ಡಿ ಕೆ ಶಿವಕುಮಾರ್ 
ರಾಜಕೀಯ

ನವೆಂಬರ್ 15ಕ್ಕೆ ಹಲವು ಜೆಡಿಎಸ್-ಬಿಜೆಪಿ ಶಾಸಕರು ಕಾಂಗ್ರೆಸ್ ಸೇರ್ಪಡೆ: ಡಿಸಿಎಂ ಡಿ ಕೆ ಶಿವಕುಮಾರ್

ನವೆಂಬರ್ 15ನೇ ತಾರೀಖು, ದೀಪಾವಳಿ ಮುಗಿದ ನಂತರ ಹಲವು ಜೆಡಿಎಸ್ -ಬಿಜೆಪಿ ಶಾಸಕರು ಕಾಂಗ್ರೆಸ್ ಪಕ್ಷ ಸೇರುತ್ತಾರೆ ಎಂದು ದೆಹಲಿಯಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಇಂದು ಬುಧವಾರ ಸ್ಫೋಟಕ ಹೇಳಿಕೆ ನೀಡಿದ್ದಾರೆ. 

ನವ ದೆಹಲಿ: ನವೆಂಬರ್ 15ನೇ ತಾರೀಖು, ದೀಪಾವಳಿ ಮುಗಿದ ನಂತರ ಹಲವು ಜೆಡಿಎಸ್ -ಬಿಜೆಪಿ ಶಾಸಕರು ಕಾಂಗ್ರೆಸ್ ಪಕ್ಷ ಸೇರುತ್ತಾರೆ ಎಂದು ದೆಹಲಿಯಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಇಂದು ಬುಧವಾರ ಸ್ಫೋಟಕ ಹೇಳಿಕೆ ನೀಡಿದ್ದಾರೆ. 

ದೆಹಲಿ ಪ್ರವಾಸದಲ್ಲಿರುವ ಡಿಸಿಎಂ ಡಿ ಕೆ ಶಿವಕುಮಾರ್ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದೀಪಾವಳಿ ನಂತರ ರಾಜ್ಯ ರಾಜಕೀಯದಲ್ಲಿ ಹಲವು ಬದಲಾವಣೆಗಳಾಗುತ್ತವೆ. ಬಿಜೆಪಿ ಹಾಗೂ ಜೆಡಿಎಸ್ ನಾಯಕರು ನಮ್ಮ ಸಂಪರ್ಕದಲ್ಲಿದ್ದಾರೆ. ನವೆಂಬರ್ 15ರಂದು ಮತ್ತಷ್ಟು ನಾಯಕರು ನಮ್ಮ ಪಕ್ಷಕ್ಕೆ ಸೇರುತ್ತಾರೆ ಎಂದು ಹೇಳುವ ಮೂಲಕ ಆಪರೇಷನ್ ಹಸ್ತದ ಸುಳಿವು ನೀಡಿದ್ದಾರೆ.

ನಮ್ಮ ಒಬ್ಬ ಶಾಸಕರನ್ನೂ ಸೆಳೆಯಲು ಸಾಧ್ಯವಿಲ್ಲ: ರಾಜ್ಯದಲ್ಲಿ ಬಿಜೆಪಿ ಈಗಿರುವ ಪರಿಸ್ಥಿತಿಯಲ್ಲಿ ನಮ್ಮ ಒಬ್ಬ ಶಾಸಕರನ್ನೂ ಅವರಿಗೆ ಕರೆದುಕೊಳ್ಳಲು ಆಗಲ್ಲ. ಬಿಜೆಪಿಯಲ್ಲಿ ನಾಯಕತ್ವದ ಬಗ್ಗೆಯೇ ತೀರ್ಮಾನ‌ ಮಾಡಲು ಆಗಿಲ್ಲ. ಬಿಜೆಪಿಯವರು ಗೊಂದಲ ಸೃಷ್ಟಿಸಲು ಪ್ರಯತ್ನ ಮಾಡುತ್ತಿದ್ದಾರೆ. ಬಿಜೆಪಿಯಲ್ಲೇ ಸಾಕಷ್ಟು ಸಮಸ್ಯೆ ಇದೆ, ಹೀಗಿರುವಾಗ ನಮ್ಮ ಶಾಸಕರನ್ನು ಅವರು ಸೆಳೆದುಕೊಳ್ಳುವುದು ದೂರದ ಮಾತು ಎಂದು ಡಿ ಕೆ ಶಿವಕುಮಾರ್ ಲೇವಡಿ ಮಾಡಿದರು.

ಬಿಜೆಪಿಯವರಿಗೆ ಅಸ್ಥಿತ್ವದಲ್ಲಿಲ್ಲದ ಪರಿಸ್ಥಿತಿ ಎದುರಾಗಿದೆ. ಸದ್ಯ ಅವರಿಗೆ ಮಾರುಕಟ್ಟೆಯಲ್ಲಿ ಚಲಾವಣೆಯಲ್ಲಿರಬೇಕು. ಅದಕ್ಕೋಸ್ಕರ ಅಲ್ಲಿಲ್ಲಿ ಹೋಗುತ್ತಾ, ಅವರಿವರನ್ನು ಭೇಟಿ ಮಾಡಿ ಮಾತುಕತೆ ನಡೆಸುತ್ತಾ ಸುದ್ದಿಯಾಗುತ್ತಿದ್ದಾರಷ್ಟೆ. ಮಾರ್ಕೆಟ್​ನಲ್ಲಿ ಇರುವುದಕ್ಕೆ ಇಂತಹ ಪ್ರಯತ್ನ ಮಾಡುತ್ತಿದ್ದಾರೆ. ಮಹಾರಾಷ್ಟ್ರದಲ್ಲಿ ಸಭೆ ಆಗಿರುವ ಬಗ್ಗೆ ನಾನು ಮಾತನಾಡಲ್ಲ. ಎಲ್ಲಾ ಮೂಮೆಂಟ್​ ಗೊತ್ತಿದೆ, ನಿರುದ್ಯೋಗಿಗಳು ಚಪಲಕ್ಕೆ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ರಾಜ್ಯ ಸರ್ಕಾರದ ಕುರಿತು ಪ್ರಧಾನಿ ನರೇಂದ್ರ ಮೋದಿ ಟೀಕೆ ವಿಚಾರವಾಗಿ ಮಾತನಾಡಿದ ಅವರು, ಪ್ರಧಾನಿಗಳು ನಮ್ಮನ್ನು ನೆನಪಿಸಿಕೊಳ್ಳುತ್ತಾರೆ ಅದೇ ಸಂತೋಷ. ನಮ್ಮ ಗ್ಯಾರಂಟಿ, ನಮ್ಮ ಒಗ್ಗಟ್ಟು, ಜನರ ತೀರ್ಮಾನ ಅವರ ನಿದ್ದೆ ಕೆಡಿಸಿದೆ. ಅದಕ್ಕೆ‌ ನೆನಪಿಸಿಕೊಳ್ಳುತ್ತಾರೆ ಎಂದು ಟೀಕಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

SCROLL FOR NEXT