ಸಿಎಂ ಸಿದ್ದರಾಮಯ್ಯ 
ರಾಜಕೀಯ

ಪ್ರಧಾನಿ ಮೋದಿ ಸರ್ವಾಧಿಕಾರಿಯೇ? ಅವರನ್ನು ಪ್ರಶ್ನಿಸುವುದರಲ್ಲಿ ತಪ್ಪೇನಿದೆ: ಬಿಎಸ್'ವೈಗೆ ಸಿದ್ದರಾಮಯ್ಯ ಪ್ರಶ್ನೆ

ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ವಾಧಿಕಾರಿಯೇ? ಅವರನ್ನು ಪ್ರಶ್ನಿಸುವುದರಲ್ಲಿ ತಪ್ಪೇನಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಪ್ರಶ್ನಿಸಿದ್ದಾರೆ.

ಹಾಸನ: ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ವಾಧಿಕಾರಿಯೇ? ಅವರನ್ನು ಪ್ರಶ್ನಿಸುವುದರಲ್ಲಿ ತಪ್ಪೇನಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಪ್ರಶ್ನಿಸಿದ್ದಾರೆ.

ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ವಿರುದ್ಧ ದುರಹಂಕಾರದಿಂದ ಮಾತನಾಡುತ್ತಿದ್ದಾರೆ ಎಂಬ ಯಡಿಯೂರಪ್ಪ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿದರು.

ಪ್ರಧಾನಿ ಮೋದಿ ಸರ್ವಾಧಿಕಾರಿಯೇ? ಮೋದಿಯವರು ನನ್ನ ಬಗ್ಗೆ ಮಾತನಾಡಬಹುದಾ? ಮಧ್ಯಪ್ರದೇಶ ಚುನಾವಣಾ ಪ್ರಚಾರದಲ್ಲಿ ಕರ್ನಾಟಕದ ವಿಚಾರ ಮಾತಾಡೋದು ಏನಿರುತ್ತೆ?. ಚುನಾವಣಾ ಪ್ರಚಾರ ಮಾಡಬೇಕು ಅಷ್ಟೇ, ಮೋದಿಯವರಿಗೆ ನಮ್ಮ ಬಗ್ಗೆ ಭಯ‌ ಇರಬೋದೇನೋ ಎಂದು ಹೇಳಿದರು.

ಇದೇ ವೇಳೆ 'ಕೇವಲ ಶಾಸಕರನ್ನು ಸೆಳೆಯೋ‌ ಕೆಲಸ ಮಾಡುತ್ತಿದ್ದಾರೆ ಎಂಬ ಕುಮಾರಸ್ವಾಮಿ ‌ಹೇಳಿಕೆ ಕುರಿತು ಪ್ರತಿಕ್ರಿಯಿಸಿ, ಕುಮಾರಸ್ವಾಮಿ ‌ಯಾವತ್ತು ಸತ್ಯ ಹೇಳಿದ್ದಾರೆ? ಎಲ್ಲಾ ಬರೀ ಸುಳ್ಳೇ ಹೇಳುವುದು. ಅದು ಬಿಟ್ಟರೆ ಅವರಿಗೆ ಬೇರೆ ಕೆಲಸ ಇಲ್ಲ ಎಂದರು.

ಕಿಯೋನಿಕ್ಸ್ ಅಧಿಕಾರಿ ಸಂಗಪ್ಪ ಲಂಚ ಕೇಳಿದ ಆರೋಪ ವಿಚಾರದ ಬಗ್ಗೆ ಮಾತನಾಡಿ, ನಾನು ಈ ಬಗ್ಗೆ ವಿಚಾರಣೆ ಮಾಡುತ್ತೇನೆ. ಅದು ಸತ್ಯವಾಗಿದ್ದರೆ ತನಿಖೆ ಮಾಡಿಸಿ ಕ್ರಮ ಕೈಗೊಳ್ಳುತ್ತೇನೆ ಎಂದು ಭರವಸೆ ನೀಡಿದರು.

ಬಳಿಕ ಕಾಂಗ್ರೆಸ್ ಶೇಮ್ ಲೆಸ್ ಪಾರ್ಟಿ ಎಂಬ ಯತ್ನಾಳ್ ಅವರ ಹೇಳಿಕೆ ಕುರಿತು ಮಾತನಾಡಿ, ಯತ್ನಾಳ್ ಏನು ಬಹಳ ಸದ್ಗುಣ ಇರೋ ವ್ಯಕ್ತಿನಾ? ಬಿಜೆಪಿಯವರೇ ನಡವಳಿಕೆ ಸರಿ ಇಲ್ಲ ಎಂದು ನೋಟಿಸ್ ಕೊಟ್ಟಿಲ್ವಾ? ಇನ್ನು ಅವರಿಗೆ ನೋಟಿಸ್ ಕೊಟ್ಟವರ್ಯಾರು? 'ಯತ್ನಾಳ್ ಹಿಮ್​ಸೆಲ್ಫ್ ಈಸ್ ಎ ಶೇಮ್ ಲೆಸ್' ಎಂದು ಲೇವಡಿ ಮಾಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT