ಬಿಜೆಪಿ ಶಾಸಕ ಸುರೇಶ್ ಗೌಡ 
ರಾಜಕೀಯ

ಕೆಲವೊಮ್ಮೆ ನನ್ನ ಪಕ್ಷದ ಸಿದ್ಧಾಂತವನ್ನೇ ವಿರೋಧಿಸಿದ್ದೇನೆ: ಬಿಜೆಪಿ ಶಾಸಕ ಸುರೇಶ್ ಗೌಡ

ಯಾವುದೇ ಒಂದು ಸಿದ್ಧಾಂತಕ್ಕೆ ಅಂಟಿಕೊಳ್ಳುವುದು ನನಗಿಷ್ಟವಿಲ್ಲ. ಕೆಲವೊಮ್ಮೆ ನನ್ನ ಪಕ್ಷದ ಸಿದ್ಧಾಂತ, ತತ್ವಗಳನ್ನೇ ವಿರೋಧಿಸಿದ್ದೂ ಇದೆ ಎಂದು ತುಮಕೂರು ಗ್ರಾಮಾಂತರ ಬಿಜೆಪಿ ಶಾಸಕ ಬಿ ಸುರೇಶ್ ಗೌಡ ಅವರು ಭಾನುವಾರ ಹೇಳಿದರು.

ತುಮಕೂರು: ಯಾವುದೇ ಒಂದು ಸಿದ್ಧಾಂತಕ್ಕೆ ಅಂಟಿಕೊಳ್ಳುವುದು ನನಗಿಷ್ಟವಿಲ್ಲ. ಕೆಲವೊಮ್ಮೆ ನನ್ನ ಪಕ್ಷದ ಸಿದ್ಧಾಂತ, ತತ್ವಗಳನ್ನೇ ವಿರೋಧಿಸಿದ್ದೂ ಇದೆ ಎಂದು ತುಮಕೂರು ಗ್ರಾಮಾಂತರ ಬಿಜೆಪಿ ಶಾಸಕ ಬಿ ಸುರೇಶ್ ಗೌಡ ಅವರು ಭಾನುವಾರ ಹೇಳಿದರು.

ತುಮಕೂರಿನ ಕನ್ನಡ ಭವನದಲ್ಲಿ ಸ್ಥಳೀಯ ಕನ್ನಡ ದಿನಪತ್ರಿಕೆ ಬೆವರ ಹನಿ 6ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾವು ಸಮಾಜ ಕೇಂದ್ರಿತವಾಗಿರಬೇಕು, ಎಡಪಂಥೀಯ ಮತ್ತು ಬಲಪಂಥೀಯ ಮಾರ್ಗಗಳನ್ನು ಬದಿಗಿಟ್ಟು ದೇಶವು ಎಲ್ಲರಿಗೂ ಸಮಾನತೆಯನ್ನು ಒದಗಿಸುವ ಮೂಲಕ ಪ್ರಗತಿ ಹೊಂದುವಂತೆ ಮಾಡಬೇಕು. ಈ ಮೂಲಕ ಮಹಾತ್ಮ ಗಾಂಧಿಯವರ ಕನಸನ್ನು ನನಸಾಗಿಸಬೇಕು. ನಾನು ಬಿಜೆಪಿಯಲ್ಲಿರಬಹುದು, ಆದರೆ, ಕೆಲವೊಮ್ಮೆ ನನ್ನ ಪಕ್ಷದ ಸಿದ್ಧಾಂತವನ್ನೇ ವಿರೋಧಿಸಿದ್ದೇನೆಂದು ಹೇಳಿದರು.

ಇದೇ ವೇಳೆ ಮುಂದಿನ ದಿನಗಳಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರೇ ಸಿಎಂ ಆಗುತ್ತಾರೆಂಬ ಹಕಾರ ಸಚಿವ ಕೆ.ಎನ್.ರಾಜಣ್ಣ ಅವರ ಹೇಳಿಕೆ ಕುರಿತು ಮಾತನಾಡಿ, ಅವರ ಹೇಳಿಕೆಗೆ ನನ್ನ ಸಹಮತವಿದೆ. ಸ್ವಾತಂತ್ರ್ಯ ಬಂದಾಗಿನಿಂದ ಯಾವ ದಲಿತನೂ ರಾಜ್ಯದ ಸಿಎಂ ಆಗಿಲ್ಲ. ಈ ಬಗ್ಗೆ ನಾವೂ ಚಿಂತನೆ ನಡೆಸಬೇಕಿದೆ. ಹಾಗಾಗಿ ಪರಮೇಶ್ವರ್ ಸಿಎಂ ಆಗುವುದಾದರೆ ನಾನು ಬೆಂಬಲ ನೀಡುತ್ತೇನೆಂದು ತಿಳಿಸಿದರು.

ಜಾತಿ ಗಣತಿ ವರದಿ ಕುರಿತು ಮಾತನಾಡಿ, ಸರ್ಕಾರ ವರದಿಯನ್ನು ಅಂಗೀಕರಿಸುವ ಕುರಿತು ಚಿಂತನೆ ನಡೆಸುತ್ತಿದೆ. ಆದರೆ, ವರದಿಯನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುವ ಸಾಧ್ಯತೆಗಳು ಹೆಚ್ಚಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT