ಆರ್. ವಿ ದೇಶಪಾಂಡೆ 
ರಾಜಕೀಯ

ಸ್ಪೀಕರ್ ಸ್ಥಾನ ದೊಡ್ಡ ಜವಾಬ್ದಾರಿ, ಆ ಅರ್ಹತೆ ನನಗಿಲ್ಲ: ಆರ್.ವಿ ದೇಶಪಾಂಡೆ ಟಾಂಗ್

ಹೊಸ ಕಾಂಗ್ರೆಸ್‌ ಸರ್ಕಾರದಲ್ಲಿ ನನಗೆ ವಿಧಾನಸಭೆ ಸ್ಪೀಕರ್‌ ಆಗುವ ಅರ್ಹತೆ ಇಲ್ಲವೆಂದು ಅನಿಸುತ್ತದೆ ಎಂದು ಸ್ವತಃ ಕಾಂಗ್ರೆಸ್‌ ಹಿರಿಯ ನಾಯಕ ಆರ್.ವಿ.ದೇಶಪಾಂಡೆ ಹೇಳಿಕೊಂಡಿದ್ದಾರೆ.

ಬೆಂಗಳೂರು: ಹೊಸ ಕಾಂಗ್ರೆಸ್‌ ಸರ್ಕಾರದಲ್ಲಿ ನನಗೆ ಸ್ಪೀಕರ್‌ ಆಗುವ ಅರ್ಹತೆ ಇಲ್ಲವೆಂದು ಅನಿಸುತ್ತದೆ ಎಂದು ಸ್ವತಃ ಕಾಂಗ್ರೆಸ್‌ ಹಿರಿಯ ನಾಯಕ ಆರ್.ವಿ.ದೇಶಪಾಂಡೆ ಹೇಳಿಕೊಂಡಿದ್ದಾರೆ.

ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಬೀಗುತ್ತಿರುವ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿ ಎಂದು ಘೋಷಣೆ ಮಾಡಿದ್ದು, ಪ್ರಮಾಣವಚನ ಸ್ವೀಕಾರ ಮಾತ್ರ ಬಾಕಿಯಿದೆ. ಆದರೆ, ಸಚಿವ ಸಂಪುಟಕ್ಕೆ ಯಾರನ್ನು ಸೇರಿಸಿಕೊಳ್ಳಲಾಗುತ್ತದೆ ಎಂಬುದಕ್ಕೆ ಯಾರ ಬಳಿಯೂ ಸ್ಪಷ್ಟ ಉತ್ತರಗಳಿಲ್ಲ.

ಇದರ ಮಧ್ಯೆ ಆರ್​ವಿ ದೇಶಪಾಂಡೆಗೆ ಸ್ಪೀಕರ್ ಸ್ಥಾನ ನೀಡಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ಆದರೆ ದೇಶಪಾಂಡೆ, ಪರೋಕ್ಷವಾಗಿ ಸ್ಪೀಕರ್ ಆಗಲು ತಯಾರಿಲ್ಲ ಅನ್ನೋದನ್ನು ಮಾಧ್ಯಮಗಳ ಮೂಲಕ ತಿಳಿಸಿದ್ದಾರೆ.

ದೆಹಲಿಯಲ್ಲಿ ಮಾತನಾಡಿರುವ ದೇಶಪಾಂಡೆ, ನಾಳೆ ಸಚಿವ ಸಂಪುಟ ರಚನೆಯಾಗಲಿದೆ. ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು, ಸಚಿವರು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದರೆ, ಸಚಿವ ಸಂಪುಟದಲ್ಲಿ ನಾನು ಇರುವ ಬಗ್ಗೆ ಮುಖ್ಯಮಂತ್ರಿ ಮತ್ತು ಹೈಕಮಾಂಡ್ ತೀರ್ಮಾನ ಮಾಡುತ್ತಾರೆ. ರಾಜ್ಯದ ಸಚಿವ ಸಂಪುಟದಿಂದ ಹಿರಿಯರನ್ನು ಕೈ ಬಿಡುವ ಬಗ್ಗೆ ನನಗೆ ಗೊತ್ತಿಲ್ಲ ಎಂದು ಹೇಳಿದರು.

ಈಗಾಗಲೇ ರಾಜ್ಯದಲ್ಲಿ ನಾನು 8 ಮುಖ್ಯಮಂತ್ರಿಗಳ ಜೊತೆ ಕೆಲಸ ಮಾಡಿದ್ದೇನೆ. ಈ ಬಾರಿ ಏನು ಮಾಡುತ್ತಾರೆ, ಏನು ಇಲ್ಲ ಅನ್ನೋದು ಅವರಿಗೆ ಬಿಟ್ಟ ವಿಚಾರವಾಗಿದೆ. ಆದರೆ, ಕಾಂಗ್ರೆಸ್‌ ಸರ್ಕಾರದ ಸ್ಪೀಕರ್‌ ಆಗುವ ಅರ್ಹತೆ ನನಗೆ ಇಲ್ಲವೆಂದು ಅನಿಸುತ್ತದೆ. ಅದು ಬಹಳ ದೊಡ್ಡ ಹುದ್ದೆಯಾಗಿದ್ದು, ಸರ್ಕಾರದಲ್ಲಿಯೇ ಅತ್ಯಂತ ಜವಾಬ್ದಾರಿ ಹುದ್ದೆಯಾಗಿದೆ. ಇದರ ಬಗ್ಗೆ ನನ್ನ ಜೊತೆ ಯಾರು ಚರ್ಚೆಯೂ ಮಾಡಿಲ್ಲ ಎಂದು ದೇಶಪಾಂಡೆ ಮಾಹಿತಿ ನೀಡಿದರು.

ನನ್ನ ಪ್ರಕಾರ ಸ್ಪೀಕರ್ ಪೋಸ್ಟ್ ಬಹಳ ದೊಡ್ಡದು. ಆ ಅರ್ಹತೆ ನನಗೆ ಇಲ್ಲ ಎಂದು ಕಾಣುತ್ತದೆ. ಅದು ತುಂಬಾ ಜವಾಬ್ದಾರಿಯುತ ಹುದ್ದೆ ಎನ್ನುವ ಮೂಲಕ  ತಮಗೆ ಸಚಿವ ಸ್ಥಾನವೇ ಬೇಕೆಂದು ಪರೋಕ್ಷವಾಗಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT