ಯುಟಿ ಖಾದರ್ 
ರಾಜಕೀಯ

ಸ್ಪೀಕರ್ ಆಯ್ಕೆ ಕಸರತ್ತಿಗೆ ಕೊನೆಗೂ ತೆರೆ; ವಿಧಾನಸಭಾಧ್ಯಕ್ಷ ಸ್ಥಾನಕ್ಕೆ ಯುಟಿ ಖಾದರ್ ಮನವೊಲಿಸಿದ ನಾಯಕರು

ವಿಧಾನಸಭೆ ಚುನಾವಣೆಯಲ್ಲಿ 135 ಸ್ಥಾನಗಳ ಭರ್ಜರಿ ಬಹುಮತದೊಂದಿಗೆ ಗೆದ್ದಿರುವ ಕಾಂಗ್ರೆಸ್ ಸೋಮವಾರ ತಡರಾತ್ರಿ ಮಾಜಿ ಸಚಿವ ಯು.ಟಿ. ಖಾದರ್ ಅವರನ್ನು ವಿಧಾನಸಭಾಧ್ಯಕ್ಷರನ್ನಾಗಿ ಮಾಡಲು ನಿರ್ಧರಿಸಿದೆ. 

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ 135 ಸ್ಥಾನಗಳ ಭರ್ಜರಿ ಬಹುಮತದೊಂದಿಗೆ ಗೆದ್ದಿರುವ ಕಾಂಗ್ರೆಸ್ ಸೋಮವಾರ ತಡರಾತ್ರಿ ಮಾಜಿ ಸಚಿವ ಯು.ಟಿ. ಖಾದರ್ ಅವರನ್ನು ವಿಧಾನಸಭಾಧ್ಯಕ್ಷರನ್ನಾಗಿ ಮಾಡಲು ನಿರ್ಧರಿಸಿದೆ. 

ಅದರಂತೆ ಇಂದು ಬೆಳಿಗ್ಗೆ 11 ಗಂಟೆಗೆ ಸಭಾಧ್ಯಕ್ಷ ಸ್ಥಾನಕ್ಕೆ ಯುಟಿ ಖಾದರ್ ನಾಮಪತ್ರ ಸಲ್ಲಿಸಲಿದ್ದು, ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆಯಿದೆ. ಮೇ 24 ರಂದು ವಿಧಾನಸಭಾಧ್ಯಕ್ಷರ ಆಯ್ಕೆ ನಡೆಯಲಿದೆ. ಮಂಗಳವಾರ ಮಧ್ಯಾಹ್ನ 12ರ ಒಳಗೆ ಸ್ಪೀಕರ್ ಚುನಾವಣೆಗೆ ಸ್ಪರ್ಧಿಸುವವರು ನಾಮಪತ್ರ ಸಲ್ಲಿಸಬೇಕಾಗುತ್ತದೆ ಎಂದು ವಿಧಾನಸಭೆ ಬುಲೆಟಿನ್  ಹೊರಡಿಸಿದೆ. 

ಮೂರು ದಿನಗಳ ವಿಧಾನಸಭೆ ಅಧಿವೇಶನದ ಮೊದಲ ದಿನವಾದ ಸೋಮವಾರದಂದು 224 ಶಾಸಕರ ಪೈಕಿ 182 ಶಾಸಕರಿಗೆ ಹಂಗಾಮಿ ಸ್ಪೀಕರ್ ಆಗಿರುವ ಹಿರಿಯ ನಾಯಕ ಆರ್‌ವಿ ದೇಶಪಾಂಡೆ ಪ್ರಮಾಣ ವಚನ ಬೋಧಿಸಿದರು.

ದೇಶಪಾಂಡೆ ಅವರನ್ನು ಸ್ಪೀಕರ್ ಹುದ್ದೆಯನ್ನು ನಿಭಾಯಿಸಲು ಕೇಳಲಾಯಿತು. ಆದರೆ, ಅವರು ಆರೋಗ್ಯ ಸಮಸ್ಯೆಗಳನ್ನು ಉಲ್ಲೇಖಿಸಿ ಹುದ್ದೆಯನ್ನು ನಿರಾಕರಿಸಿದರು. ಹಿರಿಯ ನಾಯಕ ಹಾಗೂ ಮಾಜಿ ಸಚಿವ ಎಚ್‌ಕೆ ಪಾಟೀಲ್ ಅವರನ್ನು ಕೂಡ ಸ್ಪೀಕರ್ ಹುದ್ದೆಗೆ ಪಕ್ಷ ಪರಿಗಣಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಪ್ತರಾಗಿರುವ ಆಳಂದ ಶಾಸಕ ಬಿ.ಆರ್. ಪಾಟೀಲ್ ಅವರನ್ನೂ ಸಂಪರ್ಕಿಸಲಾಗಿತ್ತು.

ಎಐಸಿಸಿ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಸೋಮವಾರ ಸಂಜೆ ಬೆಂಗಳೂರಿಗೆ ಆಗಮಿಸಿದ್ದು, ಸ್ಪೀಕರ್ ಆಯ್ಕೆಯಲ್ಲಿ ಪಕ್ಷವು ನಿರ್ಧಾರಕ್ಕೆ ಬರಲು ಸಹಾಯ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮಾಜಿ ಸಚಿವರಾದ ಟಿ.ಬಿ. ಜಯಚಂದ್ರ, ಬಸವರಾಜ ರಾಯರೆಡ್ಡಿ, ಮಧುಗಿರಿಯ ಶಾಸಕರಾದ ಕೆ.ಎನ್. ರಾಜಣ್ಣ, ಮೊಳಕಾಲ್ಮೂರಿನ ಎನ್.ವೈ. ಗೋಪಾಲಕೃಷ್ಣ ಅವರ ಮನವೊಲಿಸಲು ಪಕ್ಷದ ನಾಯಕತ್ವ ಯತ್ನಿಸಿ ವಿಫಲವಾಯಿತು. ಮೂರು ದಿನಗಳ ವಿಧಾನಮಂಡಲದ ಅಧಿವೇಶನ ಬುಧವಾರ ಮುಕ್ತಾಯಗೊಂಡ ನಂತರ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಯಿರುವುದರಿಂದ ಹೆಚ್ಚಿನ ಹಿರಿಯ ಶಾಸಕರು ಕ್ಯಾಬಿನೆಟ್ ಸ್ಥಾನಕ್ಕಾಗಿ ಕಾಯುತ್ತಿದ್ದಾರೆ.

ಸಿದ್ದು, ಡಿಕೆಶಿ ದೆಹಲಿಗೆ

ಉಳಿದ 24 ಸಚಿವ ಸ್ಥಾನಗಳನ್ನು ಭರ್ತಿ ಮಾಡಲು ಮತ್ತು ಖಾತೆಗಳನ್ನು ಹಂಚಿಕೆ ಮಾಡಲು ಕಾಂಗ್ರೆಸ್ ಹೈಕಮಾಂಡ್‌ನಿಂದ ಒಪ್ಪಿಗೆ ಪಡೆಯಲು ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗುರುವಾರ ಅಥವಾ ನಂತರ ನವದೆಹಲಿಗೆ ತೆರಳುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT