ಸಂಗ್ರಹ ಚಿತ್ರ 
ರಾಜಕೀಯ

ಸಿದ್ದು-ಡಿಕೆಶಿ ಬಣಗಳ ನಡುವಿನ ಮುಸುಕಿನ ಗುದ್ದಾಟ ಬಹಿರಂಗ: ವಿಧಾನಸೌಧದಲ್ಲಿ ಡಿಕೆ ಸುರೇಶ್‌-ಎಂಬಿ ಪಾಟೀಲ್‌ ಜಟಾಪಟಿ!

ಐದು ವರ್ಷ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿರುತ್ತಾರೆಂಬ ಎಂಬಿ ಪಾಟೀಲ್ ಅವರ ಹೇಳಿಕೆ ಕಾಂಗ್ರೆಸ್ ಪಾಳಯದಲ್ಲಿ ದೊಡ್ಡ ಕಂಪನವನ್ನೇ ಸೃಷ್ಟಿ ಮಾಡಿದ್ದು, ಈ ಬೆಳವಣಿಗೆಯ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬಣಗಳ ನಡುವಿನ ಮುಸುಕಿನ ಗುದ್ದಾಟ ಬಹಿರಂಗವಾಗುವಂತೆ ಮಾಡಿದೆ.

ಬೆಂಗಳೂರು: ಐದು ವರ್ಷ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿರುತ್ತಾರೆಂಬ ಎಂಬಿ ಪಾಟೀಲ್ ಅವರ ಹೇಳಿಕೆ ಕಾಂಗ್ರೆಸ್ ಪಾಳಯದಲ್ಲಿ ದೊಡ್ಡ ಕಂಪನವನ್ನೇ ಸೃಷ್ಟಿ ಮಾಡಿದ್ದು, ಈ ಬೆಳವಣಿಗೆಯ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬಣಗಳ ನಡುವಿನ ಮುಸುಕಿನ ಗುದ್ದಾಟ ಬಹಿರಂಗವಾಗುವಂತೆ ಮಾಡಿದೆ.

ವಿಧಾನಸೌಧದಲ್ಲಿಂದು ಡಿಕೆ.ಸುರೇಶ್ ಹಾಗೂ ಎಂಬಿ ಪಾಟೀಲ್ ಇಬ್ಬರು ಮುಖಾಮುಖಿಯಾಗಿದ್ದು, ಉಭಯ ನಾಯಕರ ನಡುವೆ ಮಾತಿನ ಸಮರ ಇದಕ್ಕೆ ಇಂಬು ನೀಡಿದಂತಾಗಿದೆ.

ವಿಧಾನಸೌಧದಲ್ಲಿ ಮುಖಾಮುಖಿಯಾದ ಎಂಬಿ ಪಾಟೀಲ್ ಅವರನ್ನು ಮೊದಲಿಗೆ ಗುರಾಯಿಸಿದ ಡಿಕೆ.ಸುರೇಶ್ ಅವರು, ಇದೆಲ್ಲಾ ಸರಿ ಇರಲ್ಲ ಎಂದು ಬಹಿರಂಗವಾಗಿಯೇ ಎಚ್ಚರಿಕೆ ನೀಡಿದ್ದಾರೆ.

ಶಾಸಕಾಂಗ ಸಭೆಯ ಬಳಿಕ ಸಮ್ಮೇಳನದ ಸಭಾಂಗಣದ ಹೊರ ಭಾಗದಲ್ಲಿ ಡಿಕೆ ಸುರೇಶ್‌ ಹಾಗೂ ಎಂಬಿ ಪಾಟೀಲ್‌ ಮುಖಾಮುಖಿಯಾಗಿದ್ದಾರೆ.

ಈ ವೇಳೆ ಕಾರಿಡಾರ್‌ನಲ್ಲಿಯೇ ಮಾತು ಆರಂಭಿಸಿದ ಡಿಕೆ ಸುರೇಶ್‌. ಇದೆಲ್ಲಾ ಸರಿ ಇರಲ್ಲ ಎಂದು ಸಿಟ್ಟಿನಿಂದ ಎಂಬಿ ಪಾಟೀಲ್‌ಗೆ ಹೇಳಿದ್ದಾರೆ. ಇದಕ್ಕೆ ತಕ್ಷಣ ಯಾವ ರೀತಿ ಪ್ರತಿಕ್ರಿಯಿಸಬೇಕು ಎಂದು ಎಂಬಿ ಪಾಟೀಲ್‌ಗೆ ಗೊತ್ತಾಗಿಲ್ಲ.

ಬಳಿಕ ಪ್ರತಿಕ್ರಿಯಿಸಿದ ಎಂಬಿ ಪಾಟೀಲ್‌ ರೌಡಿಸಂ ರೀತಿಯಲ್ಲಿ ಮಾತನಾಡ್ತೀರಿ, ಚೆಂಬರ್‌ಗೆ ಬನ್ನಿ ಮಾತನಾಡೋಣ, ಏನ್‌ ವಿಷಯ ಇದೆ ಬಗೆಹರಿಸೋಣ ಬನ್ನಿ ಎಂದು ಕರೆದಿದ್ದಾರೆ. ಈ ವೇಳೆ ಸಿಟ್ಟಿನಲ್ಲಿಯೇ ಮರು ಮಾತನಾಡಿದ ಡಿಕೆ ಸುರೇಶ್‌ ಮಾತನಾಡುವ ಮುನ್ನ ಎಚ್ಚರವಿರಲಿ ಎಂದು ಹೇಳಿ ಹೊರಟು ಹೋಗಿದ್ದಾರೆ.

ಇಬ್ಬರ ನಡುವೆ ಸಣ್ಣದಾಗಿಯೇ ಮಾತಿನ ಚಕಮಕಿ ನಡೆದಿದ್ದು, ಅಲ್ಲಿದ್ದ ಇತರ ಶಾಸಕರು ಇಬ್ಬರನ್ನು ಸಮಾಧಾನಪಡಿಸುವ ಕೆಲಸ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT