ಬಿವೈ ವಿಜಯೇಂದ್ರ 
ರಾಜಕೀಯ

ಮುಂದಿನ ವಾರ ಬಿಜೆಪಿ ಶಾಸಕಾಂಗ ಪಕ್ಷದ ಸಭೆ, ವಿಪಕ್ಷ ನಾಯಕನ ಆಯ್ಕೆ: ಬಿಜೆಪಿ ನೂತನ ಅಧ್ಯಕ್ಷ ಬಿವೈ ವಿಜಯೇಂದ್ರ

ರಾಜ್ಯದಲ್ಲಿ ಮುಂದಿನ ವಾರ ವಿರೋಧ ಪಕ್ಷದ ನಾಯಕನನ್ನು ಅಂತಿಮಗೊಳಿಸಲಾಗುವುದು ಎಂದು ನೂತನವಾಗಿ ನೇಮಕಗೊಂಡ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಶುಕ್ರವಾರ ಘೋಷಿಸಿದರು.

ಬೆಂಗಳೂರು: ರಾಜ್ಯದಲ್ಲಿ ಮುಂದಿನ ವಾರ ವಿರೋಧ ಪಕ್ಷದ ನಾಯಕನನ್ನು ಅಂತಿಮಗೊಳಿಸಲಾಗುವುದು ಎಂದು ನೂತನವಾಗಿ ನೇಮಕಗೊಂಡ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಶುಕ್ರವಾರ ಘೋಷಿಸಿದರು.

ಶುಕ್ರವಾರ (ನವೆಂಬರ್ 17) ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆಯಲಾಗುವುದು. ದೆಹಲಿಯಿಂದ ವೀಕ್ಷಕರು ಬರುತ್ತಾರೆ. ಪಕ್ಷದ ಎಲ್ಲಾ ಶಾಸಕರು ತಮ್ಮ ಅಭಿಪ್ರಾಯಗಳನ್ನು ನೀಡಲಿದ್ದಾರೆ ಮತ್ತು ವಿರೋಧ ಪಕ್ಷದ ನಾಯಕನನ್ನು ಅಂತಿಮಗೊಳಿಸಲಾಗುವುದು ಎಂದು ಸುದ್ದಿಗಾರರಿಗೆ ತಿಳಿಸಿದರು.

'ಈ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರೊಂದಿಗೆ ಚರ್ಚಿಸಿದ್ದೇನೆ. ಬಿಜೆಪಿ ರಾಜ್ಯಾಧ್ಯಕ್ಷನಾಗಿ ನಾನು ನೇಮಕಗೊಂಡ ನಂತರ (ಶುಕ್ರವಾರ ಸಂಜೆ) ನಾವು ಈ ಬಗ್ಗೆ ಅವರೊಂದಿಗೆ ಮಾತನಾಡಿದ್ದೇನೆ' ಎಂದು ಅವರು ಹೇಳಿದರು.

ಕಾಂಗ್ರೆಸ್ ಅಧಿಕಾರಕ್ಕೆ ಬಂದ ಸುಮಾರು ಆರು ತಿಂಗಳಿನಿಂದ ಬಿಜೆಪಿಗೆ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಿಲ್ಲ. ಇದು ಪಕ್ಷದ ಮುಖಂಡರಿಗೆ ಮುಜುಗರ ಉಂಟು ಮಾಡಿದೆ. 

'ನಾವು ಅದರ ಬಗ್ಗೆ ಮಾತನಾಡಿ ಮಾತನಾಡಿ ಸುಸ್ತಾಗಿದ್ದೇವೆ' ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಈ ವಾರದ ಆರಂಭದಲ್ಲಿ ಹೇಳಿದ್ದು, ಬಿಜೆಪಿಗೆ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಕಾಂಗ್ರೆಸ್ ಪದೇ ಪದೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸುತ್ತಿದೆ.

ಬಿಜೆಪಿ ಜಾತಿ ಲೆಕ್ಕಾಚಾರದಲ್ಲಿ ವಿರೋಧ ಪಕ್ಷದ ನಾಯಕನ ಆಯ್ಕೆಗೆ ಮುಂದಾಗಿದೆ ಎಂಬ ಊಹಾಪೋಹಗಳು ಹರಡಿವೆ. ಲಿಂಗಾಯತ ಸಮುದಾಯದವರು ರಾಜ್ಯಾಧ್ಯಕ್ಷರಾಗಿ ನೇಮಕಗೊಂಡರೆ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಒಕ್ಕಲಿಗ ಅಥವಾ ಒಬಿಸಿ ಆಗಿರಬಹುದು ಎನ್ನಲಾಗಿದೆ.

ಮೂಲಗಳ ಪ್ರಕಾರ, ಮಾಜಿ ಉಪಮುಖ್ಯಮಂತ್ರಿ ಆರ್ ಅಶೋಕ ಮತ್ತು ಡಾ. ಸಿಎನ್ ಅಶ್ವತ್ಥ್ ನಾರಾಯಣ ಅವರು ಒಕ್ಕಲಿಗ ಸಮುದಾಯದಿಂದ ಮುಂಚೂಣಿಯಲ್ಲಿದ್ದಾರೆ. ಬಿಜೆಪಿ ಒಬಿಸಿಯಿಂದ ನಾಯಕನ ಆಯ್ಕೆಗೆ ನಿರ್ಧರಿಸಿದರೆ ಮಾಜಿ ಸಚಿವ ವಿ ಸುನೀಲ್ ಕುಮಾರ್ ಅವರಿಗೆ ನೀಡಬಹುದು. 

'ಬ್ರಾಹ್ಮಣ ಸಮುದಾಯಕ್ಕೆ ಸೇರಿದ ಹಿರಿಯ ನಾಯಕ ಎಸ್ ಸುರೇಶ್ ಕುಮಾರ್ ಅವರ ಶ್ರೀಮಂತ ಶಾಸಕಾಂಗ ಅನುಭವವನ್ನು ಪರಿಗಣಿಸುವ ಸಾಧ್ಯತೆಯನ್ನು ನಾವು ತಳ್ಳಿಹಾಕಲು ಸಾಧ್ಯವಿಲ್ಲ' ಎಂದು ಮೂಲವೊಂದು ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT