ಹೆಚ್.ಡಿ.ಕುಮಾರಸ್ವಾಮಿ 
ರಾಜಕೀಯ

ಹಾಸನದಲ್ಲಿ ಒಗ್ಗಟ್ಟಿನ ಮಂತ್ರ ಜಪಿಸಿದ ಹೆಚ್.ಡಿ.ಕುಮಾರಸ್ವಾಮಿ

ಬಿಜೆಪಿ ಜೊತೆಗಿನ ಮೈತ್ರಿ ವಿಚಾರದಲ್ಲಿ ಅಪಸ್ವರ ಮತ್ತು ಕೆಲ ನಾಯಕರು ಕಾಂಗ್ರೆಸ್ ಜೊತೆ ಸಂಪರ್ಕದಲ್ಲಿರುವ ವದಂತಿ ದಳಪತಿಗಳಿಗೆ ತಲೆಬಿಸಿ ಉಂಟು ಮಾಡಿದ್ದು, ಎಲ್ಲರನ್ನು ಹಿಡಿತದಲ್ಲಿಟ್ಟುಕೊಳ್ಳಲು ಜೆಡಿಎಸ್ ವರಿಷ್ಠರು ಕಸರತ್ತು ಆರಂಭಿಸಿದ್ದಾರೆ.

ಹಾಸನ: ಬಿಜೆಪಿ ಜೊತೆಗಿನ ಮೈತ್ರಿ ವಿಚಾರದಲ್ಲಿ ಅಪಸ್ವರ ಮತ್ತು ಕೆಲ ನಾಯಕರು ಕಾಂಗ್ರೆಸ್ ಜೊತೆ ಸಂಪರ್ಕದಲ್ಲಿರುವ ವದಂತಿ ದಳಪತಿಗಳಿಗೆ ತಲೆಬಿಸಿ ಉಂಟು ಮಾಡಿದ್ದು, ಎಲ್ಲರನ್ನು ಹಿಡಿತದಲ್ಲಿಟ್ಟುಕೊಳ್ಳಲು ಜೆಡಿಎಸ್ ವರಿಷ್ಠರು ಕಸರತ್ತು ಆರಂಭಿಸಿದ್ದಾರೆ.

ಈ ನಿಟ್ಟಿನಲ್ಲಿ ಹಾಸನಾಂಬ ದೇವಾಲಯದ ದರ್ಶನದ ಜೊತೆಗೆ ಎಲ್ಲರೂ ಒಗ್ಗೂಡಿ ಊಟ ಮಾಡುವ ನೆಪದಲ್ಲಿ ಆಡಳಿತಾರೂಢ ಕಾಂಗ್ರೆಸ್'ಗೆ ಜೆಡಿಎಸ್ ನ ಎಲ್ಲಾ ಶಾಸಕರು ಒಟ್ಟಾಗಿದ್ದೇವೆಂಬ ಸಂದೇಶ ಸಾರುವ ಪ್ರಯತ್ನ ನಡೆಸಲಾಗಿದೆ.

ಹಾಸನದ ಆದಿ ದೇವತೆ ಹಾಸನಾಂಬ ದೇಗುಲಕ್ಕೆ ಪತ್ನಿ ಅನಿತಾ ಕುಮಾರಸ್ವಾಮಿ ಅವರೊಂದಿಗೆ ಭೇಟಿ ನೀಡಿ ದೇವರಿಗೆ ಪೂಜೆ ಸಲ್ಲಿಸಿ, ನಂತರ ಜಿಲ್ಲಾಡಳಿತದಿಂದ ಗೌರವ ಸ್ವೀಕರಿಸಿ ಮಾತನಾಡಿದ ಕುಮಾರಸ್ವಾಮಿಯವರು, ದೇವರಿಗೆ ಪೂಜೆ ಸಲ್ಲಿಸುವ ವೇಳೆ ಬರದ ಸಂಕಷ್ಟದಿಂದ ನೊಂದಿರುವ ನಾಡಿನ ಅನ್ನದಾತ ರೈತರಿಗೆ ಒಳ್ಳೆಯದಾಗಲಿ. ನಾಡಿನ ಎಲ್ಲ ಜನರ ಬದುಕು ಹಸನಾಗಲಿ ಎಂದು ಪ್ರಾರ್ಥಿಸಿರುವುದಾಗಿ ಹೇಳಿದರು.

ಬಡವರ, ರೈತರ, ದೀನದಲಿತರ ಸೇವೆ ಮಾಡಲು ಒಳ್ಳೆಯ ಆರೋಗ್ಯವನ್ನು ತಾಯಿ ನನಗೆ ಕರುಣಿಸಲಿ ಎಂದು ಕೇಳಿಕೊಂಡಿರುವುದಾಗಿ ತಿಳಿಸಿದರು.

ಬಳಿಕ ಮಾಧ್ಯಮದವರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ನಮ್ಮ ಪಕ್ಷದ ಶಾಸಕರ ಮೇಲೆ ಗದಾಪ್ರಹಾರ ನಡೆಯುತ್ತಿದೆ. ಹಾಗಾಗಿ ಜೆಡಿಎಸ್​ನ ಎಲ್ಲಾ ಶಾಸಕರು ಹಾಸನಾಂಬ ದರ್ಶನಕ್ಕೆ ಆಗಮಿಸಲಿದ್ದು, ಹಾಸನಾಂಬೆ ದೇವಿಯ ಪವಿತ್ರ ಕ್ಷೇತ್ರದಿಂದಲೇ ತಾವು ಒಗ್ಗಟ್ಟು ಪ್ರದರ್ಶನ ಮಾಡುವುದಾಗಿ ಇದೆ ವೇಳೆ ಘೋಷಿಸಿದರು.

ಹಾಸನಾಂಬ ದೇಗುಲಕ್ಕೆ ತಂದೆ, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರೊಡನೆ ಭೇಟಿ ನೀಡುತ್ತಿದ್ದ ಸಂದರ್ಭವನ್ನು ಹಾಗೂ ತಮ್ಮ ಅಜ್ಜಿ ಹಾಸನಾಂಬ ದೇವರ ದೀಪಕ್ಕಾಗಿ ಎಣ್ಣೆ ತಂದು ಕೊಡುತ್ತಿದ್ದ ದಿನಗಳನ್ನು ಇದೇ ವೇಳೆ ಹೆಚ್​ಡಿಕೆ ನೆನೆದರು.

ಕುಮಾರಸ್ವಾಮಿಯವರು 2 ದಿನಗಳ ಕಾರ ಹಾಸನದಲ್ಲಿ ಒಗ್ಗಟ್ಟಿನ ಪ್ರದರ್ಶನ ಕೈಗೊಂಡಿದ್ದು, ಮಂಗಳವಾರ ಕೆಲವರೊಂದಿಗೆ ಒಂದು ಸುತ್ತಿನ ಮಾತುಕತೆ ನಡೆಸಿದ್ದು, ಬುಧವಾಲ ಎಲ್ಲರೊಂದಿಗೆ ಸಭೆ ನಡೆಸಲು ನಿರ್ಧರಿಸಿದ್ದಾರೆಂದು ತಿಳಿದುಬಂದಿದೆ.

19 ಶಾಸಕರು ಒಗ್ಗಟ್ಟಾಗಿದ್ದು, ಎರಡು ದಿನಗಳ ಕಾಲ ಹಾಸನದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಸಭೆಯಲ್ಲಿ ಪಾಲ್ಗೊಳ್ಳುವ ಮುನ್ನ ಶಾಸಕರು ಬುಧವಾರವೂ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆಂದು ವರದಿಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ; ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ ಸುಪ್ರೀಂ ಕೋರ್ಟ್ ತರಾಟೆ!

SCROLL FOR NEXT