ಜೆಡಿಎಸ್ ಸಭೆ 
ರಾಜಕೀಯ

ಚುನಾವಣೆಯಲ್ಲಿ ಸೋಲು: ಬೆಂಗಳೂರಿನಲ್ಲಿ ಇಂದು ಜೆಡಿಎಸ್ ನಿಂದ ವಿಮರ್ಶನಾತ್ಮಕ ಮತ್ತು ರಾಷ್ಟ್ರೀಯ ಕಾರ್ಯಕಾರಿಣಿ ಸಭೆ

ಇತ್ತೀಚಿನ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ತೀರಾ ಕಳಪೆ ಫಲಿತಾಂಶದ ಬಗ್ಗೆ ಆತ್ಮಾವಲೋಕನ ಹಾಗೂ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಬೆಂಗಳೂರು: ಇತ್ತೀಚಿನ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ತೀರಾ ಕಳಪೆ ಫಲಿತಾಂಶದ ಬಗ್ಗೆ ಆತ್ಮಾವಲೋಕನ ಹಾಗೂ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಜೆಡಿಎಸ್ ಪಕ್ಷದಲ್ಲಿ ಮಾಡಬೇಕಿರುವ ಬದಲಾವಣೆಗಳು ಹಾಗೂ ತರಬೇಕಿರುವ ಸುಧಾರಣೆಗಳ ಬಗ್ಗೆ ಸಭೆಯಲ್ಲಿ ಮುಕ್ತವಾಗಿ ಚರ್ಚೆ ನಡೆಯಲಿದೆ. ಇದರಲ್ಲಿ ಯಾವುದೇ ಮುಚ್ಚುಮರೆ ಇಲ್ಲ. ದೊಡ್ಡ ನಿರೀಕ್ಷೆ ಇಟ್ಟುಕೊಂಡಿದ್ದೆವು. ‘ಪಂಚರತ್ನ ರಥಯಾತ್ರೆ’ಗೂ ದೊಡ್ಡ ಸಂಖ್ಯೆಯಲ್ಲಿ ಜನರು ಸೇರಿದ್ದರು. ಆದರೆ ಫಲಿತಾಂಶ ನಮಗೆ ಅತೀವ ನಿರಾಶೆ ಉಂಟು ಮಾಡಿದೆ ಎಂದು ಕುಮಾಸ್ವಾಮಿ ನಿನ್ನೆ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡುವ ವೇಳೆ ಹೇಳಿದ್ದಾರೆ. 

ಈ ಆತ್ಮಾವಲೋಕನ ಸಭೆಯಲ್ಲಿ ಪಕ್ಷದ ಸಂಘಟನೆ ಬಗ್ಗೆ ಹೆಚ್ಚು ಒತ್ತು ಕೊಟ್ಟು ಚರ್ಚೆ ಮಾಡುತ್ತೇವೆ. ಕಾರ್ಯಕರ್ತರಲ್ಲಿ ವಿಶ್ವಾಸದ ಕೊರತೆ ಇದೆ. ಯುವಕರಿಗೆ, ಕಾರ್ಯಕರ್ತರಿಗೆ ಹೊಸ ಜವಾಬ್ದಾರಿ ಕೊಡಬೇಕು ಎಂಬ ಉದ್ದೇಶ ಇದೆ. ಪಕ್ಷದ ಸಂಘಟನೆ ದೃಷ್ಟಿಯಿಂದ ಕೆಲವು ಮಹತ್ವದ ಬದಲಾವಣೆ ಮಾಡಲಿದ್ದೇವೆ ಎಂದು ಹೇಳಿದರು. 

ನವೆಂಬರ್ ನಲ್ಲಿ ರಾಜಕೀಯ ಬದಲಾವಣೆ ಆಗಲಿದೆ ಎಂಬ ಹೇಳಿಕೆ ಬಗ್ಗೆ ಮಾಧ್ಯಮಗಳು ಪ್ರಶ್ನಿಸಿದಾಗ, ‘ನಾನು ರಾಜಕೀಯದಲ್ಲಿ ಬೆಳವಣಿಗೆಗಳು ಆಗುತ್ತವೆ ಎಂದಿದ್ದೆ ಅಷ್ಟೇ‌. ಸರ್ಕಾರ ಹೋಗುತ್ತೆ ಅಂತಾ ಹೇಳಿದ್ದೆನಾ‌? ಎಂದು ಮರುಪ್ರಶ್ನೆ ಮಾಡಿದರು.

ಚುನಾವಣೆಯಲ್ಲಿ ಪಕ್ಷದ ಕಳಪೆ ಸಾಧನೆ ಹಿನ್ನೆಲೆಯಲ್ಲಿ ಈಗಾಗಲೇ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿ ಎಂ ಇಬ್ರಾಹಿಂ ಮತ್ತು ಯುವ ಘಟಕದ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ರಾಜೀನಾಮೆ ನೀಡಿದ್ದಾರೆ. ಪಕ್ಷದಲ್ಲಿ ನೂತನ ರಾಜ್ಯಾಧ್ಯಕ್ಷರಾಗಿ ಮತ್ತು ಯುವ ಘಟಕದ ನೂತನ ಅಧ್ಯಕ್ಷರನ್ನಾಗಿ ಮುಂದೆ ಯಾರನ್ನು ಆಯ್ಕೆ ಮಾಡಲಾಗುತ್ತದೆ ಎಂಬುದು ಕುತೂಹಲವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Pak ಬಣ್ಣ ಬಯಲು: ಕಾಶ್ಮೀರ ರಕ್ತದೋಕುಳಿಗೆ 10,000 ಉಗ್ರರ ರವಾನಿಸಿದ್ದ: Hafiz Saeed ಪಾಪಕೃತ್ಯ ಬಹಿರಂಗಪಡಿಸಿದ ಮೌಲ್ವಿ, Video ವೈರಲ್

ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆ: ನಕಲಿ ಪಿಂಚಣಿದಾರರಿಗೆ ಸರ್ಕಾರ ಶಾಕ್; 18 ಲಕ್ಷ ಖಾತೆಗಳು ತಾತ್ಕಾಲಿಕ ಸ್ಥಗಿತ, ವಂಚನೆಯಲ್ಲಿ ಬೆಂಗಳೂರೇ ನಂ.1..!

ಕೋಲ್ಕತ್ತಾದ ಹೊಟೇಲ್ ನಲ್ಲಿ ಭೀಕರ ಅಗ್ನಿ ಅವಘಡ: 9 ಮಂದಿ ಸಾವು, 6 ಜನರಿಗೆ ಗಾಯ-Video

ಕ್ಷಿಪಣಿ ದಾಳಿ ಆರೋಪ: Iranಗೆ UAE ಶಾಕ್, ಎಲ್ಲಾ ವ್ಯಾಪಾರ-ವಾಣಿಜ್ಯ ವಹಿವಾಟು ಸಂಪೂರ್ಣ ಸ್ಥಗಿತ..!

ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್'ಗೆ VIP ಟ್ರೀಟ್‌ಮೆಂಟ್?: ಕಾನೂನಿನ ಮುಂದೆ ಎಲ್ಲರೂ ಒಂದೇ, ಜೈಲಿನಲ್ಲಿ ಯಾರಿಗೂ ವಿಶೇಷ ಸೌಲಭ್ಯವಿಲ್ಲ; ಸರ್ಕಾರ ಸ್ಪಷ್ಟನೆ