ಸಾಂದರ್ಭಿಕ ಚಿತ್ರ 
ರಾಜಕೀಯ

'ವಿಪಕ್ಷ ನಾಯಕ' ಸ್ಥಾನಕ್ಕೆ ಸೂಕ್ತ ವ್ಯಕ್ತಿಯನ್ನು ಹುಡುಕಿಕೊಳ್ಳಲಿ: ಬಿಜೆಪಿಗೆ ಕಾಂಗ್ರೆಸ್ ಟಾಂಗ್

ನೂತನ ಸರ್ಕಾರ ರಚನೆಯಾಗಿ ಐದು ದಿನ ಕಳೆದರೂ ''ಐದು ಗ್ಯಾರಂಟಿ' ಅನುಷ್ಠಾನದ ಬಗ್ಗೆ ಸ್ಪಷ್ಟತೆ ಇಲ್ಲ ಎಂದು ನಿರಂತರವಾಗಿ ವಾಗ್ದಾಳಿ ನಡೆಸುತ್ತಿರುವ ಪ್ರತಿಪಕ್ಷ ಬಿಜೆಪಿ ವಿರುದ್ಧ ಕಾಂಗ್ರೆಸ್ ಹರಿಹಾಯ್ದಿದೆ.

ಬೆಂಗಳೂರು: ನೂತನ ಸರ್ಕಾರ ರಚನೆಯಾಗಿ ಐದು ದಿನ ಕಳೆದರೂ ''ಐದು ಗ್ಯಾರಂಟಿ' ಅನುಷ್ಠಾನದ ಬಗ್ಗೆ ಸ್ಪಷ್ಟತೆ ಇಲ್ಲ ಎಂದು ನಿರಂತರವಾಗಿ ವಾಗ್ದಾಳಿ ನಡೆಸುತ್ತಿರುವ ಪ್ರತಿಪಕ್ಷ ಬಿಜೆಪಿ ವಿರುದ್ಧ ಕಾಂಗ್ರೆಸ್ ಹರಿಹಾಯ್ದಿದೆ.

ಈ ಕುರಿತು ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್  ನಾವು ಘೋಷಿಸಿದ 5 ಗ್ಯಾರಂಟಿಗಳನ್ನು ಜಾರಿಗೊಳಿಸುವುದು ಗ್ಯಾರಂಟಿ. ನಾವು ನಮ್ಮ ಜನರ ಹಿತ ಕಾಪಾಡುವ ಬದ್ಧತೆ ಹೊಂದಿದ್ದೇವೆ ಎಂದು ಹೇಳಿದೆ. ಇನ್ನೂ ರಾಜ್ಯ ಬಿಜೆಪಿ ನಾಯಕರು ಕನ್ನಡಿಗರು ನೀಡಿದ ತಪರಾಕಿಗೆ ಚಿಕಿತ್ಸೆ ಪಡೆದು ರೆಸ್ಟ್ ಮಾಡಲಿ, ಹಾಗೆಯೇ 'ವಿರೋಧಪಕ್ಷದ ನಾಯಕ' ಸ್ಥಾನಕ್ಕೆ ಸೂಕ್ತ ವ್ಯಕ್ತಿಯನ್ನು ಹುಡುಕಿಕೊಳ್ಳಲಿ ಎಂದು ಟಾಂಗ್ ನೀಡಿದೆ. 

ಬಿಜೆಪಿಯಲ್ಲಿ ಚುನಾವಣೆಯಲ್ಲಿ ಹೀನಾಯ ಸೋಲಿನ ಹೊಣೆ ಹೊರುವವರು, ಹೊಣೆ ಹೊತ್ತು ರಾಜೀನಾಮೆ ಕೊಡುವವರು ಯಾರೂ ಇಲ್ಲವೇ ಎಂದು ಕುಹಕವಾಡಿದ್ದು, ಸೋಲಿನ ಹೊಣೆ ಯಾರದ್ದು, ಅಮಿತ್ ಷಾ ಅವರದ್ದೋ? ಬೊಮ್ಮಾಯಿಯವರದ್ದೋ? ಮೋದಿಯವರದ್ದೋ? ನಳಿನ್ ಕಟೀಲರದ್ದೋ? ಸೋಲಿನ ಹೊಣೆ ಹೊತ್ತು ರಾಜೀನಾಮೆ ಕೊಡುವವರು ಯಾರು? ಎಂದು ಎಂದು ರಾಜ್ಯ ಬಿಜೆಪಿಯನ್ನು ಪ್ರಶ್ನಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT