ಕಾಂಗ್ರೆಸ್ ಸೇರ್ಪಡೆಯಾದ ಗೌರಿ ಶಂಕರ್ 
ರಾಜಕೀಯ

ದಳಪತಿಗಳಿಗೆ ಬಿಗ್ ಶಾಕ್: ಜೆಡಿಎಸ್ ನ ಇಬ್ಬರು ಮಾಜಿ ಶಾಸಕರು ಕಾಂಗ್ರೆಸ್ ಸೇರ್ಪಡೆ!

ತುಮಕೂರು ಜಿಲ್ಲೆ ಮಧುಗಿರಿ ಕ್ಷೇತ್ರದ ಮಾಜಿ ಶಾಸಕ ಡಿ.ಸಿ ಗೌರಿಶಂಕರ್ ಮತ್ತು ಬೆಂಗಳೂರು ದಾಸರಹಳ್ಳಿಯ ಮಾಜಿ ಶಾಸಕ ಮಂಜುನಾಥ್ ಅವರು ಜೆಡಿಎಸ್‌ ತೊರೆದು  ಕಾಂಗ್ರೆಸ್ ಸೇರಿದ್ದಾರೆ.

ಬೆಂಗಳೂರು:  ಸಿಎಂ ಸಿದ್ದರಾಮಯ್ಯ, DCM ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಮಾಜಿ ಶಾಸಕರಾದ ಮಂಜುನಾಥ್​, ಗೌರಿ ಶಂಕರ್​ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಬೆಂಬಲಿಗರ ಜೊತೆ ಮಂಜುನಾಥ್​, ಗೌರಿಶಂಕರ್ ಕಾಂಗ್ರೆಸ್ ಸೇರಿದರು. ಗೌರಿಶಂಕರ್ ಸೇರ್ಪಡೆ ಕಾರ್ಯಕ್ರಮಕ್ಕೆ ತುಮಕೂರು ನಾಯಕರೇ ಗೈರಾಗಿದ್ದಾರೆ

ಸಿದ್ದರಾಮಯ್ಯ ಅವರ ಕಾಲು ಮುಟ್ಟಿ ಆಶೀರ್ವಾದ ಪಡೆದ ಮಾಜಿ ಶಾಸಕರಾದ ಗೌರಿ ಶಂಕರ್ ಮತ್ತು ಮಂಜುನಾಥ್ 2018ರಲ್ಲಿ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿದ್ದ ಪ್ರಸಾದ್ ಗೌಡ ಕಾಂಗ್ರೆಸ್ ಸೇರ್ಪಡೆಯಾದರು.

ಡಿ.ಸಿ. ಗೌರಿಶಂಕರ್‌ ಅವರು ಜೆಡಿಎಸ್‌ ಬಿಟ್ಟು ಕಾಂಗ್ರೆಸ್‌ ಸೇರುವಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್‌ ಮತ್ತು ಕುಣಿಗಲ್‌ ಶಾಸಕ ಡಾ. ರಂಗನಾಥ್‌ ಅವರು ಪ್ರಧಾನ ಪಾತ್ರ ವಹಿಸಿದ್ದಾರೆ ಎನ್ನಲಾಗಿದೆ. ಇವರಿಗೆ ಗೃಹ ಸಚಿವ ಪರಮೇಶ್ವರ್‌ ಅವರ ಬೆಂಬಲವೂ ಇತ್ತು. ಆದರೆ, ಸಹಕಾರ ಸಚಿವರಾಗಿರುವ ಕೆ.ಎನ್‌. ರಾಜಣ್ಣ ಅವರು ಡಿ.ಸಿ. ಗೌರಿಶಂಕರ್‌ ಅವರ ಪಕ್ಷ ಸೇರ್ಪಡೆಯ ಬಗ್ಗೆ ತನಗೆ ಮಾಹಿತಿ ಇಲ್ಲ ಎಂದಿದ್ದರು.

ಬಿಜೆಪಿ-ಜೆಡಿಎಸ್‌ ಮೈತ್ರಿಯಾದ ಬಳಿಕ ಜೆಡಿಎಸ್‌ ನಾಯಕರು ಪಕ್ಷ ಬಿಡುತ್ತಿರುವ ವೇಗ ಹೆಚ್ಚಾಗಿದೆ. ಇದೀಗ ಲೋಕಸಭಾ ಚುನಾವಣೆಯ ಸಿದ್ಧತೆ ಹೊತ್ತಲ್ಲಿ ತುಮಕೂರಿನಲ್ಲಿ ಜೆಡಿಎಸ್‌ಗೆ ಬಿಗ್‌ ಶಾಕ್‌ ಎದುರಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT