ಸಿದ್ದರಾಮಯ್ಯ 
ರಾಜಕೀಯ

ಜೆಡಿಎಸ್, ಬಿಜೆಪಿ ಜೊತೆ ವಿಲೀನವಾದರೆ ಆಶ್ಚರ್ಯವಿಲ್ಲ: ಸಿಎಂ ಸಿದ್ದರಾಮಯ್ಯ

ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಮುಂದಿನ ದಿನಗಳಲ್ಲಿ ಕೇಸರಿ ಪಕ್ಷದೊಂದಿಗೆ ವಿಲೀನಗೊಂಡರೂ ಆಶ್ಚರ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದಾರೆ.

ಬೆಂಗಳೂರು: ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಮುಂದಿನ ದಿನಗಳಲ್ಲಿ ಕೇಸರಿ ಪಕ್ಷದೊಂದಿಗೆ ವಿಲೀನಗೊಂಡರೂ ಆಶ್ಚರ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದಾರೆ.

ಇಂದು ಕೆಪಿಸಿಸಿ ಕಚೇರಿಯಲ್ಲಿ ಜೆಡಿಎಸ್ ಮಾಜಿ ಶಾಸಕರಾದ ಡಿಸಿ ಗೌರಿಶಂಕರ್ ಮತ್ತು ದಾಸರಹಳ್ಳಿ ಮಂಜುನಾಥ್ ಅವರು ಕಾಂಗ್ರೆಸ್ ಸೇರಿದರು. ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಜೆಡಿಎಸ್, ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡ ನಂತರ "ಕೋಮುವಾದಿ" ಪಕ್ಷವಾಗಿದೆ. ಹೀಗಾಗಿ ಅದರ ಹೆಸರಿನಿಂದ 'ಸೆಕ್ಯುಲರ್' ಪದವನ್ನು ತೆಗೆದುಹಾಕಬೇಕು ಎಂದು ಒತ್ತಾಯಿಸಿದರು.

“ಮುಂದಿನ ದಿನಗಳಲ್ಲಿ ದೇಶದಲ್ಲಿ ರಾಜಕೀಯ ಧ್ರುವೀಕರಣ ಮತ್ತು ಮತಗಳ ಧ್ರುವೀಕರಣ ನಡೆಯಲಿದೆ, ಒಂದು ಕಡೆ ಕೋಮುವಾದಿ ಶಕ್ತಿಗಳು ಮತ್ತು ಇನ್ನೊಂದು ಕಡೆ ಜಾತ್ಯತೀತ ಶಕ್ತಿಗಳು. ಬಿಜೆಪಿ ಎಂದಿಗೂ ಹಿಂದುತ್ವ ಮತ್ತು ಹಿಂದೂ ರಾಷ್ಟ್ರ ರಚಿಸುವ ಅವರ ಯೋಜನೆಯಿಂದ ಹೊರಬರುವುದಿಲ್ಲ. ದೇವೇಗೌಡ ಮತ್ತು ಅವರ ಕುಟುಂಬವೂ ಬಿಜೆಪಿಯೊಂದಿಗೆ ಸೇರಿಕೊಂಡಿದೆ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಜೆಡಿಎಸ್ ಒಂದು ರಾಜಕೀಯ ಪಕ್ಷವಲ್ಲ. ಅದು ದೇವೇಗೌಡ ಮತ್ತು ಅವರ ಕುಟುಂಬದ ಪಕ್ಷ. ನಾಳೆ ಜೆಡಿಎಸ್ ಬಿಜೆಪಿಯೊಂದಿಗೆ ವಿಲೀನವಾದರೆ ಆಶ್ಚರ್ಯವಿಲ್ಲ.. ದೇವೇಗೌಡರು ಇರುವವರೆಗೂ ಪ್ರತ್ಯೇಕ ರಾಜಕೀಯ ಪಕ್ಷವಾಗಿ ಉಳಿಯುತ್ತದೆ. ನಂತರ ಬಿಜೆಪಿಯೊಂದಿಗೆ ವಿಲೀನವಾಗುತ್ತದೆ ಎಂದರು.

ಬಿಜೆಪಿ ಅವರಿಗಿಂತ ಜೆಡಿಎಸ್ ಕುಮಾರಸ್ವಾಮಿನೇ ಹೆಚ್ಚು ಮಾತನಾಡ್ತಾರೆ. ಕುಮಾರಸ್ವಾಮಿನಾ ಬಿಜೆಪಿ ಅವರು ನಮ್ಮ ಮೇಲೆ ಛೂ ಬಿಟ್ಟಿದ್ದಾರೆ. ನೀವು ಏನೇ ಕುತಂತ್ರ ಮಾಡಿದರೂ ನಾವು ಚುನಾವಣೆಯಲ್ಲಿ ನಮ್ಮ ಗುರಿ ಸಾಧಿಸಿಯೇ ಸಾಧಿಸುತ್ತೇವೆ ಎಂದು ಸಿಎಂ ವಿಶ್ವಾಸ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ