಗೊತ್ತು. ಪರಮೇಶ್ವರ್ ಅವರನ್ನು ಸಿಎಂ ಮಾಡಬೇಕಾದ ಪರಿಸ್ಥಿತಿ ಬಂದರೆ ಅವರೇ ಮಾಡ್ತಾರೆ. ನಾನು ಲಾಬಿ ಮಾಡುವುದಿಲ್ಲ ಎಂದು ಅವರು ಹೇಳಿದರು.

ವಿಧಾನಸಭೆ ಚುನಾವಣೆಯಲ್ಲಿ ಸ್ಪಷ್ಟ ಜನಾದೇಶ ಪಡೆದರೂ ಮುಖ್ಯಮಂತ್ರಿ ಯಾರೆಂಬ ಸಸ್ಪೆನ್ಸ್ ಇದೀಗ ಮುಂದುವರಿದಿದೆ. 

ಕರ್ನಾಟಕದಲ್ಲಿ ಸರ್ಕಾರ ರಚನೆ ಮತ್ತು ಮುಂದಿನ ಮುಖ್ಯಮಂತ್ರಿ ಕುರಿತು ಪಕ್ಷದ ಕೇಂದ್ರ ನಾಯಕತ್ವದೊಂದಿಗೆ ಚರ್ಚಿಸಲು ಸಿಎಂ ಸ್ಥಾನದ ಆಕಾಂಕ್ಷಿಗಳಾದ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಈಗಾಗಲೇ ರಾಷ್ಟ್ರ ರಾಜಧಾನಿಯಲ್ಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT