ನಳಿನ್ ಕುಮಾರ್ ಕಟೀಲ್ 
ರಾಜಕೀಯ

ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸದೆ ಬರ ಸಮಸ್ಯೆಗೆ ಪರಿಹಾರ ಹುಡುಕಿ: ನಳಿನ್ ಕುಮಾರ್ ಕಟೀಲ್

ಬರ ಪರಿಹಾರ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಕೇಂದ್ರದ ಹಣಕ್ಕಾಗಿ ಕಾಯುವ ಬದಲು ರಾಜ್ಯ ಸರ್ಕಾರ ತನ್ನ ಖಜಾನೆಯಿಂದಲೇ ರೈತರಿಗೆ ಬೆಳೆ ನಷ್ಟ ಪರಿಹಾರ ವಿತರಿಸಲು ಮುಂದಾಗಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಹುಬ್ಬಳ್ಳಿ: ಬರ ಪರಿಹಾರ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಕೇಂದ್ರದ ಹಣಕ್ಕಾಗಿ ಕಾಯುವ ಬದಲು ರಾಜ್ಯ ಸರ್ಕಾರ ತನ್ನ ಖಜಾನೆಯಿಂದಲೇ ರೈತರಿಗೆ ಬೆಳೆ ನಷ್ಟ ಪರಿಹಾರ ವಿತರಿಸಲು ಮುಂದಾಗಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ರಾಜ್ಯ ಸರ್ಕಾರ ನಷ್ಟದ ಸಮರ್ಪಕ ಅಂದಾಜು ನೀಡದ ಹೊರತು ಕೇಂದ್ರದಿಂದ ಅನುದಾನ ಬಿಡುಗಡೆ ಮಾಡುವ ಸಾಧ್ಯತೆ ಕಡಿಮೆ. ಕೇಂದ್ರ ತಂಡಗಳು ಬರ ಪರಿಸ್ಥಿತಿ ಅಧ್ಯಯನ ನಡೆಸಿದ್ದು, ರಾಜ್ಯ ಸರ್ಕಾರವೂ ವರದಿ ಕಳುಹಿಸಬೇಕು. ಇವೆರಡರ ವರದಿಗಳನ್ನು ಹೋಲಿಸಿ, ಎನ್‌ಡಿಆರ್‌ಎಫ್ ಮಾರ್ಗಸೂಚಿಗಳ ಪ್ರಕಾರ ಕೇಂದ್ರವು ಹಣವನ್ನು ಬಿಡುಗಡೆ ಮಾಡುತ್ತದೆ ಎಂದು ಅವರು ಹೇಳಿದರು.

ಸಿದ್ದರಾಮಯ್ಯ ಸರ್ಕಾರ ರೈತ ಮತ್ತು ಬಡವರ ವಿರೋಧಿ ಎಂದು ಬಣ್ಣಿಸಿದ ಅವರು, ಕಾಂಗ್ರೆಸ್ ನಾಯಕರು ತಮ್ಮ ತಮ್ಮಲ್ಲೇ ಹೊಡೆದಾಡಿಕೊಳ್ಳುತ್ತಿದ್ದಾರೆ. ಬರ ಸಮಸ್ಯೆಗೆ ಪರಿಹಾರ ಹುಡುಕುವ ಬದಲು ಮುಂದಿನ ಸಿಎಂ ಯಾರು ಎಂಬ ಚರ್ಚೆಯಲ್ಲಿ ತೊಡಗಿದ್ದಾರೆ. ಸರ್ಕಾರ ಅಧಿಕಾರಕ್ಕೆ ಬಂದ ಆರು ತಿಂಗಳಲ್ಲೇ ಜನ ಬೇಸತ್ತಿದ್ದಾರೆ ಎಂದರು.

ರಾಜ್ಯದಲ್ಲಿ ಬರದ ಛಾಯೆ ಹಾಗೂ ವಿದ್ಯುತ್ ಕ್ಷಾಮ ತಲೆದೂರಿದು ರಾಜ್ಯ ಸರ್ಕಾರ ಆಂತರಿಕ ಕಚ್ಚಾಟಕ್ಕೆ ಸಿಲುಕಿ ಜನರ ಸಮಸ್ಯೆಯನ್ನು ಬರದ ಸಂಕಷ್ಟ ಎರಡನ್ನು ಮರೆತಿದೆ. ಮುಖ್ಯಮಂತ್ರಿ, ಕಾಂಗ್ರೆಸ್ ಶಾಸಕರು ಸಚಿವರು ಕೇಂದ್ರದ ಮೇಲೆ ಗೂಬೆಕೂರಿಸುವ ಕೆಲಸ ಮಾಡುತ್ತಿದ್ದಾರೆ. ಕೇಂದ್ರ ಸರಕಾರ ತತ್ ಕ್ಷಣಕ್ಕೆ ಬರ ಅಧ್ಯಯನ ತಂಡ ಕಳಿಸಿಕೊಟ್ಟಿದೆ. ರಾಜ್ಯ ಸರಕಾರ ಬರದಿಂದ ಏನೆಲ್ಲಾ ಹಾನಿಯಾಗಿದೆ ಎಷ್ಟು ವೆಚ್ಚ ತಗಲಲ್ಲಿದೆ ಎಂಬುದರ ಪ್ರಸ್ತಾವನೆಯನ್ನೇ ಇದುವರೆಗೂ ಕೇಂದ್ರಕ್ಕೆ ಸಲ್ಲಿಸಿಲ್ಲ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಆಂತರಿಕ ಭಿನ್ನಾಭಿಪ್ರಾಯಗಳಿಂದಾಗಿ ಸರ್ಕಾರ ಪತನವಾಗಲಿದೆ ಎಂದರು. ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರನ್ನು ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರನ್ನಾಗಿ ಮಾಡಿರುವ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದರು. ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಗೆ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಮಾಡಿಕೊಂಡಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT