ಬಸನಗೌಡ ಪಾಟೀಲ್ ಯತ್ನಾಳ್-ರಮೇಶ್ ಜಾರಕಿಹೊಳಿ 
ರಾಜಕೀಯ

ಶಾಸಕಾಂಗ ಪಕ್ಷ ಸಭೆಗೆ ಮುನ್ನ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟ: ಸಭೆಯಿಂದ ಹೊರನಡೆದ ಯತ್ನಾಳ್, ಜಾರಕಿಹೊಳಿ!

ರಾಜ್ಯ ಬಿಜೆಪಿ ಅಧ್ಯಕ್ಷರನ್ನಾಗಿ ಬಿ ವೈ ವಿಜಯೇಂದ್ರ ಅವರ ಆಯ್ಕೆ ಬಗ್ಗೆ ಇಂದು ಶುಕ್ರವಾರ ಬೆಳಗ್ಗೆ ಕಟುವಾಗಿ ಟೀಕಿಸಿದ್ದ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಸಿಟ್ಟು ಶಮನವಾದಂತೆ ಕಂಡುಬರುತ್ತಿಲ್ಲ. ವಿಜಯೇಂದ್ರ ಆಯ್ಕೆ ಬಗ್ಗೆ ಇಷ್ಟು ದಿನ ಒಳಗೊಳಗೇ ಕುದಿಯುತ್ತಿದ್ದ ಯತ್ನಾಳ್ ಅವರ ಆಕ್ರೋಶ ಇಂದು ಮಾಧ್ಯಮಗಳ ಮುಂದೆ ಸ್ಫೋಟಗೊಂಡವು. 

ಬೆಂಗಳೂರು: ರಾಜ್ಯ ಬಿಜೆಪಿ ಅಧ್ಯಕ್ಷರನ್ನಾಗಿ ಬಿ ವೈ ವಿಜಯೇಂದ್ರ ಅವರ ಆಯ್ಕೆ ಬಗ್ಗೆ ಇಂದು ಶುಕ್ರವಾರ ಬೆಳಗ್ಗೆ ಕಟುವಾಗಿ ಟೀಕಿಸಿದ್ದ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಸಿಟ್ಟು ಶಮನವಾದಂತೆ ಕಂಡುಬರುತ್ತಿಲ್ಲ. ವಿಜಯೇಂದ್ರ ಆಯ್ಕೆ ಬಗ್ಗೆ ಇಷ್ಟು ದಿನ ಒಳಗೊಳಗೇ ಕುದಿಯುತ್ತಿದ್ದ ಯತ್ನಾಳ್ ಅವರ ಆಕ್ರೋಶ ಇಂದು ಮಾಧ್ಯಮಗಳ ಮುಂದೆ ಸ್ಫೋಟಗೊಂಡವು. 

ಬೆಂಗಳೂರಿನ ಖಾಸಗಿ ಹೊಟೇಲ್ ನಲ್ಲಿ ಇನ್ನು ಕೆಲವೇ ಹೊತ್ತಿನಲ್ಲಿ ಶಾಸಕಾಂಗ ಪಕ್ಷದ ಸಭೆ ಆರಂಭವಾಗಲಿದೆ. ಅದರಲ್ಲಿ  ಭಾಗವಹಿಸದೇ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ರಮೇಶ್ ಜಾರಕಿಹೊಳಿಯವರು ಏಕಾಏಕಿ ಹೊರನಡೆದು ಕಾರನ್ನೇರಿ ಹೋಗುತ್ತಿರುವುದು ಕಂಡುಬಂತು.

ಬಸನಗೌಡ ಅವರನ್ನು ಮಾಧ್ಯಮ ಪ್ರತಿನಿಧಿಗಳು ಪ್ರಶ್ನಿಸಿದಾಗ ಚಹಾ ಕುಡಿಯಲು ಹೊರಹೋಗುತ್ತಿದ್ದೇನೆ, ಇದು ಬಡವರು ಚಹಾ ಕುಡಿಯುವ ಸ್ಥಳವಲ್ಲ ಎಂದಿದ್ದಾರೆ. ರಮೇಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಲಿಲ್ಲ. ಇವರ ಜೊತೆ ಆರಂಭದಲ್ಲಿ ಹೊಟೇಲ್ ನಿಂದ ಹೊರಬಂದಿದ್ದ ಅರವಿಂದ ಬೆಲ್ಲದ್ ನಂತರ ಒಳಹೋಗಿದ್ದಾರೆ.

ಅಂದರೆ ಬಸನಗೌಡ ಪಾಟೀಲ್ ಯತ್ನಾಳ್ ಅವರ ಸಿಟ್ಟು ಶಮನವಾಗಿಲ್ಲ, ವಿರೋಧ ಪಕ್ಷದ ನಾಯಕನ ಆಯ್ಕೆಯಲ್ಲಿಯೂ ಅವರ ಒಮ್ಮತವಿಲ್ಲ ಎಂಬುದು ಕಂಡುಬರುತ್ತಿದೆ. ಶಾಸಕಾಂಗ ಪಕ್ಷದ ಸಭೆಗೆ ಮುನ್ನ ಬೆಂಗಳೂರಿನಲ್ಲಿ ಇದೀಗ ತಾನೇ ಹಿರಿಯ ನಾಯಕರ ಸಭೆ ನಡೆದಿದೆ, ಅಲ್ಲಿ ವಿರೋಧ ಪಕ್ಷದ ನಾಯಕನ ಆಯ್ಕೆ ಬಗ್ಗೆ ಚರ್ಚೆಯಾಗಿದೆ. ಹೈಕಮಾಂಡ್ ವೀಕ್ಷಕರ ಸಭೆಯಲ್ಲಿ ಯಡಿಯೂರಪ್ಪ ಬಣ ಮೇಲುಗೈ ಸಾಧಿಸಿದ್ದು ಅವರ ಸಿಟ್ಟಿಗೆ ಕಾರಣ ಎನ್ನಲಾಗುತ್ತಿದೆ. 

ಆರ್ ಅಶೋಕ್ ಗೆ ವಿರೋಧ ಪಕ್ಷ ನಾಯಕನ ಪಟ್ಟ?: ಇನ್ನು ಇಷ್ಟು ದಿನ ನೆನೆಗುದಿಗೆ ಬಿದ್ದಿದ್ದ ವಿಧಾನಸಭೆ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಆರ್ ಅಶೋಕ್ ಅವರ ಹೆಸರು ಅಂತಿಮವಾಗಿ ಎಂದು ಹೇಳಲಾಗುತ್ತಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಭೀಕರ ಅಪಘಾತ: ನಿಯಂತ್ರಣ ತಪ್ಪಿ ಡಿವೈಡರ್‌ ದಾಟಿ SUVಗೆ ಕಾರು ಡಿಕ್ಕಿ, ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸೇರಿ 6 ಮಂದಿಗೆ ಗಾಯ..!

ಇರಾನ್ ಉಸಿರುಗಟ್ಟಿಸಲು ಟ್ರಂಪ್ ಮಾಸ್ಟರ್ ಪ್ಲ್ಯಾನ್: ಆರ್ಥಿಕ 'ಡಿ-ಡೇ’ ಘೋಷಣೆ, ಅಮೆರಿಕ ಹೊಸ ನಿರ್ಬಂಧದಿಂದ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಹೆಚ್ಚಿದ ಆತಂಕ..!

ರಾಹುಲ್ ಗಾಂಧಿ ನಿಲುವಿಗೆ ಉಲ್ಟಾ ಹೊಡೆದರೇ ಡಿಕೆಶಿ? CM ನಿವಾಸಕ್ಕೆ ಅದಾನಿ ಭೇಟಿ; ಕೈ ಪಾಳಯದಲ್ಲಿ ಭುಗಿಲೆದ್ದ ಅಸಮಾಧಾನ..!

KPSC ಹಗರಣ: IAS ಅಧಿಕಾರಿ ಗಂಗ್ವಾರ್ ಮನೆ ಮೇಲೆ ED ದಾಳಿ; ಗೇಟ್ ಲಾಕ್ ಮಾಡಿ ಸೆಕ್ಯೂರಿಟಿ ಹೈಡ್ರಾಮಾ, ಕೀ ಮೇಕರ್ ಕರೆಯಿಸಿ ಬಾಗಿಲು ಮುರಿದ ಅಧಿಕಾರಿಗಳು..!

Operation Sindoorನಲ್ಲಿ ಧ್ವಂಸವಾಗಿದ್ದ ಜೈಶ್ ನೆಲೆ ಮರುನಿರ್ಮಾಣ! ಪಾಕ್‌ ಸರ್ಕಾರದಿಂದ 25 ಕೋಟಿ ನೆರವು!