ಎಂಬಿ ಪಾಟೀಲ್ ಹೇಳಿಕೆಗೆ ಕಾಂಗ್ರೆಸ್ ನಲ್ಲೇ ಅಪಸ್ವರ 
ರಾಜಕೀಯ

'5 ವರ್ಷವೂ ಸಿದ್ದು ಸಿಎಂ': ಎಂಬಿ ಪಾಟೀಲ್ ಹೇಳಿಕೆಗೆ ಕಾಂಗ್ರೆಸ್ ನಲ್ಲೇ ಅಪಸ್ವರ; ಅಪ್ರಸ್ತುತ ಎಂದ ಪ್ರಿಯಾಂಕ್ ಖರ್ಗೆ, ಸಚಿವರಿಂದ ಮತ್ತೆ ಸಮರ್ಥನೆ

5 ವರ್ಷವೂ ಸಿದ್ದರಾಮಯ್ಯ ಸಿಎಂ ಆಗಿರಲಿದ್ದಾರೆ ಎಂಬ ಸಚಿವ ಎಂಬಿ ಪಾಟೀಲ್ ಹೇಳಿಕೆಗೆ ಸ್ವಪಕ್ಷದಲ್ಲಿಯೇ ಅಪಸ್ವರ ಕೇಳಿಬಂದಿದ್ದು, ಹಲವು ನಾಯಕರು ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರು: 5 ವರ್ಷವೂ ಸಿದ್ದರಾಮಯ್ಯ ಸಿಎಂ ಆಗಿರಲಿದ್ದಾರೆ ಎಂಬ ಸಚಿವ ಎಂಬಿ ಪಾಟೀಲ್ ಹೇಳಿಕೆಗೆ ಸ್ವಪಕ್ಷದಲ್ಲಿಯೇ ಅಪಸ್ವರ ಕೇಳಿಬಂದಿದ್ದು, ಹಲವು ನಾಯಕರು ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯರವರು ಪೂರ್ಣಾವಧಿ ಸಿಎಂ ಎಂಬ ಸಚಿವ ಎಂ.ಬಿ ಪಾಟೀಲ್ ಹೇಳಿಕೆಗೆ ಕಾಂಗ್ರೆಸ್‌ನ ಹಲವು ನಾಯಕರು ಪ್ರತಿಕ್ರಿಯೆ ನೀಡಿದ್ದು, 'ಈ ಸಮಯದಲ್ಲಿ ಅಧಿಕಾರ ಹಂಚಿಕೆಯ ಬಗ್ಗೆ ಚರ್ಚೆ ಮಾಡುವುದು ಅಪ್ರಸ್ತುತ, ಸಚಿವ ಎಂ.ಬಿ ಪಾಟೀಲ್ ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಅಧಿಕಾರ ಹಂಚಿಕೆಯ ಬಗ್ಗೆ ಹೈಕಮಾಂಡ್ ಮತ್ತು ಮುಖ್ಯಮಂತ್ರಿಗಳು ನಿರ್ಧಾರ ಮಾಡುತ್ತಾರೆ. ಈ ಬಗ್ಗೆ ಬೇರೆ ಯಾರೂ ನಿರ್ಧಾರ ಮಾಡಲ್ಲ' ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಅಂತೆಯೇ ಎಂಬಿ ಪಾಟೀಲ್ ಹೇಳಿಕೆಗೆ ತಿರುಗೇಟು ನೀಡಿರುವ ಡಿಕೆ ಶಿವಕುಮಾರ್ ಸಹೋದರ ಸಂಸದ ಡಿಕೆ ಸುರೇಶ್, 'ಇದೆಲ್ಲ ಬೇಡ, ಅವರಿಗೆ ಹೆಚ್ಚಿನ ಮಾಹಿತಿ ಬೇಕಿದ್ದರೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ ಅವರ ಬಳಿ ಮಾತನಾಡಲಿ ಎಂದು ಗರಂ ಆಗಿ ಹೇಳಿದ್ದಾರೆ. ಅಂತೆಯೇ ಎಂ.ಬಿ ಪಾಟೀಲ್ ಹೇಳಿಕೆಗೆ ತೀಕ್ಷ್ಣ ಉತ್ತರ ನೀಡಲು ನನಗೂ ಬರುತ್ತೆ. ಆದರೆ, ಈಗಲೇ ಅದೆಲ್ಲ ಬೇಡ ಎಂದು ಅವರು ಹೇಳಿದರು.

ಸಚಿವರಿಂದ ಮತ್ತೆ ಸಮರ್ಥನೆ
ಇನ್ನು ತಮ್ಮ ಹೇಳಿಕೆಗೆ ಪಕ್ಷದಲ್ಲೇ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಲೇ ಈ ಬಗ್ಗೆ ಮತ್ತೆ ಸಮರ್ಥನೆ ನೀಡಿರುವ ಸಚಿವ ಎಂಬಿ ಪಾಟೀಲ್ ಅವರು, 'ಪಕ್ಷದ ವರಿಷ್ಠರು ಹೇಳಿದ್ದನ್ನಷ್ಟೇ ನಾನು ಹೇಳಿದ್ದೇನೆ. ನಾನು ಪದೇ ಪದೇ ಮಾತನಾಡಲ್ಲ. ನಿನ್ನೆ ಮಾಧ್ಯಮದವರು ಸಿದ್ದರಾಮಯ್ಯನವರು ಬದಲಾಗುತ್ತಾರ ಎಂದು ಕೇಳಿದರು. ಅದಕ್ಕೆ ಉತ್ತರ ನೀಡಿದೆ ಅಷ್ಟೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮಧ್ಯಪ್ರದೇಶ: ಕಾಫ್ ಸಿರಪ್ ಸೇವಿಸಿ ಮೂತ್ರಪಿಂಡ ವೈಫಲ್ಯ; ಚಿಕಿತ್ಸೆ ಪಡೆಯುತ್ತಿದ್ದ 6 ಮಕ್ಕಳ ಮರಣ; ಸಾವಿನ ಸಂಖ್ಯೆ 20ಕ್ಕೆ ಏರಿಕೆ

BiggBoss Kannada: ಬಿಗ್ ಬಾಸ್ 12 ಮನೆಗೆ ಬೀಗಮುದ್ರೆ, ಜಾಲಿವುಡ್ ಸ್ಟುಡಿಯೋಸ್ ಇಂದು ಹೈಕೋರ್ಟ್ ಮೊರೆ?

ರಾಜಕೀಯ ಒತ್ತಡಕ್ಕೆ ಮಣಿದು ಆತುರಾತುರವಾಗಿ ಸಮೀಕ್ಷೆ ನಡೆಸುತ್ತಿದ್ದಾರೆ: BJP ಟೀಕೆ

ನಮ್ಮ ಮೆಟ್ರೋಗೆ ವಾಲ್ಮೀಕಿ ಹೆಸರಿಡಲು ಕೇಂದ್ರಕ್ಕೆ ಒತ್ತಾಯ: ಸಿಎಂ ಸಿದ್ದರಾಮಯ್ಯ

ನಮ್ಮ ತಟ್ಟೆಯಲ್ಲಿರುವ ಅನ್ನ ಕಿತ್ತುಕೊಳ್ಳಬೇಡಿ: ಕುರುಬ ಸಮುದಾಯ ST ಸೇರ್ಪಡೆ ಪ್ರಸ್ತಾಪಕ್ಕೆ VS ಉಗ್ರಪ್ಪ ವಿರೋಧ

SCROLL FOR NEXT