ಡಿ,ಕೆ ಶಿವಕುಮಾರ್ 
ರಾಜಕೀಯ

ಎರಡು ವರ್ಷಗಳ ಬಳಿಕ ಡಿಕೆ ಶಿವಕುಮಾರ್ ಮುಂದಿನ 8 ವರ್ಷ ರಾಜ್ಯದ ಸಿಎಂ: ಜ್ಯೋತಿಷಿ ಭವಿಷ್ಯ

ಎರಡು ವರ್ಷಗಳ ಬಳಿಕ ಎಂಟು ವರ್ಷಗಳ ಕಾಲ ಡಿ.ಕೆ ಶಿವಕುಮಾರ್ ಸಿಎಂ ಆಗಿರುತ್ತಾರೆ ಎಂದು ಜ್ಯೋತಿಷಿ ಬಿಬಿ ಆರಾಧ್ಯ ಭವಿಷ್ಯ ನುಡಿದಿದ್ದಾರೆ.

ಬೆಂಗಳೂರು: ಎರಡು ವರ್ಷಗಳ ಬಳಿಕ ಎಂಟು ವರ್ಷಗಳ ಕಾಲ ಡಿ.ಕೆ ಶಿವಕುಮಾರ್ ಸಿಎಂ ಆಗಿರುತ್ತಾರೆ ಎಂದು ಜ್ಯೋತಿಷಿ ಬಿಬಿ ಆರಾಧ್ಯ ಭವಿಷ್ಯ ನುಡಿದಿದ್ದಾರೆ.

ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅಧಿಕಾರ ವಹಿಸಿಕೊಂಡಿದ್ದರೂ, ಐದು ವರ್ಷಗಳ ಕಾಲ ಆಡಳಿತ ನಡೆಸುವುದಿಲ್ಲ. ಲೋಕಸಭಾ ಚುನಾವಣೆಯ ಬಳಿಕ ಉಪ ಮುಖ್ಯಮಂತ್ರಿಯಾಗಿರುವ ಡಿ.ಕೆ.ಶಿವಕುಮಾರ್ ಸಿಎಂ ಆಗಿ ಅಧಿಕಾರ ವಹಿಸಿಕೊಳ್ಳುತ್ತಾರೆ. ಈ ಬಗ್ಗೆ ಹೈಕಮಾಂಡ್ ವಲಯದಲ್ಲಿ ಈಗಾಗಲೇ ಮಾತುಕತೆ ನಡೆದಿದೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಹೆಚ್ಚು ಚರ್ಚೆಯಲ್ಲಿವೆ.

ಇದೀಗ ಜ್ಯೋತಿಷಿಯೊಬ್ಬರು ಭವಿಷ್ಯ ನುಡಿದಿದ್ದು, ಡಿ.ಕೆ.ಶಿವಕುಮಾರ್ ಸಿಎಂ ಆಗಲಿದ್ದಾರೆ ಎಂದು ಹೇಳಿದ್ದಾರೆ. ಡಿಸಿಎಂ ಆಗಿ ಸದ್ಯ ಅಧಿಕಾರ ವಹಿಸಿಕೊಂಡಿರುವ ಡಿಕೆಶಿ ಅವರಿಗೆ ನಿಯೋಜನೆಯಾಗಿರುವ ವಿಧಾನಸೌಧದ ಕೊಠಡಿ ಸಂಖ್ಯೆ 336ರಲ್ಲಿ ಮುಂದಿನ ಗುರುವಾರ ಪೂಜೆ ನೆರವೇರಲಿದೆ. ಜಾತಕ ಫಲದ ಪ್ರಕಾರ ಮುಹೂರ್ತ ನೀಡಿರುವ ಜ್ಯೋತಿಷಿ ಬಿಬಿ ಆರಾಧ್ಯ, ಅಭಿಜಿನ್ ಲಗ್ನದಲ್ಲಿ ಪೂಜೆ ನೆರವೇರಿಸಲು ಸೂಚನೆ ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಸದ್ಯ ವಾಸ್ತವ್ಯ ಹೂಡಿರುವ ಸರ್ಕಾರಿ ನಿವಾಸವನ್ನು ವಾಸ್ತವ್ಯಕ್ಕೆ ಆಯ್ಕೆ ಮಾಡಿಕೊಳ್ಳುವಂತೆ ಡಿಕೆಶಿಗೆ ಜ್ಯೋತಿಷಿ ಬಿಬಿ ಆರಾಧ್ಯ ಸಲಹೆ ನೀಡಿದ್ದಾರೆ. ಅಲ್ಲದೆ ಎರಡು ವರ್ಷಗಳ ಬಳಿಕ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡು ಎಂಟು ವರ್ಷಗಳ ಕಾಲ ಆಡಳಿತ ನಡೆಸುತ್ತೀರಿ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮಧ್ಯಪ್ರದೇಶ: ಕಾಫ್ ಸಿರಪ್ ಸೇವಿಸಿ ಮೂತ್ರಪಿಂಡ ವೈಫಲ್ಯ; ಚಿಕಿತ್ಸೆ ಪಡೆಯುತ್ತಿದ್ದ 6 ಮಕ್ಕಳ ಮರಣ; ಸಾವಿನ ಸಂಖ್ಯೆ 20ಕ್ಕೆ ಏರಿಕೆ

BiggBoss Kannada: ಬಿಗ್ ಬಾಸ್ 12 ಮನೆಗೆ ಬೀಗಮುದ್ರೆ, ಜಾಲಿವುಡ್ ಸ್ಟುಡಿಯೋಸ್ ಇಂದು ಹೈಕೋರ್ಟ್ ಮೊರೆ?

ಕುರುಬರ ಸೇರ್ಪಡೆಗೆ ST ಮೀಸಲಾತಿ ಪ್ರಮಾಣ ದ್ವಿಗುಣಗೊಳಿಸಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜಕೀಯ ಒತ್ತಡಕ್ಕೆ ಮಣಿದು ಆತುರಾತುರವಾಗಿ ಸಮೀಕ್ಷೆ ನಡೆಸುತ್ತಿದ್ದಾರೆ: BJP ಟೀಕೆ

ನಮ್ಮ ತಟ್ಟೆಯಲ್ಲಿರುವ ಅನ್ನ ಕಿತ್ತುಕೊಳ್ಳಬೇಡಿ: ಕುರುಬ ಸಮುದಾಯ ST ಸೇರ್ಪಡೆ ಪ್ರಸ್ತಾಪಕ್ಕೆ VS ಉಗ್ರಪ್ಪ ವಿರೋಧ

SCROLL FOR NEXT