ಜಮೀರ್ ಅಹ್ಮದ್ ಖಾನ್ 
ರಾಜಕೀಯ

ಕಾಂಗ್ರೆಸ್ ಪಕ್ಷ ಮುಸ್ಲಿಂ ಸಮಾಜಕ್ಕೆ ಕೊಟ್ಟಿರುವ ಗೌರವದ ಬಗ್ಗೆ ನಾನು ಮಾತನಾಡಿದ್ದು: ಸಚಿವ ಜಮೀರ್ ಸ್ಪಷ್ಟನೆ

ಕಾಂಗ್ರೆಸ್  ಪಕ್ಷ ಮುಸ್ಲಿಂ ಸಮಾಜಕ್ಕೆ ಕೊಟ್ಟಿರುವ ಗೌರವದ ಬಗ್ಗೆ ನಾನು ಮಾತನಾಡಿದ್ದು ಎಂದು ತೆಲಂಗಾಣ ವಿಧಾನಸಭೆ ಚುನಾವಣೆ ಪ್ರಚಾರದ ವೇಳೆ ಆಡಿದ್ದ ಮಾತು ವಿವಾದವಾಗುತ್ತಿದ್ದಂತೆ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಖಾತೆಯ ಸಚಿವ ಜಮೀರ್‌ ಅಹಮದ್‌ ಖಾನ್‌ ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರು: ಕಾಂಗ್ರೆಸ್  ಪಕ್ಷ ಮುಸ್ಲಿಂ ಸಮಾಜಕ್ಕೆ ಕೊಟ್ಟಿರುವ ಗೌರವದ ಬಗ್ಗೆ ನಾನು ಮಾತನಾಡಿದ್ದು ಎಂದು ತೆಲಂಗಾಣ ವಿಧಾನಸಭೆ ಚುನಾವಣೆ ಪ್ರಚಾರದ ವೇಳೆ ಆಡಿದ್ದ ಮಾತು ವಿವಾದವಾಗುತ್ತಿದ್ದಂತೆ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಖಾತೆಯ ಸಚಿವ ಜಮೀರ್‌ ಅಹಮದ್‌ ಖಾನ್‌ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಇಂದು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ತೆಲಂಗಾಣ ವಿಧಾನ ಸಭೆ ಚುನಾವಣೆ ಸ್ಟಾರ್ ಪ್ರಚಾರಕನಾದ ನಾನು ಹೈದರಾಬಾದ್ ನಲ್ಲಿ ಯಾವುದೇ ವ್ಯಕ್ತಿ ಅಥವಾ ಪಕ್ಷದ ಶಾಸಕರ ಬಗ್ಗೆ ಅಗೌರವವಾಗಿ ಮಾತನಾಡಿಲ್ಲ. ಕರ್ನಾಟಕದಲ್ಲಿ ಮುಸ್ಲಿಂ ಸಮುದಾಯಕ್ಕೆ ಕಾಂಗ್ರೆಸ್ ಅತ್ಯುನ್ನತ ಗೌರವ ನೀಡಿದೆ. ಆ ವಿಚಾರವನ್ನು ಅಲ್ಲಿ ಪ್ರಸ್ತಾಪ ಮಾಡಿದ್ದೇನೆ ಎಂದು ತಿಳಿಸಿದ್ದಾರೆ.

ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ ಸ್ಪೀಕರ್ ಸ್ಥಾನ ಮುಸ್ಲಿಂ ಶಾಸಕರಿಗೆ ನೀಡಿದೆ. ವಿಧಾನಸಭೆಯಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಸೇರಿ ನಾವೆಲ್ಲರೂ ಅವರನ್ನು ಸನ್ಮಾನ್ಯ ಸಭಾಧ್ಯಕ್ಷರೇ ಎಂದು ಕರೆಯುತ್ತೇವೆ. ಅಷ್ಟೊಂದು ಉನ್ನತ ಹುದ್ದೆ ಏರುವ ಅವಕಾಶ ನೀಡಲಾಗಿದೆ ಎಂದು ಹೇಳಿದ್ದೆ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿ ಹಲವರು ನನ್ನ ಮಾತು ತಪ್ಪಾಗಿ ಅರ್ಥೈಸಿಕೊಂಡು ವಿವಾದದ ಸ್ವರೂಪ ನೀಡುತ್ತಿದ್ದಾರೆ. ನಾನು ಕಾಂಗ್ರೆಸ್ ಪಕ್ಷ ಮುಸ್ಲಿಂ ಸಮುದಾಯಕ್ಕೆ ಎರಡು ಸಚಿವ ಸ್ಥಾನ, ಪರಿಷತ್ ನಲ್ಲಿ ಮುಖ್ಯ ಸಚೇತಕ, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ, ಎಲ್ಲದಕ್ಕಿಂತ ಹೆಚ್ಚಾಗಿ ಸ್ಪೀಕರ್ ಸ್ಥಾನ ನೀಡಿದೆ ಎಂದಷ್ಟೇ ಹೇಳಿದ್ದೇನೆ ಎಂದು ಮತ್ತೊಮ್ಮೆ ಸ್ಪಷ್ಟ ಪಡಿಸುತ್ತೇನೆ. ಕಾಂಗ್ರೆಸ್ ನಮ್ಮ ಸಮಾಜಕ್ಕೆ ನೀಡಿರುವ ಗೌರವ ಸ್ಮರಿಸುವುದು ತಪ್ಪೇ ಎಂದು ಕೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?