ಸಿದ್ದರಾಮಯ್ಯ 
ರಾಜಕೀಯ

ಲೋಕಸಭೆ ಚುನಾವಣೆಯಲ್ಲಿ ಕನಿಷ್ಠ 20 ಸ್ಥಾನ ಗೆಲ್ಲಬೇಕು: ನೂತನ ಸಚಿವರಿಗೆ ಟಾರ್ಗೆಟ್ ಫಿಕ್ಸ್ ಮಾಡಿದ ಸಿಎಂ

ಪೂರ್ಣ ಪ್ರಮಾಣದ ಸರ್ಕಾರ ರಚಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಂಪುಟದ ಎಲ್ಲಾ ಸಚಿವರಿಗೂ ಲೋಕಸಭೆ ಚುನಾವಣೆಯಲ್ಲಿ ಒಟ್ಟು 28 ಸ್ಥಾನಗಳ ಪೈಕಿ ಕನಿಷ್ಠ 20 ಸ್ಥಾನಗಳನ್ನು ಗೆಲ್ಲಬೇಕು ಎಂದು ಟಾರ್ಗೆಟ್ ಫಿಕ್ಸ್

ಬೆಂಗಳೂರು: ಪೂರ್ಣ ಪ್ರಮಾಣದ ಸರ್ಕಾರ ರಚಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಂಪುಟದ ಎಲ್ಲಾ ಸಚಿವರಿಗೂ ಲೋಕಸಭೆ ಚುನಾವಣೆಯಲ್ಲಿ ಒಟ್ಟು 28 ಸ್ಥಾನಗಳ ಪೈಕಿ ಕನಿಷ್ಠ 20 ಸ್ಥಾನಗಳನ್ನು ಗೆಲ್ಲಬೇಕು ಎಂದು ಟಾರ್ಗೆಟ್ ಫಿಕ್ಸ್ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು ಶನಿವಾರ 24 ಹೊಸ ಸಚಿವರನ್ನು ತಮ್ಮ ಸಂಪುಟಕ್ಕೆ ಸೇರಿಸಿಕೊಳ್ಳುವ ಮೂಲಕ ಸಂಪುಟದ ಎಲ್ಲಾ 34 ಸ್ಥಾನಗಳನ್ನು ಭರ್ತಿ ಮಾಡಿದ್ದಾರೆ.

ಇನ್ನು ಒಂದು ವರ್ಷದಲ್ಲಿ ಲೋಕಸಭೆ ಚುನಾವಣೆ ಬರಲಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಅವರಿಗೆ ಉಡುಗೊರೆಯಾಗಿ ಕನಿಷ್ಠ 20 ಲೋಕಸಭಾ ಕ್ಷೇತ್ರಗಳನ್ನಾದರೂ ಗೆಲ್ಲಲೇಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಈ ಗುರಿಯನ್ನು ಇಟ್ಟುಕೊಂಡು ಬದ್ಧತೆ, ಪ್ರಾಮಾಣಿಕತೆ ಮತ್ತು ಚಾಣಾಕ್ಷತನದಿಂದ ನಿಮ್ಮ ಜವಾಬ್ದಾರಿಯನ್ನು ನಿರ್ವಹಿಸಬೇಕು ಎಂದು ಮುಖ್ಯಮಂತ್ರಿಗಳು ಸಚಿವರುಗಳಿಗೆ ಸೂಚನೆ ನೀಡಿದ್ದಾರೆ ಎಂದು ಸಿಎಂ ಕಚೇರಿಯ ಪ್ರಕಟಣೆ ತಿಳಿಸಿದೆ.

ನಾವು ನೀಡಿರುವ ಭರವಸೆಗಳು ಜನರಿಗೆ ತಲುಪುವಂತೆ ಪ್ರಾಮಾಣಿಕವಾಗಿ ಶ್ರಮಿಸಬೇಕು, ಹಿಂದಿನ ತಪ್ಪುಗಳು ಈ ಬಾರಿ ಮರುಕಳಿಸಬಾರದು ಎಂದು ಅವರು ಸಿಎಂ ಎಚ್ಚರಿಕೆ ನೀಡಿದ್ದಾರೆ.

ನಾಡಿನ ಜನತೆ ಅಭೂತಪೂರ್ವ ಬಹುಮತದಿಂದ ಗೆಲ್ಲಿಸಿ ನಮಗೆ ಬಹಳ ದೊಡ್ಡ ಜವಾಬ್ದಾರಿ ನೀಡಿದ್ದಾರೆ. ಅವರ ನಿರೀಕ್ಷೆಗೆ ತಕ್ಕಂತೆ ಜನಪರ ಆಡಳಿತ ನೀಡಬೇಕಾದ ಹೊಣೆಗಾರಿಕೆ ನಮ್ಮ ಮೇಲಿದೆ. ಜನರ ಸಮಸ್ಯೆಗಳನ್ನು ಕೇಳಿಸಿಕೊಳ್ಳಿ. ತಮ್ಮ ತಮ್ಮ ಕ್ಷೇತ್ರದಲ್ಲೇ ಸಮಸ್ಯೆ ಬಗೆಹರಿಸಲು ಬೇಕಾದ ಕ್ರಿಯಾಶೀಲತೆಯನ್ನು ರೂಢಿಸಿಕೊಳ್ಳಿ. ಸಣ್ಣ ಪುಟ್ಟ ಕೆಲಸಗಳಿಗೂ ಕ್ಷೇತ್ರದ ಜನ ಸರ್ಕಾರಿ ಕಚೇರಿಗಳಿಗೆ ಪದೆ ಪದೆ ಅಲೆಯುವುದನ್ನು ತಪ್ಪಿಸಿ. ಜನರು ತಮ್ಮ ಕೆಲಸಗಳನ್ನು ಪೂರೈಸಿಕೊಳ್ಳಲು ಬಸ್ಸು, ರೈಲು ಹತ್ತಿಕೊಂಡು ವಿಧಾನಸೌಧಕ್ಕೆ ಬರುವ ಹೊರೆಯನ್ನು ತಪ್ಪಿಸಿ ಎಂದು ಸಿಎಂ ಸೂಚಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT