ರಾಯರೆಡ್ಡಿ,ಮಹಾದೇವಪ್ಪ, ಕೃಷ್ಣ ಬೈರೇಗೌಡ ಮತ್ತು ರಾಜಣ್ಣ 
ರಾಜಕೀಯ

ಸಂಪುಟ ವಿಸ್ತರಣೆ ಕಸರತ್ತು: ಯಾರಿಗುಂಟು ಯಾರಿಗಿಲ್ಲ? ಹಿರಿಯರಿಗೆ ಬೇವು-ಕಿರಿಯರಿಗೆ ಬೆಲ್ಲ!

ಸಿಎಂ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಂಪುಟ ವಿಸ್ತರಣೆಗೆ ಸಚಿವರ ಪಟ್ಟಿಯನ್ನು ಅಂತಿಮಗೊಳಿಸಿದ್ದಾರೆ, ಮೂರ್ನಾಲ್ಕು ಬಾರಿ ಗೆದ್ದಿರುವ ಹಿರಿಯರು ಹಾಗೂ ಹೊಸ ಮುಖಗಳು ಈ ಎಲ್ಲಾ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ.

ಮೈಸೂರು: ಸಿಎಂ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಂಪುಟ ವಿಸ್ತರಣೆಗೆ ಸಚಿವರ ಪಟ್ಟಿಯನ್ನು ಅಂತಿಮಗೊಳಿಸಿದ್ದಾರೆ, ಮೂರ್ನಾಲ್ಕು ಬಾರಿ ಗೆದ್ದಿರುವ ಹಿರಿಯರು ಹಾಗೂ ಹೊಸ ಮುಖಗಳು ಈ ಎಲ್ಲಾ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ.

ಹಿರಿಯ ಶಾಸಕರನ್ನು ಸಂಪುಟಕ್ಕೆ ಸೇರಿಸಿಕೊಳ್ಳದಿದ್ದರೇ ಪಕ್ಷ ಅವರಿಗೆ ಅವಕಾಶ ಕಲ್ಪಿಸುತ್ತದೆ ಎಂಬ ವಿಶ್ವಾಸದಲ್ಲಿ ಎರಡನೇ ಹಂತದ ನಾಯಕರು ಇದ್ದಾರೆ.  ಇದರ ಜೊತೆಗೆ ಜೈನ, ಉಪ್ಪಾರ, ಇತರೆ ಹಿಂದುಳಿದ ಸಮುದಾಯಗಳ ಶಾಸಕರು ಕೂಡ ಸಚಿವ ಸಂಪುಟದ ಮೇಲೆ ಕಣ್ಣಿಟ್ಟಿದ್ದಾರೆ.

ಶಿವಕುಮಾರ್ ಅವರ ವಿರುದ್ಧ ದನಿಯೆತ್ತಿದ್ದ ಕೆ.ವೆಂಕಟೇಶ್, ಎಚ್.ಸಿ.ಮಹದೇವಪ್ಪ, ಕೃಷ್ಣ ಬೈರೇಗೌಡ, ದಿನೇಶ್ ಗುಂಡೂರಾವ್ ಅವರಂತಹ ಹಿರಿಯರ ಪ್ರವೇಶ ನಿಷೇದಿಸಿದರೇ ಅದು ಎರಡನೇ ಹಂತದ ನಾಯಕರಿಗೆ ಸಚಿವರಾಗಲು ದಾರಿಮಾಡಿಕೊಟ್ಟಂತಾಗುತ್ತದೆ.

ಆದರೆ ಸಿದ್ದರಾಮಯ್ಯ ಅವರು ತಮ್ಮ ಆಪ್ತರಾದ ಮಹದೇವಪ್ಪ, ವೆಂಕಟೇಶ್, ಬೈರೇಗೌಡ, ಕೆ.ಎನ್.ರಾಜಣ್ಣ, ಬಸವರಾಜ್ ರಾಯರೆಡ್ಡಿ, ಗುಂಡೂರಾವ್ ಅವರನ್ನು ಸೇರ್ಪಡೆ ಮಾಡಿಕೊಳ್ಳಲು ಮುಂದಾಗಬಹುದು ಎಂದು ಮೂಲಗಳು ತಿಳಿಸಿವೆ.

ತಾವು ಸಾಂಕೇತಿಕ ಮುಖ್ಯಮಂತ್ರಿಯಾಗಲು ಬಯಸುವುದಿಲ್ಲ ಎಂದು ಹೇಳಿರುವ ಸಿದ್ದರಾಮಯ್ಯ, ತಮಗಾಗಿ ಜೆಡಿಎಸ್ ತೊರೆದು ಬಂದಿರುವ  ಮಹದೇವಪ್ಪ ಮತ್ತು ವೆಂಕಟೇಶ್ ಅವರಂತಹ ಅನುಭವಿಗಳು ತಮ್ಮ ಸಂಪುಟದಲ್ಲಿ ಇರಬೇಕೆಂದು ಒತ್ತಾಯಿಸಿದ್ದಾರೆ. ಲೋಕಸಭೆ ಚುನಾವಣೆಗೂ ಮುನ್ನ ಅವರನ್ನು ತೃಪ್ತಿಪಡಿಸಲು ಎಲ್ಲ ವರ್ಗಗಳಿಗೂ ಸಮಾನ ಪ್ರಾತಿನಿಧ್ಯ ನೀಡುವ ದೃಢ ನಿಲುವು ಹೊಂದಿದ್ದಾರೆ.

ಈ ನಡುವೆ ಎಸ್‌ಸಿ/ಎಸ್‌ಟಿಗಳಿಗೆ ಎಂಟು ಸಚಿವ ಸ್ಥಾನಗಳನ್ನು ನೀಡಬೇಕು ಎಂದು ದಲಿತ ಮುಖಂಡರು ಖರ್ಗೆ ಮತ್ತು ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ. ಬಿಜೆಪಿ ಸರ್ಕಾರದಲ್ಲಿ ಸೂಕ್ತ ಸಮುದಾಯಕ್ಕೆ ಪ್ರಾತಿನಿಧ್ಯ ಇಲ್ಲ ಎಂಬುದು ಕಾಂಗ್ರೆಸ್ ಹೈಕಮಾಂಡ್‌ಗೆ ಗೊತ್ತಿದೆ ಎಂದು ಶಾಸಕ ಎಸ್.ಎನ್.ನಾರಾಯಣಸ್ವಾಮಿ ಹೇಳಿದ್ದಾರೆ.

ಎಸ್‌ಎಂ ಕೃಷ್ಣ ಮತ್ತು ಹಿಂದಿನ ಕಾಂಗ್ರೆಸ್ ಸರ್ಕಾರಗಳಲ್ಲಿ ಸಮುದಾಯದ ನಾಲ್ವರು ಸಚಿವರಿದ್ದರು. ವಿಧಾನಪರಿಷತ್ ಚುನಾವಣೆಯಲ್ಲಿ ಗೆದ್ದು, ಜೆಡಿಎಸ್ ಕೋಟೆ ಒಡೆಯಲು ಎನ್ ಚಲುವರಾಯಸ್ವಾಮಿ ಜತೆಗೂಡಿ ಶ್ರಮಿಸಿದ್ದಾಗಿ ಹೇಳಿದ್ದಾರೆ . ಎಸ್‌ಟಿ ಸಮುದಾಯದವರು ಮೂರು ಮತ್ತು ಮುಸ್ಲಿಮರು ಇನ್ನೂ ಮೂರು ಸಚಿವ ಸ್ಥಾನಗಳನ್ನು ಕೋರಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT