ಸಿಎಂ ಸಿದ್ದರಾಮಯ್ಯ 
ರಾಜಕೀಯ

ಮುಂದಿನ 5 ವರ್ಷ ನಾನೇ ಸಿಎಂ ಹೇಳಿಕೆ: ಸಿದ್ದರಾಮಯ್ಯ ಯೂಟರ್ನ್

ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಹುದ್ದೆ ವಿಚಾರ ಮತ್ತೆ ಸದ್ದು ಮಾಡುತ್ತಿದೆ. ಕಾಂಗ್ರೆಸ್‌ ಪಾಳಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಕಳೆದ ಕೆಲವು ದಿನಗಳಿಂದ ಮತ್ತೆ ಸಾಕಷ್ಟು ಚರ್ಚೆಯಾಗುತ್ತಿದ್ದು, ಈ ನಡುವಲ್ಲೇ ಮುಂದಿನ 5 ವರ್ಷ ನಾನೇ ಸಿಎಂ ಎಂದು ಹೇಳಿದ್ದ ಸಿದ್ದರಾಮಯ್ಯ ಅವರು, ಇದೀಗ ಯೂ ಟರ್ನ್ ಹೊಡೆದಿದ್ದಾರೆ.

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಹುದ್ದೆ ವಿಚಾರ ಮತ್ತೆ ಸದ್ದು ಮಾಡುತ್ತಿದೆ. ಕಾಂಗ್ರೆಸ್‌ ಪಾಳಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಕಳೆದ ಕೆಲವು ದಿನಗಳಿಂದ ಮತ್ತೆ ಸಾಕಷ್ಟು ಚರ್ಚೆಯಾಗುತ್ತಿದ್ದು, ಈ ನಡುವಲ್ಲೇ ಮುಂದಿನ 5 ವರ್ಷ ನಾನೇ ಸಿಎಂ ಎಂದು ಹೇಳಿದ್ದ ಸಿದ್ದರಾಮಯ್ಯ ಅವರು, ಇದೀಗ ಯೂ ಟರ್ನ್ ಹೊಡೆದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮದು ಹೈಕಮಾಂಡ್ ಪಕ್ಷ. ನಾನು ನೀಡಿದ್ದ ಹೇಳಿಕೆಯೇ ಬೇರೆ. ನಾನು ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದು ಹೇಳಿದ್ದೆ. ಆದರೆ, ತಪ್ಪಾಗಿ ವರದಿಯಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಗುರುವಾರ ವಿಜಯನಗರದಲ್ಲಿ ಮಾತನಾಡಿದ್ದ ಸಿಎಂ, 5 ವರ್ಷ ನಮ್ಮದೇ ಸರ್ಕಾರ ಇರುತ್ತದೆ. ಈಗ ನಾನು ಮುಖ್ಯಮಂತ್ರಿ, ನಾನೇ ಮುಂದುವರಿಯುತ್ತೇನೆ ಎಂದು ಹೇಳಿಕೆ ನೀಡಿದ್ದರು.

ಈ ಹೇಳಿಕೆ ನೀಡಿದ ಬಳಿಕ ಶುಕ್ರವಾರ ಗದಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಒಂದೇ ವೇದಿಕೆಯಲ್ಲಿ ಕುಳಿತಿದ್ದರೂ ಪರಸ್ಪರ ಮಾತನಾಡಿರಲಿಲ್ಲ. ಇಬ್ಬರೂ ಕಾರ್ಯಾಕ್ರಮದ ಆರಂಭದಿಂದ ಅಂತ್ಯದವರೆಗೂ ತುಟಿ ಬಿಚ್ಚದೇ ಇದ್ದದ್ದು ಹಲವರ ಹುಬ್ಬೇರುವಂತೆ ಮಾಡಿತ್ತು. ಸಿಎಂ ಹೇಳಿಕೆಯಿಂದ ಡಿಕೆ.ಶಿವಕುಮಾರ್ ಮುನಿಸಿಕೊಂಡಿರುವಂತೆ ಭಾಸವಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT