ಡಿ ಕೆ ಶಿವಕುಮಾರ್ 
ರಾಜಕೀಯ

ನವೆಂಬರ್ 15ಕ್ಕೆ ಹಲವು ಜೆಡಿಎಸ್-ಬಿಜೆಪಿ ಶಾಸಕರು ಕಾಂಗ್ರೆಸ್ ಸೇರ್ಪಡೆ: ಡಿಸಿಎಂ ಡಿ ಕೆ ಶಿವಕುಮಾರ್

ನವೆಂಬರ್ 15ನೇ ತಾರೀಖು, ದೀಪಾವಳಿ ಮುಗಿದ ನಂತರ ಹಲವು ಜೆಡಿಎಸ್ -ಬಿಜೆಪಿ ಶಾಸಕರು ಕಾಂಗ್ರೆಸ್ ಪಕ್ಷ ಸೇರುತ್ತಾರೆ ಎಂದು ದೆಹಲಿಯಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಇಂದು ಬುಧವಾರ ಸ್ಫೋಟಕ ಹೇಳಿಕೆ ನೀಡಿದ್ದಾರೆ. 

ನವ ದೆಹಲಿ: ನವೆಂಬರ್ 15ನೇ ತಾರೀಖು, ದೀಪಾವಳಿ ಮುಗಿದ ನಂತರ ಹಲವು ಜೆಡಿಎಸ್ -ಬಿಜೆಪಿ ಶಾಸಕರು ಕಾಂಗ್ರೆಸ್ ಪಕ್ಷ ಸೇರುತ್ತಾರೆ ಎಂದು ದೆಹಲಿಯಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಇಂದು ಬುಧವಾರ ಸ್ಫೋಟಕ ಹೇಳಿಕೆ ನೀಡಿದ್ದಾರೆ. 

ದೆಹಲಿ ಪ್ರವಾಸದಲ್ಲಿರುವ ಡಿಸಿಎಂ ಡಿ ಕೆ ಶಿವಕುಮಾರ್ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದೀಪಾವಳಿ ನಂತರ ರಾಜ್ಯ ರಾಜಕೀಯದಲ್ಲಿ ಹಲವು ಬದಲಾವಣೆಗಳಾಗುತ್ತವೆ. ಬಿಜೆಪಿ ಹಾಗೂ ಜೆಡಿಎಸ್ ನಾಯಕರು ನಮ್ಮ ಸಂಪರ್ಕದಲ್ಲಿದ್ದಾರೆ. ನವೆಂಬರ್ 15ರಂದು ಮತ್ತಷ್ಟು ನಾಯಕರು ನಮ್ಮ ಪಕ್ಷಕ್ಕೆ ಸೇರುತ್ತಾರೆ ಎಂದು ಹೇಳುವ ಮೂಲಕ ಆಪರೇಷನ್ ಹಸ್ತದ ಸುಳಿವು ನೀಡಿದ್ದಾರೆ.

ನಮ್ಮ ಒಬ್ಬ ಶಾಸಕರನ್ನೂ ಸೆಳೆಯಲು ಸಾಧ್ಯವಿಲ್ಲ: ರಾಜ್ಯದಲ್ಲಿ ಬಿಜೆಪಿ ಈಗಿರುವ ಪರಿಸ್ಥಿತಿಯಲ್ಲಿ ನಮ್ಮ ಒಬ್ಬ ಶಾಸಕರನ್ನೂ ಅವರಿಗೆ ಕರೆದುಕೊಳ್ಳಲು ಆಗಲ್ಲ. ಬಿಜೆಪಿಯಲ್ಲಿ ನಾಯಕತ್ವದ ಬಗ್ಗೆಯೇ ತೀರ್ಮಾನ‌ ಮಾಡಲು ಆಗಿಲ್ಲ. ಬಿಜೆಪಿಯವರು ಗೊಂದಲ ಸೃಷ್ಟಿಸಲು ಪ್ರಯತ್ನ ಮಾಡುತ್ತಿದ್ದಾರೆ. ಬಿಜೆಪಿಯಲ್ಲೇ ಸಾಕಷ್ಟು ಸಮಸ್ಯೆ ಇದೆ, ಹೀಗಿರುವಾಗ ನಮ್ಮ ಶಾಸಕರನ್ನು ಅವರು ಸೆಳೆದುಕೊಳ್ಳುವುದು ದೂರದ ಮಾತು ಎಂದು ಡಿ ಕೆ ಶಿವಕುಮಾರ್ ಲೇವಡಿ ಮಾಡಿದರು.

ಬಿಜೆಪಿಯವರಿಗೆ ಅಸ್ಥಿತ್ವದಲ್ಲಿಲ್ಲದ ಪರಿಸ್ಥಿತಿ ಎದುರಾಗಿದೆ. ಸದ್ಯ ಅವರಿಗೆ ಮಾರುಕಟ್ಟೆಯಲ್ಲಿ ಚಲಾವಣೆಯಲ್ಲಿರಬೇಕು. ಅದಕ್ಕೋಸ್ಕರ ಅಲ್ಲಿಲ್ಲಿ ಹೋಗುತ್ತಾ, ಅವರಿವರನ್ನು ಭೇಟಿ ಮಾಡಿ ಮಾತುಕತೆ ನಡೆಸುತ್ತಾ ಸುದ್ದಿಯಾಗುತ್ತಿದ್ದಾರಷ್ಟೆ. ಮಾರ್ಕೆಟ್​ನಲ್ಲಿ ಇರುವುದಕ್ಕೆ ಇಂತಹ ಪ್ರಯತ್ನ ಮಾಡುತ್ತಿದ್ದಾರೆ. ಮಹಾರಾಷ್ಟ್ರದಲ್ಲಿ ಸಭೆ ಆಗಿರುವ ಬಗ್ಗೆ ನಾನು ಮಾತನಾಡಲ್ಲ. ಎಲ್ಲಾ ಮೂಮೆಂಟ್​ ಗೊತ್ತಿದೆ, ನಿರುದ್ಯೋಗಿಗಳು ಚಪಲಕ್ಕೆ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ರಾಜ್ಯ ಸರ್ಕಾರದ ಕುರಿತು ಪ್ರಧಾನಿ ನರೇಂದ್ರ ಮೋದಿ ಟೀಕೆ ವಿಚಾರವಾಗಿ ಮಾತನಾಡಿದ ಅವರು, ಪ್ರಧಾನಿಗಳು ನಮ್ಮನ್ನು ನೆನಪಿಸಿಕೊಳ್ಳುತ್ತಾರೆ ಅದೇ ಸಂತೋಷ. ನಮ್ಮ ಗ್ಯಾರಂಟಿ, ನಮ್ಮ ಒಗ್ಗಟ್ಟು, ಜನರ ತೀರ್ಮಾನ ಅವರ ನಿದ್ದೆ ಕೆಡಿಸಿದೆ. ಅದಕ್ಕೆ‌ ನೆನಪಿಸಿಕೊಳ್ಳುತ್ತಾರೆ ಎಂದು ಟೀಕಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ