ಶಾಸಕ ಇಕ್ಬಾಲ್ ಹುಸೇನ್ 
ರಾಜಕೀಯ

ಇನ್ನು ಒಂದೂವರೆ ವರ್ಷ ನಂತರ ಡಿ ಕೆ ಶಿವಕುಮಾರ್ ಸಿಎಂ ಆಗುತ್ತಾರೆ: ಶಾಸಕ ಇಕ್ಬಾಲ್ ಹುಸೇನ್ ವಿಶ್ವಾಸ

ಡಿ ಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಬೇಕೆಂಬುದು ನಮ್ಮೆಲ್ಲರ ಬಯಕೆಯಾಗಿದೆ. ಕೇವಲ ನಮ್ಮ ಜಿಲ್ಲೆಯವರದ್ದು ಮಾತ್ರವಲ್ಲ, ರಾಜ್ಯದ 224 ಕ್ಷೇತ್ರಗಳ ಜನರೂ ಅದನ್ನೇ ಬಯಸಿದ್ದಾರೆ ಎಂದು ಡಿ ಕೆ ಶಿವಕುಮಾರ್ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಶಾಸಕ ಹೆಚ್ ಎ ಇಕ್ಬಾಲ್ ಹೇಳಿದ್ದಾರೆ.

ರಾಮನಗರ: ಡಿ ಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಬೇಕೆಂಬುದು ನಮ್ಮೆಲ್ಲರ ಬಯಕೆಯಾಗಿದೆ. ಕೇವಲ ನಮ್ಮ ಜಿಲ್ಲೆಯವರದ್ದು ಮಾತ್ರವಲ್ಲ, ರಾಜ್ಯದ 224 ಕ್ಷೇತ್ರಗಳ ಜನರೂ ಅದನ್ನೇ ಬಯಸಿದ್ದಾರೆ ಎಂದು ಡಿ ಕೆ ಶಿವಕುಮಾರ್ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಶಾಸಕ ಹೆಚ್ ಎ ಇಕ್ಬಾಲ್ ಹೇಳಿದ್ದಾರೆ.

ಮುಂದಿನ 5 ವರ್ಷ ನಾನೇ ಸಿಎಂ ಎಂಬ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಮಾತನಾಡಿದ ಅವರು, ಶಿವಕುಮಾರ್ ಅವರು ನಮ್ಮ ಪಕ್ಷದ ಅಧ್ಯಕ್ಷರು, ತಳಮಟ್ಟದಿಂದ ಪಕ್ಷವನ್ನು ಬೆಳೆಸಿ ಕಾರ್ಯಕರ್ತರಿಗೆ ಶಕ್ತಿ ಕೊಟ್ಟು ಉಳಿಸಿದ್ದಾರೆ. ತನ್ನೆಲ್ಲಾ ಶಕ್ತಿ ಮೀರಿ ಕೆಲಸ ಮಾಡಿ ಅಧಿಕಾರಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಅದಕ್ಕಾಗಿ ಸಾಕಷ್ಟು ತ್ಯಾಗ ಮಾಡಿದ್ದಾರೆ ಎಂದರು.

ನಮ್ಮ ನಾಯಕರಾದ ಶಿವಕುಮಾರ್ ಅವರಿಗೆ ಮುಖ್ಯಮಂತ್ರಿಯಾಗುವ ಎಲ್ಲಾ ಅರ್ಹತೆಗಳಿವೆ. ಎಲ್ಲರಿಗೂ ಅವಕಾಶ ಸಿಗಬೇಕು. ಅವರಿಗೂ ಒಂದು ಅವಕಾಶ ನೀಡಬೇಕು ಎಂದು ಸಾಕಷ್ಟು ನಾಯಕರು ಮತ್ತು ಕಾರ್ಯಕರ್ತರು ಆಸೆ ಇಟ್ಟುಕೊಂಡಿದ್ದಾರೆ. ಅವರನ್ನು ಸಿಎಂ ಆಗಿ ನೋಡುವುದು ನಮ್ಮ ಕನಸು. ಇನ್ನು ಒಂದೂವರೆ ವರ್ಷದಲ್ಲಿ ಅವರು ಸಿಎಂ ಆಗುತ್ತಾರೆ. ಇದು ನಮ್ಮೆಲ್ಲರ ಅಭಿಲಾಷೆ ಕೂಡ ಎಂದರು.

ಸಿದ್ದರಾಮಯ್ಯ ನಮ್ಮ ನಾಯಕ: ಸಿದ್ದರಾಮಯ್ಯ ಅವರು ನಮ್ಮ ನಾಯಕರು. ಕಳೆದ ಸಲ ಸಿಎಂ ಆಗಿದ್ದ ಅವರು ಉತ್ತಮ ಕಾರ್ಯಕ್ರಮಗಳನ್ನು ನೀಡಿದ್ದರು. ಜನಪರ ಮತ್ತು ಬಡವರ ಪರ ಕೆಲಸ ಮಾಡಿದ್ದಾರೆ ಎಂದರು.

ಕೆಲಸಕ್ಕೆ ಬಾರದವರು ಸಿಎಂ ಬದಲಾವಣೆ ಬಗ್ಗೆ ಮಾತನಾಡುತ್ತಾರೆ ಎಂಬ ಟೀಕೆಗೆ ಪ್ರತಿಕ್ರಿಯಿಸಿದ ಅವರು ಶಾಸಕರ ಬಗ್ಗೆ ಹಗುರವಾಗಿ ಮಾತನಾಡಬಾರದು. ಎಲ್ಲರಿಗೂ ಅವರದ್ದೇ ಆದ ಗೌರವವಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT