ಎಸ್ ಟಿ ಸೋಮಶೇಖರ್ 
ರಾಜಕೀಯ

ನಾವು ಪಕ್ಷ ಬಿಡಲು ಪ್ರೇರಣೆ ನೀಡಿದ್ದೇ ಸಿದ್ದರಾಮಯ್ಯ-ಡಾ ಸುಧಾಕರ್ ಬಳಿಕ ಮಾಜಿ ಸಚಿವ ಎಸ್ ಟಿ ಸೋಮಶೇಖರ್ ಸ್ಫೋಟಕ ಹೇಳಿಕೆ

ರಾಜ್ಯದಲ್ಲಿ ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ 135 ಸ್ಥಾನಗಳು ಸಿಕ್ಕಿ ಸರ್ಕಾರ ರಚಿಸಲು ಹೊರಟಿರುವ ಸಂದರ್ಭದಲ್ಲಿ 2019ರಲ್ಲಿ ಕೈ ಪಾಳೆಯ ತೊರೆದು ಹೊರಬಂದ ನಾಯಕರು ಒಬ್ಬೊಬ್ಬರೇ ಈಗ ಸ್ಫೋಟಕ ಹೇಳಿಕೆ ನೀಡುತ್ತಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ 135 ಸ್ಥಾನಗಳು ಸಿಕ್ಕಿ ಸರ್ಕಾರ ರಚಿಸಲು ಹೊರಟಿರುವ ಸಂದರ್ಭದಲ್ಲಿ 2019ರಲ್ಲಿ ಕೈ ಪಾಳೆಯ ತೊರೆದು ಹೊರಬಂದ ನಾಯಕರು ಒಬ್ಬೊಬ್ಬರೇ ಈಗ ಸ್ಫೋಟಕ ಹೇಳಿಕೆ ನೀಡುತ್ತಿದ್ದಾರೆ.

2019ರಲ್ಲಿ ಕಾಂಗ್ರೆಸ್ ತೊರೆಯಲು ಸಿದ್ದರಾಮಯ್ಯನವರ ಧೋರಣೆ, ನಾವು ಸಹಾಯ, ಸಹಕಾರ ಕೇಳಲು ಹೋದಾಗ ಅಸಹಾಯಕತೆ ತೋರಿಸುತ್ತಿದ್ದ ಮೈತ್ರಿಕೂಟದ ಸಮನ್ವಯ ಸಮಿತಿಯ ಅಧ್ಯಕ್ಷರಾಗಿದ್ದ ಇಂದು ಮುಖ್ಯಮಂತ್ರಿಯಾಗಲು ಸಿದ್ಧರಾಗಿರುವ ಸಿದ್ದರಾಮಯ್ಯನವರೇ ಕಾರಣ ಎಂದು ಟ್ವೀಟ್ ಮೂಲಕ ಮಾಜಿ ಸಚಿವ ಚಿಕ್ಕಬಳ್ಳಾಪುರದ ಡಾ ಸುಧಾಕರ್ ಬೇಸರ ಹೊರಹಾಕಿದ್ದರು. 

ಅದೇ ವರಸೆಯಲ್ಲಿ ಟ್ವೀಟ್ ಮಾಡಿದ್ದಾರೆ ಮಾಜಿ ಸಚಿವ ಶಾಸಕ ಎಸ್ ಟಿ ಸೋಮಶೇಖರ್. 20180-19ರಲ್ಲಿ ಸಮ್ಮಿಶ್ರ ಸರ್ಕಾರದ ದಿನಗಳಲ್ಲಿ ನಾವು ಶಾಸಕರು ಸಿದ್ದರಾಮಯ್ಯನವರ ಮುಂದೆ ಸಮಸ್ಯೆ ಹೇಳಿಕೊಳ್ಳಲು ಹೋದರೆ ಸಿದ್ದರಾಮಯ್ಯನವರು ಅಸಹಾಯಕತೆ ತೋರಿಸಿಕೊಳ್ಳುತ್ತಿದ್ದರು. ಅವರ ಅಸಹಾಯಕತೆಯೇ ನಾವು ಪಕ್ಷ ಬಿಡಲು ಪ್ರೇರಣೆಯಾಯಿತು ಎಂದು ಸ್ಫೋಟಕ ಮಾಹಿತಿ ಹೊರಹಾಕಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT