ಮುನಿರತ್ನ - ಡಿಕೆ ಶಿವಕುಮಾರ್ - ಡಿಕೆ ಸುರೇಶ್ 
ರಾಜಕೀಯ

'ಜೈ ಡಿಕೆ ಸುರೇಶ್' ಎಂದು ಬೆಂಬಲಿಗರ ಘೋಷಣೆ: ಡಿಕೆ ಸಹೋದರರು, ಶಾಸಕ ಮುನಿರತ್ನ ನಡುವಿನ ಬಿಕ್ಕಟ್ಟು ಮುನ್ನೆಲೆಗೆ!

ದುಷ್ಕರ್ಮಿಗಳು ಪಾರ್ಕ್ ಮಾಡಿದ್ದ 30ಕ್ಕೂ ಹೆಚ್ಚು ವಾಹನಗಳ ಗ್ಲಾಸ್‌ಗಳಿಗೆ ಹಾನಿಯುಂಟು ಮಾಡಿದ್ದು, ಶುಕ್ರವಾರ ರಾಜರಾಜೇಶ್ವರಿ ನಗರ ಕ್ಷೇತ್ರದ ಲಗ್ಗೆರೆಗೆ ಶಾಸಕ ಮುನಿರತ್ನ ಭೇಟಿ ನೀಡಿದ್ದಾರೆ. ಈ ವೇಳೆ, ಡಿಕೆ ಸಹೋದರರು ಮತ್ತು ಮುನಿರತ್ನ ನಡುವಿನ ಮುಸುಕಿನ ಗುದ್ದಾಟ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ.

ಬೆಂಗಳೂರು: ದುಷ್ಕರ್ಮಿಗಳು ಪಾರ್ಕ್ ಮಾಡಿದ್ದ 30ಕ್ಕೂ ಹೆಚ್ಚು ವಾಹನಗಳ ಗ್ಲಾಸ್‌ಗಳಿಗೆ ಹಾನಿಯುಂಟು ಮಾಡಿದ್ದು, ಶುಕ್ರವಾರ ರಾಜರಾಜೇಶ್ವರಿ ನಗರ ಕ್ಷೇತ್ರದ ಲಗ್ಗೆರೆಗೆ ಶಾಸಕ ಮುನಿರತ್ನ ಭೇಟಿ ನೀಡಿದ್ದಾರೆ. ಈ ವೇಳೆ, ಡಿಕೆ ಸಹೋದರರು ಮತ್ತು ಮುನಿರತ್ನ ನಡುವಿನ ಮುಸುಕಿನ ಗುದ್ದಾಟ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ.

ಶಾಸಕರ ಭೇಟಿ ವೇಳೆ ಅಲ್ಲಿ ನೆರೆದಿದ್ದವರು ಮುನಿರತ್ನ ಅವರನ್ನು 'ಜೈ ಡಿಕೆ ಸುರೇಶ್ ಎಂಪಿ!' ಎಂಬ ಘೋಷಣೆಗಳೊಂದಿಗೆ ಸ್ವಾಗತಿಸಿದರು. ಇದರಿಂದ ಮುನಿರತ್ನ ಕೋಪಗೊಂಡರು. 

ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಲು ಪೊಲೀಸರೇ ಕಾರಣ. ಇಲ್ಲಿ ಗಾಂಜಾ ಮಾರಾಟ ಮಾಡಲಾಗುತ್ತಿದ್ದು, ಪೊಲೀಸ್ ಸಿಬ್ಬಂದಿ ಸರಿಯಾಗಿ ಕೆಲಸ ಮಾಡುತ್ತಿಲ್ಲ. ವಾಹನಗಳ ಮೇಲಿನ ದಾಳಿಯ ಬಗ್ಗೆ ಪರಿಶೀಲಿಸಲು ತೆರಳಿದಾಗ, ಮಾಧ್ಯಮವರು ಅಲ್ಲಿದ್ದರು. ಆದರೆ, ಪೊಲೀಸರೇ ಕಾಣಿಸಲಿಲ್ಲ ಎಂದು ಟಿಎನ್‌ಐಇಗೆ ತಿಳಿಸಿದರು. 

ಕಳೆದ ಎರಡು ತಿಂಗಳ ಅವಧಿಯಲ್ಲಿ ಎರಡನೇ ಬಾರಿಗೆ ಡಿಕೆಶಿ ಸಹೋದರರ ವಿರುದ್ಧ ಶಾಸಕ ಮುನಿರತ್ನ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸುಮಾರು ಒಂದು ತಿಂಗಳ ಹಿಂದೆ, ತಮ್ಮ ಕ್ಷೇತ್ರದ ಯೋಜನೆಗಳಿಗೆ ಮೀಸಲಿಟ್ಟ ಹಣವನ್ನು ಸರ್ಕಾರದಿಂದ ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿ ವಿಧಾನಸೌಧದ ಬಳಿಯ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು. ಸರ್ಕಾರದ ವಿರುದ್ಧ ವಿಶೇಷವಾಗಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಸಂಸದ ಡಿಕೆ ಸುರೇಶ್ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಆಗ ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಕೆ ಶಿವಕುಮಾರ್ ಅವರು ಮುನಿರತ್ನ ಅವರಿಗೆ ಲಿಖಿತ ದೂರು ನೀಡುವಂತೆ ತಿಳಿಸಿದ್ದರು.

ಪರಾಜಿತ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಐಎಎಸ್ ಅಧಿಕಾರಿ ಡಿಕೆ ರವಿ ಅವರ ಪತ್ನಿ ಕುಸುಮಾ ಹನುಮಂತರಾಯ ಅವರು ಡಿಕೆ ಸಹೋದರರ ನಿಕಟವರ್ತಿಯಾಗಿದ್ದು, ತಮ್ಮ ಕ್ಷೇತ್ರದಲ್ಲಿ ತನಗಿಂತ ಅವರ ಮಾತಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ ಎಂದು ಮುನಿರತ್ನ ಅವರು ಪ್ರತಿಭಟನೆ ವೇಳೆ ದೂರಿದ್ದರು.

ಈ ಆರೋಪದ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕಾನೂನು ಮತ್ತು ಸುವ್ಯವಸ್ಥೆಯ ಹೆಚ್ಚುವರಿ ಆಯುಕ್ತ ಸುರೇಶ್, 'ಗಾಂಜಾ ಮತ್ತು ಡ್ರಗ್ಸ್ ದಂಧೆ ವಿರುದ್ಧ ನಿರಂತರ ಕಾರ್ಯಾಚರಣೆ ನಡೆಯುತ್ತಿದೆ. ಗುರುವಾರವೂ ದೊಡ್ಡ ಪ್ರಮಾಣದ ಡ್ರಗ್ಸ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಕಾರುಗಳ ಹಾನಿಗೆ ಸಂಬಂಧಿಸಿದಂತೆ, ನಾವು ಈ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸುತ್ತೇವೆ ಮತ್ತು ಪುನರಾವರ್ತಿತ ಅಪರಾಧಿಗಳಿದ್ದರೆ, ಕಾನೂನಿನ ಕಠಿಣ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸುತ್ತೇವೆ' ಎಂದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT