ಶರಣಗೌಡ ಕಂದಕೂರು 
ರಾಜಕೀಯ

ಬಿಜೆಪಿ ಜೊತೆ ಮೈತ್ರಿಗೆ ವಿರೋಧ: ಶಾಸಕ ಶರಣಗೌಡ ಕಂದಕೂರು ಅಸಮಾಧಾನ; ಜೆಡಿಎಸ್ ಶಾಸಕರ ಸಭೆಗೆ ಗೈರು

ಬುಧವಾರ ಹಾಸನದಲ್ಲಿ ಜೆಡಿಎಸ್ ಶಾಸಕರ ಮಹತ್ವದ ಸಭೆ ನಡೆಯುತ್ತಿದ್ದರೂ ಸಭೆಗೆ ಯಾದಗಿರಿಯ ಗುರುಮಟ್ಕಲ್ ಜೆಡಿಎಸ್ ಶಾಸಕ ಶರಣಗೌಡ ಕಂದಕೂರು  ಗೈರಾಗುವ ಮೂಲಕ  ವರಿಷ್ಠರಿಗೆ ಶಾಕ್ ನೀಡಿದ್ದಾರೆ.

ಯಾದಗಿರಿ: ಬುಧವಾರ ಹಾಸನದಲ್ಲಿ ಜೆಡಿಎಸ್ ಶಾಸಕರ ಮಹತ್ವದ ಸಭೆ ನಡೆಯುತ್ತಿದ್ದರೂ ಸಭೆಗೆ ಯಾದಗಿರಿಯ ಗುರುಮಟ್ಕಲ್ ಜೆಡಿಎಸ್ ಶಾಸಕ ಶರಣಗೌಡ ಕಂದಕೂರು  ಗೈರಾಗುವ ಮೂಲಕ  ವರಿಷ್ಠರಿಗೆ ಶಾಕ್ ನೀಡಿದ್ದಾರೆ.

ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್‌ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಸಭೆ ನಡೆಯುತ್ತಿದ್ದು, ಮುಂದಿನ ಲೋಕಸಭಾ ಚುನಾವಣೆಯಲ್ಲಿನ ಮೈತ್ರಿ ಕುರಿತು ಮಹತ್ವ ಪಡೆದುಕೊಂಡಿದೆ. ಆದರೆ ಬಿಜೆಪಿ-ಜೆಡಿಎಸ್ ಮೈತ್ರಿಗೆ ವಿರೋಧಿಸಿದ್ದ ಶಾಸಕ ಶರಣಗೌಡ ಕಂದಕೂರು ಮೊದಲಿನಿಂದಲೂ ಪಕ್ಷದ ಜೊತೆ ಅಂತರ ಕಾಯ್ದುಕೊಂಡಿದ್ದಾರೆ.

ಜೆಡಿಎಸ್ ಪಕ್ಷದೊಂದಿಗೆ ಅಂತರ ಕಾಯ್ದಕೊಳ್ಳುತ್ತಿರುವ ಶಾಸಕ ಶರಣಗೌಡ ಕಂದಕೂರು ಪದೇ ಪದೇ ಜೆಡಿಎಸ್ ಸಭೆಗೆ ಗೈರಾಗುತ್ತಿದ್ದಾರೆ. ಈಗಾಗಲೇ 3-4 ಬಾರಿ ಜೆಡಿಎಸ್ ಸಭೆಗೆ ಗೈರಾಗಿರುವ ಶಾಸಕ ಶರಣಗೌಡ ಕಂದಕೂರು, ಬೆಂಗಳೂರಿನಲ್ಲಿದ್ದರೂ ಇಂದಿನ ಹಾಸನದ ಶಾಸಕರ ಸಭೆಗೆ ಹಾಜರಾಗಿಲ್ಲ.

ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಶಾಸಕ ಶರಣಗೌಡ ಕಂದಕೂರು, ಬಿಜೆಪಿ ಜೊತೆ ಮೈತ್ರಿಗೆ ಈಗಲೂ ನನ್ನ ವಿರೋಧ ಇದೆ. ನನ್ನ ಹಿಂದಿನ ಹೇಳಿಕೆಗೆ ಈಗಲೂ ಬದ್ದ ಎಂದು ಹೇಳಿದ್ದಾರೆ. ಸಭೆಗೆ ಹೋಗದೇ ಇರಲು ಪಕ್ಷದ ವಿರುದ್ದ ಸಮಾಧಾನ ಅಸಮಾಧಾನ ಪ್ರಶ್ನೆ ಅಲ್ಲ. ಅನೇಕ ದಿನಗಳಿಂದ ಸಮಿತಿ ಸಭೆಗೆ ಹೋಗಿರಲಿಲ್ಲ. ಸಮಿತಿ ಸಭೆ ಇವತ್ತು ಇದೆ ಅದಕ್ಕೆ ಅಲ್ಲಿನ ಸಭೆಗೆ ಹೋಗಿಲ್ಲ ಎಂದು ತಿಳಿಸಿದರು.

ವರಿಷ್ಠರು ಸಭೆಗೆ ಆಹ್ವಾನ ನೀಡಿದ್ದರು. ನಾನು ಸಭೆಗೆ ಬರುವುದಿಲ್ಲ ಎಂದು ಹೇಳಿಲ್ಲ. ಸಮಿತಿ ಸಭೆ ಇರುವುದರಿಂದ ನಾನು ಹೋಗಲಿಲ್ಲ ಅಷ್ಟೇ ಎಂದು ತಿಳಿಸಿದರು. ಮೈತ್ರಿಗೆ ನನ್ನ ಅಸಮಾಧಾನ ಇದೆ. ಹಾಗೆಂದ ಮಾತ್ರಕ್ಕೆ ಜೆಡಿಎಸ್‌ನಿಂದ ದೂರ ಆಗುತ್ತಿಲ್ಲ. ಅಸಮಾಧಾನ ಇದ್ದರೂ ಮಾಧ್ಯಮಗಳ ಮುಂದೆ ಹೇಳಲು ಆಗುವುದಿಲ್ಲ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT